ದೇಶದಲ್ಲಿ ಕೈಗಾರಿಕಾ ಬೆಳವಣಿಗೆ ತಡೆಗೆ ಟ್ರೇಡ್ ಯೂನಿಯನ್ ಸಿದ್ಧಾಂತ ಕಾರಣ: ಸುಪ್ರೀಂ ಕೋರ್ಟ್

Date:

ದೇಶದಲ್ಲಿ ಕೈಗಾರಿಕಾ ಬೆಳವಣಿಗೆಯನ್ನು ತಡೆಯಲು ಟ್ರೇಡ್ ಯೂನಿಯನ್ ಸಿದ್ಧಾಂತ ಕಾರಣವಾಗಿದೆ. ಕೈಗಾರಿಕೆಗಳು ಮುಚ್ಚಲು ಟ್ರೇಡ್ ಯೂನಿಯನ್ ನಾಯಕರು ಹೆಚ್ಚಾಗಿ ಕಾರಣರಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

- Advertisement -

ಅಸ್ತಿತ್ವದಲ್ಲಿರುವ ಕಾನೂನುಗಳನ್ನು ತಿದ್ದುಪಡಿ ಮಾಡಿ, ಮನೆ ಕೆಲಸದ ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿ ಮಾಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಪಿಐಎಲ್‌ ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಾಧೀಶ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠ ನಿರಾಕರಿಸಿದೆ. ಇದೇ ವೇಳೆ, ಟ್ರೇಡ್ ಯೂನಿಯನ್‌ಗಳ ಕುರಿತು ನ್ಯಾಯಾಧೀಶರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ದೇಶದಲ್ಲಿ ಕೈಗಾರಿಕಾ ಬೆಳವಣಿಗೆಯನ್ನು ತಡೆಯಲು ಟ್ರೇಡ್ ಯೂನಿಯನ್ ಸಿದ್ಧಾಂತವು ಹೆಚ್ಚು ಕಾರಣವಾಗಿದೆ. ಟ್ರೇಡ್ ಯೂನಿಯನ್‌ಗಳಿಂದಾಗಿ ದೇಶದಲ್ಲಿ ಎಷ್ಟು ಕೈಗಾರಿಕಾ ಘಟಕಗಳು ಮುಚ್ಚಲ್ಪಟ್ಟಿವೆ? ವಾಸ್ತವಗಳನ್ನು ನಮಗೆ ತಿಳಿಸಿ. ಈ ‘ಝಂಡಾ’ ಯೂನಿಯನ್‌ಗಳಿಂದಾಗಿ ದೇಶಾದ್ಯಂತ ಎಲ್ಲ ಸಾಂಪ್ರದಾಯಿಕ ಕೈಗಾರಿಕೆಗಳು ಮುಚ್ಚಲ್ಪಟ್ಟಿವೆ” ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಅರ್ಜಿ ಕುರಿತು ಮಾತನಾಡಿದ ನ್ಯಾಯಮೂರ್ತಿಗಳು, “ಮನೆ ಕೆಲಸದ ಕಾರ್ಮಿಕರಿಗೆ ಕಾರ್ಮಿಕ ಕಾಯ್ದೆಯಡಿ ಕನಿಷ್ಠ ವೇತನ ನಿಗದಿ ಮಾಡಿದರೆ, ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದೇ ಇಲ್ಲ” ಎಂದು ಹೇಳಿದ್ದಾರೆ.

“ಕನಿಷ್ಠ ವೇತನ ನಿಗದಿಯು ಕೆಲಸ ಕೊಡುವವರನ್ನು ಸಂಕಷ್ಟಕ್ಕೆ ತಳ್ಳಬಹುದು. ಕಾರ್ಮಿಕ ಸಂಘಗಳು ಪ್ರತಿಯೊಂದು ಮನೆಯನ್ನೂ ಮೊಕದ್ದಮೆಗೆ ಎಳೆಯಬಹುದು. ಇದು ಮನೆ ಕೆಲಸದವರನ್ನು ನೇಮಿಸಿಕೊಳ್ಳುವಲ್ಲಿ ಹಿಂಜರಿಕೆಗೆ ಕಾರಣವಾಗಬಹುದು” ಎಂದು ಕೋರ್ಟ್‌ ಹೇಳಿದೆ.

“ದೇಶಾದ್ಯಂತ ಲಕ್ಷಾಂತರ ಮನೆಗೆಲಸದವರು ‘ಕಷ್ಟ’ದಲ್ಲಿದ್ದಾರೆ. ಆದರೆ, ಈ ಸಂಬಂಧ ಕಾನೂನು ತಿದ್ದುಪಡಿ ಮಾಡುವಂತೆ ಆದೇಶಿಸಲು ಸಾಧ್ಯವಿಲ್ಲ. ಕಾನೂನಿನಲ್ಲಿ ಬದಲಾವಣೆಗಳಿಗೆ ಸಂಬಂಧಿಸಿದ ವಿಷಯದಲ್ಲಿ ಮಧ್ಯಪ್ರವೇಶಿಸಲು ನ್ಯಾಯಾಲಯಕ್ಕೆ ಸೀಮಿತ ಅಧಿಕಾರವಿದೆ” ಎಂದು ಕೋರ್ಟ್‌ ಹೇಳಿದ್ದು, ಈ ಸಮಸ್ಯೆಯ ಪರಿಹಾರಕ್ಕಾಗಿ ಅರ್ಜಿದಾರರು ರಾಜ್ಯಗಳ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...

ಹೌತಿಗಳ ವಿರುದ್ಧ ಮಿಲಿಟರಿ ದಾಳಿಗೆ ಸೌದಿ ಅರೇಬಿಯಾ ಮನವಿ: ಬೆಂಬಲಿಸಿಲ್ಲ ಎಂದ ಟ್ರಂಪ್

ಕೆಂಪು ಸಮುದ್ರದ ಆಯಕಟ್ಟಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ದಾಳಿ...