ರೈಲು ಅಪಘಾತ : ಕಳೆದ 10 ವರ್ಷಗಳಲ್ಲಿ 2.6 ಲಕ್ಷಕ್ಕೂ ಹೆಚ್ಚು ಜನರ ಸಾವು : ಸಂಸದ ಸಾಗರ ಖಂಡ್ರೆ

Date:

Advertisements

ʼಕಳೆದ 10 ವರ್ಷಗಳಲ್ಲಿ ಎನ್‌ಸಿಆರ್‌ಬಿ ವರದಿ ಪ್ರಕಾರ 2.6 ಲಕ್ಷಕ್ಕೂ ಹೆಚ್ಚು ಜನರು ರೈಲು ಅಪಘಾತಗಳಿಂದ ಸಾವನ್ನಪ್ಪಿದ್ದು, ರೈಲು ಅಪಘಾತ ತಡೆಗೆ ʼಕವಚ್‌ʼ ತಂತ್ರಜ್ಞಾನ ಎಲ್ಲೆಡೆ ತ್ವರಿತ ಗತಿಯಲ್ಲಿ ಜಾರಿಗೊಳಿಸಬೇಕುʼ ಎಂದು ಬೀದರ್‌ ಸಂಸದ ಸಾಗರ್‌ ಖಂಡ್ರೆ ಒತ್ತಾಯಿಸಿದ್ದಾರೆ.

ಲೋಕಸಭೆಯಲ್ಲಿ ಸೋಮವಾರ ಗಮನ ಸೆಳೆದ ಅವರು, ʼರೈಲು ಅಪಘಾತ ತಡೆಗೆ ಜಾರಿಗೊಳಿಸಿದ ʼಕವಚ್‌ʼ ತಂತ್ರಜ್ಞಾನವನ್ನು ಬಹಳ ನಿಧಾನಗತಿಯಲ್ಲಿ ಅಳವಡಿಸಲಾಗುತ್ತಿದೆ. ದೇಶದ 68 ಸಾವಿರ ಕಿ.ಮೀ ಮಾರ್ಗದಲ್ಲಿ 3,700 ಕಿ.ಮೀ. ಮಾತ್ರ ಅಳವಡಿಸಲಾಗಿದೆʼ ಎಂದರು.

ʼಹೆಚ್ಚಿನ ಜನರು ರೈಲುಗಳಿಗೆ ಸಿಲುಕಿ, ರೈಲುಗಳಿಂದ ಬೀಳುವುದರಿಂದ ಅಪಘಾತ ಸಂಭವಿಸುತ್ತಿವೆ. ಕಳೆದ ಹತ್ತು ವರ್ಷಗಳಲ್ಲಿ 700ಕ್ಕೂ ಹೆಚ್ಚು ಜನ ಸಾವನಪ್ಪಿದ್ದರೆ, 2 ಸಾವಿರಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆʼ ಎಂದು ತಿಳಿಸಿದರು.

ʼಅಮೃತ್ ಭಾರತ್ ಯೋಜನೆ ಅಡಿಯಲ್ಲಿ ನಿಲ್ದಾಣಗಳ ಪುನರಾಭಿವೃದ್ಧಿ ಬಹಳ ನಿಧಾನಗತಿಯಲ್ಲಿ ನಡೆಯುತ್ತಿದೆ. 2024-25ನೇ ವರ್ಷದಲ್ಲಿ 450ಕ್ಕೂ ಹೆಚ್ಚು ನಿಲ್ದಾಣಗಳನ್ನು ಅಭಿವೃದ್ಧಿಪಡಿಸಬೇಕಿತ್ತು. ಆದರೆ, ಕೇವಲ ಒಂದು ನಿಲ್ದಾಣ ಮಾತ್ರ ಅಭಿವೃದ್ಧಿಪಡಿಸಲಾಗಿದೆʼ ಎಂದರು.

ʼಬೀದರ್-ಬೆಂಗಳೂರು ನಡುವೆ ʼವಂದೇ ಭಾರತ್ʼ ರೈಲು ಆರಂಭವಾಗಬೇಕೆಂಬುದು ನನ್ನ ಕ್ಷೇತ್ರದ ಜನರ ಬೇಡಿಕೆಯಾಗಿದ್ದು, ಇದರಿಂದ ಹೆಚ್ಚಿನ ಜನರಿಗೆ ಅನುಕೂಲವಾಗುತ್ತದೆ. ಭಾಲ್ಕಿ ಮತ್ತು ಕಮಲನಗರ ರೈಲ್ವೆ ನಿಲ್ದಾಣಗಳನ್ನು ʼಅಮೃತ ಭಾರತ್‌ʼ ಯೋಜನೆಯಡಿ ಸೇರ್ಪಡಿಸಿ ಅಭಿವೃದ್ಧಿಪಡಿಸಬೇಕು. ಬೀದರ-ಬೆಂಗಳೂರು ರೈಲುಗಳಲ್ಲಿ ಜನಸಂದಣಿ ಹೆಚ್ಚಾಗುತ್ತಿದ್ದು, ಹೆಚ್ಚುವರಿ 2 ಬೋಗಿಗಳನ್ನು ಸೇರಿಸಲು ಅವಕಾಶವಿದ್ದು ಬೋಗಿಗಳನ್ನು ಸೇರಿಸಬೇಕುʼ ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಜಾಗತಿಕ ತಾಪಮಾನ ಏರಿಕೆ: ಬಿಸಿಗಾಳಿಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳೇನು?

ʼಬೀದರ ಕ್ಷೇತ್ರದ ಜನರನ್ನು ರಾಷ್ಟ್ರ ರಾಜಧಾನಿ ದೆಹಲಿಗೆ ಸಂಪರ್ಕ ಕಲ್ಪಿಸಲು ದಕ್ಷಿಣ ಎಕ್ಸ್‌ಪ್ರೆಸ್ ರೈಲನ್ನು ಹೈದರಾಬಾದ್‌ನಿಂದ ಬೀದರಕ್ಕೆ ವಿಸ್ತರಿಸಬೇಕು. ತಾಂಡೂರು-ಜಹೀರಾಬಾದ್ ಹೊಸ ರೈಲು ಮಾರ್ಗವನ್ನು ಕ್ಷೇತ್ರದ ಚಿಂಚೋಳಿ ಮೂಲಕ ಸಾಗುವಂತೆ ಮಾಡಬೇಕು. ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾದ ಮಾಧ್ಯಮ ಕ್ಷೇತ್ರಕ್ಕೆ ನೀಡಲಾಗುತ್ತಿದ್ದ ಶೇ 50ರಷ್ಟು ರಿಯಾಯಿತಿಯನ್ನು ಮರುಪ್ರಾರಂಭಿಸಬೇಕುʼ ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು...

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

Download Eedina App Android / iOS

X