ಜಮ್ಮು ಮತ್ತು ಕಾಶ್ಮೀರ | ಸಚಿವ ಕಿರಣ್ ರಿಜುಜು ಕಾರು ಅಪಘಾತ; ಯಾವುದೇ ಅಪಾಯವಿಲ್ಲ

Date:

  • ಜಮ್ಮು-ಕಾಶ್ಮೀರ ಮೂಲಕ ಉಧಮ್‌ಪುರಕ್ಕೆ ತೆರಳುತ್ತಿದ್ದ ಕಿರಣ್ ರಿಜಿಜು
  • ರಾಂಬನ್ ಜಿಲ್ಲೆಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ

ಕಾನೂನು ಸಚಿವ ಕಿರಣ್ ರಿಜಿಜು ಅವರ ಕಾರು ಜಮ್ಮು-ಕಾಶ್ಮೀರ ರಾಂಬನ್ ಜಿಲ್ಲೆಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ತೆರಳುತ್ತಿದ್ದ ವೇಳೆ ಶನಿವಾರ (ಏಪ್ರಿಲ್ 8) ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಆದರೆ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ.

- Advertisement -

ರಿಜಿಜು ಅವರು ಉಧಮ್‌ಪುರದಿಂದ ಕಾಶ್ಮೀರಕ್ಕೆ ಹಿಂತಿರುಗುತ್ತಿದ್ದರು. ಈ ವೇಳೆ ಮರೂಗ್ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಘಟನೆಯಲ್ಲಿ ಕಾರು ಹಾಗೂ ಟ್ರಕ್‌ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಟ್ರಕ್‌ ಸರಕುಗಳಿಂದ ತುಂಬಿತ್ತು. ಅಪಘಾತದಿಂದ ಗುಂಡು ನಿರೋಧಕ ಕಾರು ಜಖಂಗೊಂಡಿದೆ. ಜಮ್ಮುವಿನಿಂದ ಶ್ರೀನಗರಕ್ಕೆ ರಸ್ತೆ ಮಾರ್ಗವಾಗಿ ಕಾರಿನಲ್ಲಿ ಸಚಿವ ಕಿರಣ್‌ ರಿಜಿಜು, ಇತರರು ಸಂಚರಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದರು.

ಈ ಕುರಿತು ಸುದ್ದಿ ಸಂಸ್ಥೆ ಎಎನ್‌ಐ ಟ್ವೀಟ್‌ ಮಾಡಿದ್ದು ಅಪಘಾತದ ವಿಡಿಯೋ ಹಂಚಿಕೊಂಡಿದೆ.

ಅಪಘಾತ ಸಂಭವಿಸಿದ ಬಳಿಕ ಸಚಿವ ಕಿರಣ್ ರಿಜಿಜು ಅವರಿದ್ದ ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರಿನಿಂದ ಅವರನ್ನು ಹೊರಗೆ ಕರೆತರಲು ಭದ್ರತಾ ಸಿಬ್ಬಂದಿ ಧಾವಿಸುವುದು ವಿಡಿಯೋದಲ್ಲಿ ಕಾಣಿಸಿದೆ.

ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿ ಹಾಜರಿದ್ದು, ಸಚಿವರನ್ನು ಕಾರಿನಿಂದ ಹೊರಗೆ ಕರೆದುಕೊಂಡು ಬಂದಿದ್ದಾರೆ.

ಎಲ್ಲರೂ ಸುರಕ್ಷಿತರಾಗಿದ್ದಾರೆ. ಸಣ್ಣ ಅಪಘಾತವಾಗಿದ್ದು, ಎಲ್ಲವೂ ನಿಯಂತ್ರಣದಲ್ಲಿದೆ ಎಂದು ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಎಡಿಜಿ) ಮುಖೇಶ್ ಸಿಂಗ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? 11 ಬುಡಕಟ್ಟು ಮಹಿಳೆಯರ ಅತ್ಯಾಚಾರ ಪ್ರಕರಣ; 21 ಆಂಧ್ರ ಪೊಲೀಸರ ಖುಲಾಸೆ

ಇದಕ್ಕೂ ಮುನ್ನ ಕಿರಣ್‌ ರಿಜಿಜು ಅವರು ಜಮ್ಮು-ಕಾಶ್ಮೀರ ಮೂಲಕ ಉಧಮ್‌ಪುರಕ್ಕೆ ಕಾನೂನು ಸೇವೆಗಳ ಶಿಬಿರಕ್ಕೆ ಪ್ರಯಾಣಿಸಿದ್ದರು. ಈ ಮಾರ್ಗದ ಹೆದ್ದಾರಿಯ ವಿಡಿಯೋವನ್ನು ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡು ಪ್ರಯಾಣದ ಖುಷಿಯನ್ನು ವ್ಯಕ್ತಪಡಿಸಿದ್ದರು.

“ಕಾನೂನು ಸೇವೆಗಳ ಶಿಬಿರದಲ್ಲಿ ಹಾಜರಾಗಲು ಜಮ್ಮು ಮತ್ತು ಕಾಶ್ಮೀರದಲ್ಲಿ ಜಮ್ಮುವಿನಿಂದ ಉಧಮ್‌ಪುರಕ್ಕೆ ತೆರಳುತ್ತಿದ್ದೇನೆ. ನ್ಯಾಯಾಧೀಶರು ಹಾಗೂ ಎನ್ಎಎಲ್ಎಸ್ಎ ತಂಡದ ಜತೆಗೆ ಕೇಂದ್ರ ಸರ್ಕಾರಿ ಯೋಜನೆಗಳ ಅನೇಕ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಹಾಜರಾಗಲಿದ್ದಾರೆ” ಎಂದು ವಿಡಿಯೋದಲ್ಲಿ ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...

ಹೌತಿಗಳ ವಿರುದ್ಧ ಮಿಲಿಟರಿ ದಾಳಿಗೆ ಸೌದಿ ಅರೇಬಿಯಾ ಮನವಿ: ಬೆಂಬಲಿಸಿಲ್ಲ ಎಂದ ಟ್ರಂಪ್

ಕೆಂಪು ಸಮುದ್ರದ ಆಯಕಟ್ಟಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ದಾಳಿ...