ಇಬ್ಬರು ಡ್ಯಾನ್ಸರ್‌ಗಳನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ; 8 ಮಂದಿ ಕಾಮುಕರ ಬಂಧನ

Date:

Advertisements

ಆರ್ಕೆಸ್ಟ್ರಾ ಪಾರ್ಟಿಯಲ್ಲಿ ಇಬ್ಬರು ಡ್ಯಾನ್ಸರ್‌ಗಳನ್ನು ಅಪಹರಿಸಿ, ಅವರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ದುರ್ಘಟನೆ ಅತ್ಯಾಚಾರದ ರಾಜಧಾನಿ ಎಂದೇ ಕುಖ್ಯಾತಿ ಗಳಿಸಿರುವ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಕುಶಿನಗರದಲ್ಲಿ ಘಟನೆ ನಡೆಸಿದ್ದು, ಪ್ರಕರಣದಲ್ಲಿ 8 ಮಂದಿ ಕಾಮುಕ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆರ್ಕೆಸ್ಟ್ರಾ ನಡೆಯುತ್ತಿದ್ದ ಸಮಯದಲ್ಲಿ 20 ವರ್ಷ ಆಸುಪಾಸಿನ ಇಬ್ಬರು ಯುವತಿಯನ್ನು ಬಂದೂಕು ತೋರಿಸಿ ಆರೋಪಿಗಳು ಅಪಹರಿಸಿದ್ದಾರೆ. 10 ಕಿ.ಮೀ ದೂರದಲ್ಲಿದ್ದ ಓರ್ವ ಆರೋಪಿಯ ಮನೆಗೆ ಅವರನ್ನು ಕರೆದೊಯ್ದು, ಡಾನ್ಸ್‌ ಮಾಡುವಂತೆ ಒತ್ತಾಯಿಸಿದ್ದಾರೆ. ಡಾನ್ಸ್‌ ಮಾಡಲು ಯುವತಿಯರು ನಿರಾಕರಿಸಿದ್ದು, ಕುಪಿತಗೊಂಡ ಕಾಮುಕರ ಗುಂಪು ಅವರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದೆ ಎಂದು ವರದಿಯಾಗಿದೆ.

“ಎಲ್ಲ ಎಂಟು ಆರೋಪಿಗಳು 30 ವರ್ಷಕ್ಕಿಂತ ಕಡಿಮೆ ವಯಸ್ಸಿನವರು. ಅವರನ್ನು ಕುಶಿನಗರದ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸಂತ್ರಸ್ತ ಯುವತಿಯರ ಹೇಳಿಕೆಗಳನ್ನು ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಲಾಗುತ್ತಿದೆ. ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ವರದಿಗಾಗಿ ಕಾಯಲಾಗುತ್ತಿದೆ”ಎಂದು ಕುಶಿನಗರ ಎಸ್‌ಪಿ ಸಂತೋಷ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.

Advertisements

“ಕಾಮುಕರ ಇಬ್ಬರು ಮಹಿಳೆಯರನ್ನು ಬಂದೂಕು ತೋರಿಸಿ ಅಪಹರಿಸಿದೆ. ಸ್ಥಳೀಯರು ತಕ್ಷಣವೇ ನಮಗೆ ಮಾಹಿತಿ ನೀಡಿದರು. ಅಪಹರಣಕ್ಕೆ ಬಳಸಿದ ವಾಹನದ ಸಂಖ್ಯೆಯನ್ನು ಸಹ ತಿಳಿಸಿದರು. ಕಣ್ಗಾವಲಿನ ಸಹಾಯದಿಂದ ಯುವತಿಯನ್ನು ಶೀಘ್ರವಾಗಿ ಪತ್ತೆ ಮಾಡಲಾಗಿದ್ದು, ಅಪಹರಿಸಿದ ಎರಡು ಗಂಟೆಗಳ ಒಳಗೆ ಸಂತ್ರಸ್ತೆಯರನ್ನು ರಕ್ಷಿಸಿದ್ದೇವೆ. ಆರೋಪಿಗಳನ್ನು ಬಂಧಿಸಿದ್ದೇವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಗಳಲ್ಲಿ ನಾಗೇಂದ್ರ ಯಾದವ್, ಅಸನ್ ಸಿಂಗ್, ಕ್ರಿಶ್ ತಿವಾರಿ, ಅರ್ಥಕ್ ಸಿಂಗ್, ಅಜೀತ್ ಸಿಂಗ್ ಮತ್ತು ವಿವೇಕ್ ಸೇಠ್ ಎಂಬವರನ್ನು ಅಜೀತ್ ಸಿಂಗ್ ಎಂಬಾತನ ಮನೆಯಲ್ಲಿ ಬಂಧಿಸಲಾಗಿದೆ. ಇನ್ನಿಬ್ಬರು ಆರೋಪಿಗಳಾದ ನಿಸಾರ್ ಅನ್ಸಾರಿ ಮತ್ತು ಆದಿತ್ಯ ಸಹಾನಿ ಅವರನ್ನು ಗ್ರಾಮವೊಂದರಲ್ಲಿ ಬಂಧಿಸಲಾಗಿದೆ. ತಪ್ಪಿಸಿಕೊಳ್ಳಲು ಯತ್ನಿಸಿದ ಈ ಇಬ್ಬರೂ ಆರೋಪಿಗಳ ಕಾಲಿಗೆ ಗುಂಡೇಟು ತಗುಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

“ಆರೋಪಿ ಅಜೀತ್ ಎಂಬಾತನ ಹುಟ್ಟುಹಬ್ಬವನ್ನು ಆಚರಿಸಲು ಆರೋಪಿಗಳು ಒಂದೆಡೆ ಸೇರಿದಿದ್ದರು. ಮದ್ಯ ಸೇವಿಸಿದ ಬಳಿಕ ನೃತ್ಯ ಪ್ರದರ್ಶನಕ್ಕಾಗಿ ಆರ್ಕೆಸ್ಟ್ರಾ ಪಾರ್ಟಿ ನಡೆಸಲು ನಿರ್ಧಿಸಿದರು. ತಡವಾಗಿದ್ದ ಕಾರಣ ಯುವತಿಯರು ಪಾರ್ಟಿಗೆ ಬಂದು, ಪ್ರದರ್ಶನ ನೀಡಲು ನಿರಾಕರಿಸಿದ್ದರು. ಅವರನ್ನು ಬಂದೂಕು ತೋರಿಸಿ, ಅಪಹರಿಸಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿದ್ದಾರೆ” ಎಂದು ಅಧಿಕಾರಿಯೊಬ್ಬರು ವಿವರಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X