ಸಿಎಎ ವಿರುದ್ಧ ಪ್ರತಿಭಟನೆ | ಇಬ್ಬರ ಹತ್ಯೆ; ಮೇಘಾಲಯದಲ್ಲಿ ಉದ್ವಿಗ್ನತೆ

Date:

Advertisements

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಮಾರ್ಚ್ 27ರಂದು ನಡೆದ ಪ್ರತಿಭಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯ ಬಳಿಕ ಬಾಂಗ್ಲಾದೇಶದ ಜೊತೆ ಗಡಿ ಹಂಚಿಕೊಂಡಿರುವ ಮೇಘಾಲಯ ರಾಜ್ಯದ ಹಲವಾರು ಗ್ರಾಮಗಳಲ್ಲಿ ಉದ್ವಿಗ್ನತೆ ಹೆಚ್ಚುತ್ತಿದೆ.

ಸಿಎಎ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಖಾಸಿ ವಿದ್ಯಾರ್ಥಿ ಸಂಘವು (ಕೆಎಸ್‌ಯು) ಇಬ್ಬರನ್ನು ಹತ್ಯೆ ಮಾಡಿದೆ ಎಂದು ಆರೋಪಿಸಲಾಗಿದೆ. ಮೃತರನ್ನು ಸುಜಿತ್ ದತ್ತಾ (35) ಮತ್ತು ಎಸನ್ ಸಿಂಗ್ (24) ಎಂದು ಗುರುತಿಸಲಾಗಿದೆ. ಸುಜಿತ್ ಬಂಗಾಳಿಯಾಗಿದ್ದರೆ, ಎಸಾನ್ ಆದಿವಾಸಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಸುಜಿತ್ ಸುಣ್ಣದ ಕಲ್ಲು ಕ್ವಾರಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಕೆಲಸದ ನಿಮಿತ್ತ ಹೊರಗೆ ಹೋಗಿದ್ದ ವೇಳೆ ಕೊಲೆ ಮಾಡಲಾಗಿದೆ. ಸಿಎಎ ವಿರುದ್ಧ ಪ್ರತಿಭಟನೆ ನಡೆಸಿದವರು ಕೊಲೆ ಮಾಡಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಆದರೆ, ಸಿಎಎ ವಿರೋಧಿ ಪ್ರತಿಭಟನೆಗಳು ಮತ್ತು ಹತ್ಯೆಗಳ ನಡುವೆ ಯಾವುದೇ ಸಂಬಂಧವಿರುವುದು ತಿಳಿದುಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

Advertisements

ಈ ಕೊಲೆಗೆ ಸಂಬಂಧಿಸಿ ಕೆಎಸ್‌ಯು ಸದಸ್ಯ ಶಾನ್‌ಬೋರ್ಲಾಂಗ್ ಶಾತಿ (26) ಮತ್ತು ಮೆಸದಪ್ಪೋರ್ ಸ್ಕೆಂಬಿಲ್ (26) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್ 2 ರಂದು ಸ್ಥಳೀಯ ನ್ಯಾಯಾಲಯವು ಆರೋಪಿಗಳನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ.

ಇದನ್ನು ಓದಿದ್ದೀರಾ?   ಪುರೋಹಿತ ಕೂಡಾ ಸಿಎಎ ಅರ್ಹತಾ ಪ್ರಮಾಣಪತ್ರ ನೀಡಬಹುದೆಂದ ಸರ್ಕಾರಿ ಸಹಾಯವಾಣಿ!

ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ, ಕೆಎಸ್‌ಯು ಸದಸ್ಯರು ಬುಧವಾರ ಮಧ್ಯಾಹ್ನ ಸೊಹ್ರಾ ಪಟ್ಟಣದ ಸ್ಥಳೀಯ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದರು. ಅಲ್ಲದೆ, ಸುಮಾರು ಐದು ಜನರು ಮಾಸ್ಕ್ ಮತ್ತು ಹೆಲ್ಮೆಟ್ ಧರಿಸಿ ಶಿಲ್ಲಾಂಗ್‌ನ ಮಾವ್ಲೈ ಪೊಲೀಸ್ ಠಾಣೆಯತ್ತ ಪೆಟ್ರೋಲ್ ಬಾಂಬ್ ಎಸೆದು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?   ‘ಸಿಎಎ ಅಸಂವಿಧಾನಿಕ’ ಎಂದ ನ್ಯಾಯಮೂರ್ತಿ ಚಂದ್ರಚೂಡ್‌ರ ಪುತ್ರ; ವೀಡಿಯೋ ವೈರಲ್

ಮೃತರಲ್ಲಿ ಒಬ್ಬರಾದ ಸುಜಿತ್ ಅವರ ಕುಟುಂಬವು ಸೊಹ್ರಾದಿಂದ 30 ಕಿಲೋಮೀಟರ್ ದೂರದಲ್ಲಿರುವ ಇಚಮತಿಯಲ್ಲಿರುವ ತಮ್ಮ ಮನೆಯಿಂದ ಹೊರಬರಲು ಕೂಡಾ ಭಯಪಡುತ್ತಿದೆ ಎಂದು ದಿ ವೈರ್ ವರದಿ ಮಾಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X