ಯುಜಿಸಿ ನೆಟ್ ಪ್ರಶ್ನೆ ಪತ್ರಿಕೆ ಸೋರಿಕೆ | ಸಾಕ್ಷ್ಯಾಧಾರ ಸೃಷ್ಟಿ; ಸಿಬಿಐ ತನಿಖೆಯಲ್ಲಿ ಪತ್ತೆ?

Date:

Advertisements

ಜೂನ್ 18ರಂದು 317 ನಗರಗಳಲ್ಲಿ 9 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗಿದ್ದಾರೆ. ಇದಾದ ಕೇವಲ ಒಂದು ದಿನದ ನಂತರ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಸಾಕ್ಷಿ ಲಭ್ಯವಾದ ಕಾರಣ ಶಿಕ್ಷಣ ಸಚಿವಾಲಯವು ಪರೀಕ್ಷೆಯನ್ನು ರದ್ದುಗೊಳಿಸಿದೆ. ಆದರೆ ಈ ಸಾಕ್ಷ್ಯಾಧಾರವನ್ನೇ ಸೃಷ್ಟಿ ಮಾಡಲಾಗಿದೆ ಎಂಬುವುದು ಸಿಬಿಐ ತನಿಖೆಯಿಂದ ಪತ್ತೆಯಾಗಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜೂನ್ 19ರಂದು, ‘ಪರೀಕ್ಷೆಯ ಸಮಗ್ರತೆಗೆ ಧಕ್ಕೆಯುಂಟಾಗಿರಬಹುದು’ ಎಂದು ದೇಶದ ಅತೀ ಉನ್ನತ ಪರೀಕ್ಷೆಗಳಲ್ಲಿ ಒಂದಾದ ಯುಜಿಸಿ ನೆಟ್ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಜೂನ್ 18ರಂದು ಪರೀಕ್ಷೆಯ ದಿನದಂದು ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಟೆಲಿಗ್ರಾಮ್ ಚಾನೆಲ್‌ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಸೈಬರ್‌ಕ್ರೈಮ್‌ಗೆ ತಿಳಿದುಬಂದಿದೆ.

ಈ ಸೈಬರ್‌ಕ್ರೈಮ್‌ಗೆ ಲಭಿಸಿದ ಸಾಕ್ಷಿಯ ಆಧಾರದಲ್ಲಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಜೂನ್ 23ರಂದು, ಶಿಕ್ಷಣ ಸಚಿವಾಲಯದ ಆದೇಶದಂತೆ ಕೇಂದ್ರೀಯ ತನಿಖಾ ದಳವು (ಸಿಬಿಐ) ಈ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ವಹಿಸಿಕೊಂಡಿತು.

Advertisements

ಇದನ್ನು ಓದಿದ್ದೀರಾ?  ಯುಜಿಸಿ-ನೆಟ್‌| ಹೊಸ ದಿನಾಂಕ ಪ್ರಕಟ; ಆಗಸ್ಟ್‌ 21ರಿಂದ ಸೆಪ್ಟೆಂಬರ್ 4ರವರೆಗೆ ಪರೀಕ್ಷೆ

ಆದರೆ ಸರ್ಕಾರಿ ಮೂಲಗಳ ಪ್ರಕಾರ, ಪ್ರಶ್ನೆ ಪತ್ರಿಕೆಯ ಸ್ಕ್ರೀನ್‌ಶಾಟ್ ಪರೀಕ್ಷೆಯ ಮೊದಲೇ ಲೀಕ್ ಆಗಿದೆ ಎಂಬಂತೆ ದಾಖಲೆಯನ್ನು ಸೃಷ್ಟಿ ಮಾಡಲಾಗಿದೆ ಎಂದು ಸಿಬಿಐ ಪತ್ತೆ ಮಾಡಿದೆ.

ಯುಜಿಸಿ ನೆಟ್‌ನ ಬೆಳಿಗ್ಗೆಯ ಪರೀಕ್ಷೆಯ ಬಳಿಕ ಮಧ್ಯಾಹ್ನದ ಪರೀಕ್ಷೆಗೂ ಮುನ್ನ ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಟೆಲಿಗ್ರಾಮ್ ಚಾನೆಲ್‌ನಲ್ಲಿ ಪ್ರಶ್ನೆ ಪತ್ರಿಕೆಯ ಫೋಟೋವನ್ನು ಹಂಚಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮಧ್ಯಾಹ್ನ 3 ಗಂಟೆಗೆ ಪರೀಕ್ಷೆ ನಡೆದಿದೆ.

ಈ ಛಾಯಾಚಿತ್ರವು ಪರೀಕ್ಷೆಗೆ ಮುಂಚೆಯೇ ಜನರ ಬಳಿ ಲಭ್ಯವಿತ್ತು ಎಂದು ಸೂಚಿಸುವಂತೆ ಸಾಕ್ಷಿ ಸೃಷ್ಟಿಸಲಾಗಿದೆ. ಆದರೆ ಯಾವ ರೀತಿಯ ಸಾಕ್ಷಿ ಎಂಬ ಬಗ್ಗೆ ಮಾಹಿತಿ ತಿಳಿದಿಲ್ಲ ಎಂದು ವರದಿ ಉಲ್ಲೇಖಿಸಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X