ನೋ‌ಬಾಲ್ ತೀರ್ಪು ನೀಡಿದ ಅಂಪೈರ್‌; ಚಾಕುವಿನಿಂದ ಇರಿದು ಹತ್ಯೆ

Date:

Advertisements

ಕ್ರಿಕೆಟ್‌ ಪಂದ್ಯವೊಂದರ ವೇಳೆ ತಪ್ಪಾದ ನಿರ್ಣಯ ನೀಡಿದ್ದಾನೆ ಎಂದು ಆರೋಪಿಸಿ ಅಂಪೈರ್‌ನನ್ನೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾದ ಘಟನೆ ಒಡಿಶಾದಲ್ಲಿ ನಡೆದಿದೆ. ಮೃತ ಯುವಕನನ್ನು ಲಕ್ಕಿ ರೌತ್ (22) ಎಂದು ಗುರುತಿಸಲಾಗಿದೆ.

ಒಡಿಶಾದ ಕಟಕ್ ಜಿಲ್ಲೆಯ ಮಹಿಸಲಂದಾ ಗ್ರಾಮದಲ್ಲಿ ಭಾನುವಾರ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಶಂಕರಪುರ ಮತ್ತು ಬ್ರಹ್ಮಪುರ ಗ್ರಾಮಗಳ ನಡುವಿನ ಪಂದ್ಯದಲ್ಲಿ ಲಕ್ಕಿ ರೌತ್ ಅಂಪೈರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದ. ಪಂದ್ಯದ ನಡುವೆ ಲಕ್ಕಿ ನೀಡಿದ್ದ ನೋಬಾಲ್‌ ತೀರ್ಪು ವಿವಾದಕ್ಕೆ ಕಾರಣವಾಗಿತ್ತು. ಅಂಪೈರ್‌ ತೀರ್ಮಾನಕ್ಕೆ ಬ್ರಹ್ಮಪುರ ತಂಡದ ಆಟಗಾರರು ಆಕ್ಷೇಪ ವ್ಯಕ್ತಪಡಿಸಿದ್ದರು. ಪರ – ವಿರೋಧವಾಗಿ ಉಭಯ ತಂಡಗಳ ನಡುವೆ ಮಾತಿನ ಚಕಮಕಿ ನಡೆದಿತ್ತು.

ಈ ವೇಳೆ ಬ್ರಹ್ಮಪುರ ಗ್ರಾಮದ ತಂಡದ ಬೆಂಬಲಿಗರು ಮೈದಾನ ಪ್ರವೇಶಿಸಿ ಅಂಪೈರ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಮೊದಲು ಬ್ಯಾಟ್‌ನಿಂದ ತಲೆಗೆ ಬಡಿದು ಬಳಿಕ ನೆಲಕ್ಕೆ ಬಿದ್ದ ಲಕ್ಕಿ ರೌತ್ ಮೇಲೆ ಸ್ಮೃತಿ ರಂಜನ್ ರಾವತ್‌ ಅಲಿಯಾಸ್ ಮುನಾ ಎಂಬಾತ ಚಾಕುವಿನಿಂದ ಇರಿದಿದ್ದಾನೆ.

Advertisements

ರಕ್ತದ ಮಡುವಿನಲ್ಲಿ ಬಿದ್ದಿದ್ದ ಲಕ್ಕಿ ರೌತ್‌ನನ್ನು ಸ್ಥಳೀಯರು ತಕ್ಷಣವೇ ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜಿಗೆ ದಾಖಲಿಸಿದರಾದರೂ, ಅದಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ 2023 | ತುಷಾರ್​ ದೇಶಪಾಂಡೆ ಐಪಿಎಲ್‌ನ ಮೊತ್ತಮೊದಲ ʻಇಂಪ್ಯಾಕ್ಟ್‌ ಪ್ಲೇಯರ್‌ʼ

ಲಕ್ಕಿ ರೌತ್ ಮೇಲೆ ಚಾಕುವಿನಿಂದ ಇರಿದ ಸ್ಮೃತಿ ರಂಜನ್ ರಾವತ್‌ ಪರಾರಿಯಾಗಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಆದರೆ, ಗ್ರಾಮಸ್ಥರು ಆತನ ಸ್ನೇಹಿತರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ʻಮುಗುನಿ ರಾವತ್‌, ಜಗರಾವತ್‌ ಹಾಗೂ ಸ್ಮೃತಿ ರಂಜನ್ ರಾವತ್‌ ಎಂಬುವವರು ಲಕ್ಕಿ ರಾವತ್‌ ಮೇಲೆ ಗಂಭೀರ ಹಲ್ಲೆ ನಡೆಸಿ ಚಾಕುವಿನಿಂದ ಇರಿದಿದ್ದಾರೆʼ ಎಂದು ಎಂದು ಪಂದ್ಯದ ಸಹ ಅಂಪೈರ್ ಪ್ರೀತಿರಂಜನ್ ಸಮಲ್ ಪೊಲೀಸರಿಗೆ ತಿಳಿಸಿದ್ದಾನೆ.

‘ಈ ಪ್ರಕರಣದಲ್ಲಿ ರಾಜಾ, ಸ್ಮೃತಿ ಅಕಾ ಮುನಾ, ಸಂಜಯ್ ಅಕಾ ಮುಗುನಿ ಮತ್ತು ಬಾದಲ್ ಸೇರಿದಂತೆ ನಾಲ್ವರು ಆರೋಪಿಗಳು ಭಾಗಿಯಾಗಿದ್ದಾರೆ. ಎಲ್ಲರನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದ್ದೇವೆ ಎಂದು ಕಟಕ್‌ನ ವಲಯ-1 ಎಸಿಪಿ ಅರುಣ್ ಸ್ವೈನ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X