ಗಂಡು ಹುಟ್ಟಿಲ್ಲವೆಂದು ನವಜಾತ ಹೆಣ್ಣು ಶಿಶುವನ್ನು ನೀರಿನ ಟ್ಯಾಂಕ್‌ಗೆ ಎಸೆದ ತಾಯಿ

Date:

Advertisements

ಗಂಡು ಮಗು ಹುಟ್ಟಿಲ್ಲವೆಂಬ ಕಾರಣಕ್ಕೆ ಹತಾಶೆಗೆ ಒಳಗಾಗಿ 17 ದಿನದ ಹೆಣ್ಣು ಶಿಶುವನ್ನು ತಾಯಿ ನೀರಿನ ಟ್ಯಾಂಕ್‌ಗೆ ಎಸೆದು ಕೊಂದ ಘಟನೆ ರಾಜಸ್ಥಾನದ ಜುಂಜುನುವಿನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾನೇ ಮಗುವನ್ನು ನೀರಿನ ಟ್ಯಾಂಕ್‌ಗೆ ಎಸೆದು ಕೊಂದಿರುವುದಾಗಿ ತಾಯಿ ತಪ್ಪೊಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ಆರೋಪಿ ತಾಯಿಯನ್ನು ಆಚ್ಕಿ ದೇವಿ (22) ಎಂದು ಗುರುತಿಸಲಾಗಿದೆ.

ಇದನ್ನು ಓದಿದ್ದೀರಾ? ಹೆಣ್ಣು ಮಗು ಹುಟ್ಟಿದ್ದಕ್ಕೆ ಪತ್ನಿಯನ್ನೇ ಜೀವಂತ ಸುಟ್ಟ ವಿಕೃತ ಪತಿ

Advertisements

“ನನಗೆ ಗಂಡು ಮಗು ಜನಿಸಬೇಕು ಎಂಬ ಆಸೆ ಇತ್ತು. ಆದರೆ ನನಗೆ ಹೆಣ್ಣು ಮಗು ಜನಿಸಿತು. ಇದರಿಂದ ನನಗೆ ನಿರಾಶೆಯಾಯಿತು. ಅದಕ್ಕಾಗಿ ನೀರಿನ ಟ್ಯಾಂಕ್‌ಗೆ ಮಗುವನ್ನು ಎಸೆದು, ಅದರ ಮುಚ್ಚಿಬಿಟ್ಟೆ” ಎಂದು ತಾಯಿ ಪೊಲೀಸರಿಗೆ ತಿಳಿಸಿರುವುದಾಗಿ ವರದಿಯಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕೊತ್ವಾಲಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ನಾರಾಯಣ ಸಿಂಗ್, “ಶ್ರೀ ರಾಮ ಕಾಲೋನಿಯ ಆಚ್ಕಿ ದೇವಿ ಎಂಬ ಮಹಿಳೆ ತನ್ನ 17 ದಿನದ ಹೆಣ್ಣು ಮಗುವನ್ನು ಭಾನುವಾರ ನೀರಿನ ಟ್ಯಾಂಕ್‌ಗೆ ಎಸೆದಿದ್ದಾಳೆ. ತನಗೆ ಗಂಡು ಮಗು ಆಗಿಲ್ಲ ಎಂಬ ಕಾರಣಕ್ಕೆ ಈ ರೀತಿ ಮಾಡಿದ್ದಾಳೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ದೆಹಲಿ | ಚೀಲದಲ್ಲಿ 6 ದಿನದ ಹೆಣ್ಣು ಮಗುವಿನ ಮೃತದೇಹ ಪತ್ತೆ; ತಾಯಿಯ ಬಂಧನ

ಮಹಿಳೆಯು ತನ್ನ ಪರಿಚಯಸ್ಥರೊಬ್ಬರಿಗೆ ಈ ಬಗ್ಗೆ ತಿಳಿಸಿದ್ದಳು. ಆ ವ್ಯಕ್ತಿ ಮಹಿಳೆಯ ಪತಿಗೆ ತಿಳಿಸಿದ್ದು, ಪತಿ ಪೊಲೀಸರಿಗೆ ದೂರು ನೀಡಿದ್ದಾನೆ. ದೂರಿನ ಆಧಾರದಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಮಹಿಳೆಯನ್ನು ಬಂಧಿಸಲಾಗಿದೆ. ಕೋರ್ಟ್‌ಗೆ ಹಾಜರುಪಡಿಸಲಾಗಿದ್ದು ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.

ಭಾರತದಲ್ಲಿ ಹಲವಾರು ಶತಕಗಳಿಂದ ಹೆಣ್ಣು ಮಗುವನ್ನು ತಿರಸ್ಕರಿಸುತ್ತಾ ಬರಲಾಗಿದೆ. ಇಂದಿಗೂ ಜನರಲ್ಲಿರುವ ಮನೋಭಾವ ಬದಲಾಗಿಲ್ಲ. ಅಕ್ರಮವಾಗಿ ಭ್ರೂಣದ ಲಿಂಗ ಪತ್ತೆ ಹಚ್ಚಿ, ಹೆಣ್ಣೆಂದು ತಿಳಿದಾಗ ಗರ್ಭಪಾತ ಮಾಡಿಸುವ ಅದೆಷ್ಟೋ ಪ್ರಕರಣಗಳು ಇಂದಿಗೂ ದಾಖಲಾಗುತ್ತಿವೆ. ಅದರಲ್ಲೂ ಮುಖ್ಯವಾಗಿ ಅತ್ತೆ, ಪತಿ, ಕುಟುಂಬಸ್ಥರ ತುಚ್ಛ ಮಾತುಗಳ ಒತ್ತಡದಿಂದಾಗಿ ತಾಯಿಯೇ ತನ್ನ ಹೆಣ್ಣು ಮಗುವನ್ನು ಕೊಂದಿರುವ ಘಟನೆಯೂ ವರದಿಯಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X