ಎಲ್‌ಟಿಟಿಇ ಮೇಲಿನ ನಿಷೇಧ: ಮತ್ತೆ 5 ವರ್ಷ ವಿಸ್ತರಿಸಿದ ಕೇಂದ್ರ

Date:

Advertisements

ಶ್ರೀಲಂಕಾದ ಪ್ರತ್ಯೇಕವಾದಿ ಸಂಘಟನೆ ಎಲ್‌ಟಿಟಿಇ ಮೇಲಿನ ನಿಷೇಧವನ್ನು ಕೇಂದ್ರ ಸರ್ಕಾರ ಪುನಃ 5 ವರ್ಷಗಳ ಕಾಲ ವಿಸ್ತರಿಸಿದೆ. ಜನರಿಗೆ ಪ್ರತ್ಯೇಕವಾದದ ಬಗ್ಗೆ ಪ್ರವೃತ್ತಿಯನ್ನು ಬೆಳಸುವುದರ ಜೊತೆಗೆ ಭಾರತದ ಪ್ರಾದೇಶಿಕ ಸಮಗ್ರತೆಗೆ ಮುಖ್ಯವಾಗಿ ತಮಿಳುನಾಡಿಗೆ ಬೆದರಿಕೆಯಾಗಿದೆ ಎಂದು ಕೇಂದ್ರ ತಿಳಿಸಿದೆ.

ಕಾನೂನುಬಾಹಿರ ಚಟುವಟಿಕೆ ತಡೆಗಟ್ಟುವಿಕೆ ಕಾಯಿದೆ 1967ರ ಸೆಕ್ಷನ್‌ 3 ಹಾಗೂ ಉಪ ವಿಭಾಗ 1ರಡಿ ಕೇಂದ್ರ ಗೃಹ ಸಚಿವಾಲಯವು ನಿಷೇಧ ಜಾರಿಗೊಳಿಸಿದೆ.

ಎಲ್‌ಟಿಟಿಇ ಸಂಘಟನೆ ಮುಖ್ಯವಾಗಿ ಶ್ರೀಲಂಕಾದಲ್ಲಿದ್ದರೂ ಇದರ ಬೆಂಬಲಿಗರು ಹಾಗೂ ಸಹಾನುಭೂತಿ ವ್ಯಕ್ತಪಡಿಸುವವರು ಹಾಗೂ ಏಜೆಂಟ್‌ಗಳು ಭಾರತದ ಭೂಪ್ರದೇಶದಲ್ಲಿ ಇದ್ದಾರೆ ಎಂದು ಗೃಹ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Advertisements

ದೇಶದ ಸಮಗ್ರತೆ ಹಾಗೂ ಭದ್ರತೆಯಲ್ಲಿಎಲ್‌ಟಿಟಿಇ ಇನ್ನೂ ಅಹಿತಕರ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಗೃಹ ಇಲಾಖೆಯ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇಶ ತನ್ನ ಹಳೆಯ ಲಯಕ್ಕೆ, ಪ್ರಜಾಪ್ರಭುತ್ವಕ್ಕೆ ಹಿಂದಿರುಗುತ್ತಿದೆಯೇ?

ಶ್ರೀಲಂಕಾದ ಮಿಲಿಟರಿಯಿಂದ 2009ರಲ್ಲಿ ಹಿನ್ನಡೆ ಅನುಭವಿಸಿದ ನಂತರ ಎಲ್‌ಟಿಟಿಇ ತಮಿಳರಿಗೆ ಪ್ರತ್ಯೇಕ ರಾಷ್ಟ್ರವಾಗುವ ಪರಿಕಲ್ಪನೆಯನ್ನು ಕೈಬಿಟ್ಟಿಲ್ಲ. ಉಳಿದಿರುವ ಎಲ್‌ಟಿಟಿಇ ನಾಯಕರು ಹಾಗೂ ಕೇಡರ್‌ಗಳು ಚದುರಿದ ಕಾರ್ಯಕರ್ತರನ್ನು ಮತ್ತೆ ಒಂದೂಗೂಡಿಸಲು ಸ್ಥಳೀಯವಾಗಿ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಹಸ್ಯವಾಗಿ  ಹಣಕಾಸು ಸಂಗ್ರಹಿಸುವುದು ಹಾಗೂ ಪ್ರಚಾರದ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.

1976ರಲ್ಲಿ ಶ್ರೀಲಂಕಾದಲ್ಲಿ ರೂಪುಗೊಂಡ ಎಲ್‌ಟಿಟಿಇ ನಂತರದ ವರ್ಷಗಳಲ್ಲಿ ತನ್ನ ಸಂಘಟನೆಯನ್ನು ಹೆಚ್ಚಿಸಿಕೊಳ್ಳುತ್ತಾ ಹೋಯಿತು.  1991ರಲ್ಲಿ ಭಾರತದ ಮಾಜಿ ಪ್ರಧಾನಿ ಎಲ್‌ಟಿಟಿಇನಿಂದ ಹತರಾದ ನಂತರ  ಭಾರತದಲ್ಲಿ ಈ ಸಂಘಟನೆಯನ್ನು ನಿಷೇಧಿಸಲಾಗಿತ್ತು. 2009ರಲ್ಲಿ ಮುಖ್ಯಸ್ಥ ವೇಲುಪಿಳ್ಳೆ ಪ್ರಭಾಕರನ್‌ ಮೃತಪಟ್ಟ ನಂತರ ಸಂಘಟನೆ ಮತ್ತಷ್ಟು ಕುಸಿಯಿತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X