‘ಉಪವಾಸ ಕೈಬಿಟ್ಟ ಫೋಟೋ ಬಿಡುಗಡೆ ಮಾಡಲ್ಲ ಎಂದಿದ್ದ ಸಚಿವರು ಮಾತು ತಪ್ಪಿದರು’: ವಾಂಗ್‌ಚುಕ್ ಬೇಸರ

Date:

ತಮ್ಮ 26 ದಿನಗಳ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ ಕ್ಷಣದ ಛಾಯಾಚಿತ್ರಗಳನ್ನು ಬಿಡುಗಡೆ ಮಾಡುವ ಮೂಲಕ ಸರ್ಕಾರವು ಒಪ್ಪಂದವನ್ನು ಮುರಿದು ನಂಬಿಕೆ ದ್ರೋಹ ಎಸಗಿದೆ ಎಂದು ಪರಿಸರ ಹೋರಾಟಗಾರ ಸೋನಮ್ ವಾಂಗ್‌ಚುಕ್ ಆರೋಪಿಸಿದ್ದಾರೆ. ಈ ಘಟನೆಯು ಎಲ್ಲಾ ರಾಜಕೀಯ ಪಕ್ಷಗಳ ನಾಯಕರ ಮೇಲಿನ ತಮ್ಮ ನಂಬಿಕೆಯನ್ನು ಹುಸಿಗೊಳಿಸಿದೆ ಎಂದು ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

- Advertisement -

ಮಾಧ್ಯಮವೊಂದಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ವಾಂಗ್‌ಚುಕ್, ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರೊಂದಿಗಿನ ಮಧ್ಯರಾತ್ರಿಯ ಭೇಟಿಯ ಯಾವುದೇ ಛಾಯಾಚಿತ್ರಗಳನ್ನು ವಿರೋಧ ಪಕ್ಷದ ನಾಯಕರು ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳ ಗಮನಕ್ಕೆ ಬರುವವರೆಗೆ ಬಿಡುಗಡೆ ಮಾಡಬಾರದು ಎಂಬ ಸ್ಪಷ್ಟ ಒಪ್ಪಂದವಾಗಿತ್ತು ಎಂದು ತಿಳಿಸಿದ್ದಾರೆ. “ಸಚಿವರು ತಮ್ಮದೇ ಆದ ಛಾಯಾಗ್ರಾಹಕರನ್ನು ಕರೆತಂದಿದ್ದರು. ಆ ಫೋಟೋಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದು ಅವರು ನನಗೆ ಭರವಸೆ ನೀಡಿದ್ದರು. ಆದರೆ, ಅವರು ಆ ಭರವಸೆಯನ್ನು ಮುರಿದಿದ್ದಾರೆ” ಎಂದು 59 ವರ್ಷದ ವಾಂಗ್‌ಚುಕ್ ಅಸಮಾಧಾನ ಹೊರಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಲಡಾಖ್‌ನಲ್ಲಿ ಪ್ರತಿಭಟನಾಕಾರರ ಬೇಡಿಕೆಗಳನ್ನು ಸರ್ಕಾರ ಈಡೇರಿಸಿದ ಬಳಿಕ, ಸರ್ಕಾರದ ಪ್ರತಿನಿಧಿಗಳು ಜ್ಯೂಸ್ ಅಥವಾ ಸೂಪ್ ನೀಡಿ ಉಪವಾಸ ಅಂತ್ಯಗೊಳಿಸುವುದು ಸಂಪ್ರದಾಯ. ಆದರೆ, ಈ ಕ್ಷಣವನ್ನು ಕೇವಲ ಆಡಳಿತ ಪಕ್ಷದ ಕಾರ್ಯಕ್ರಮವಾಗಿ ಬಿಂಬಿಸುವುದು ತಮಗೆ ಇಷ್ಟವಿರಲಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇತರ ರಾಜಕೀಯ ಪಕ್ಷಗಳ ಮುಖಂಡರು ಮತ್ತು ವಿದ್ಯಾರ್ಥಿ ನಾಯಕರು ಈ ಸಂದರ್ಭದಲ್ಲಿ ಭಾಗಿಯಾಗಬೇಕು ಹಾಗೂ ಇದೊಂದು ಜಂಟಿ ಸಭೆಯಾಗಬೇಕು ಎಂದು ತಾನು ಸಚಿವರಿಗೆ ತಿಳಿಸಿದ್ದಾಗಿ ವಾಂಗ್‌ಚುಕ್ ಹೇಳಿದ್ದಾರೆ.

ಸಚಿವರು ಮಧ್ಯರಾತ್ರಿಯ ನಂತರ ಭೇಟಿಗೆ ಬಂದಿದ್ದರಿಂದ, ವಾಂಗ್‌ಚುಕ್ ಪರ್ಯಾಯ ವ್ಯವಸ್ಥೆಯೊಂದನ್ನು ಸೂಚಿಸಿದ್ದರು. “ನಾನು ಉಪವಾಸವನ್ನು ಕೈಬಿಡುತ್ತೇನೆ, ಆದರೆ ವಿರೋಧ ಪಕ್ಷದ ನಾಯಕರು ಮತ್ತು ಸಾಧ್ಯವಾದರೆ ವಿದ್ಯಾರ್ಥಿ ನಾಯಕರ ಛಾಯಾಚಿತ್ರಗಳನ್ನು ಒಟ್ಟುಗೂಡಿಸಿ, ಇದೊಂದು ಜಂಟಿ ಪ್ರಯತ್ನ ಎಂಬಂತೆ ಕಾಣುವ ರೀತಿಯಲ್ಲಿ ನನ್ನ ಷರತ್ತುಗಳ ಮೇರೆಗೆ ಈ ಸುದ್ದಿ ಬಿಡುಗಡೆಯಾಗಬೇಕು ಎಂದು ನಾನು ಹೇಳಿದ್ದೆ” ಎಂದು ಅವರು ವಿವರಿಸಿದರು. ಸಚಿವರು ಈ ಪ್ರಸ್ತಾಪಕ್ಕೆ ಒಪ್ಪಿಕೊಂಡಿದ್ದರು ಮತ್ತು ಸಭೆಯಲ್ಲಿದ್ದ ಹಿರಿಯ ಗುಪ್ತಚರ ದಳದ ಅಧಿಕಾರಿಗಳು ಈ ಒಪ್ಪಂದಕ್ಕೆ ಸಾಕ್ಷಿಯಾಗಿದ್ದರು ಎಂದು ವಾಂಗ್‌ಚುಕ್ ತಿಳಿಸಿದ್ದಾರೆ.

ಎಲ್ಲಾ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸುದ್ದಿಯನ್ನು ಪ್ರಕಟಿಸುವವರೆಗೆ ಮಾಧ್ಯಮಗಳಿಗೆ ಯಾವುದೇ ಚಿತ್ರಗಳನ್ನು ಬಿಡುಗಡೆ ಮಾಡಬಾರದು ಎಂದು ಐಬಿ ಅಧಿಕಾರಿಗಳಿಗೂ ತಿಳಿಸಲಾಗಿತ್ತು, ಅವರು ಅದಕ್ಕೆ ಒಪ್ಪಿದ್ದರು. ಆದರೆ, ವಿರೋಧ ಪಕ್ಷಗಳ ನಾಯಕರ ಫೋಟೋಗಳನ್ನು ಸಂಗ್ರಹಿಸಲು ಕಾಯುತ್ತಿದ್ದಾಗಲೇ, ಕೇವಲ ಐದೇ ನಿಮಿಷಗಳಲ್ಲಿ ಹಿರಿಯ ಐಬಿ ಅಧಿಕಾರಿಯೊಬ್ಬರು ಬಂದು ಆ ಚಿತ್ರಗಳು ಈಗಾಗಲೇ ಟಿವಿ ವಾಹಿನಿಗಳಲ್ಲಿ ಪ್ರಸಾರವಾಗುತ್ತಿರುವ ಬಗ್ಗೆ ಮಾಹಿತಿ ನೀಡಿದರು ಎಂದು ವಾಂಗ್‌ಚುಕ್ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಈ ಘಟನೆಯಿಂದ ರಾಜಕೀಯ ನಾಯಕರ ಮೇಲಿನ ವಿಶ್ವಾಸ ಸಂಪೂರ್ಣವಾಗಿ ಹೋಗಿದೆ ಎಂದಿದ್ದಾರೆ.

ಉಪವಾಸವನ್ನು ಅಂತ್ಯಗೊಳಿಸಲು ಸರ್ಕಾರದೊಂದಿಗೆ ‘ಮಧ್ಯರಾತ್ರಿಯ ಒಪ್ಪಂದ’ ಮಾಡಿಕೊಂಡಿದ್ದಾರೆ ಎಂಬ ಆರೋಪಗಳನ್ನು ಅವರು ಸಾರಾಸಗಟಾಗಿ ತಳ್ಳಿಹಾಕಿದ್ದಾರೆ. “ನಾನು ಅಂತಹ ಒಪ್ಪಂದವನ್ನು ಬಹಳ ಹಿಂದೆಯೇ ಮಾಡಿಕೊಳ್ಳಬಹುದಿತ್ತು. 26 ದಿನಗಳ ಕಾಲ ಉಪವಾಸ ಕೂರುವ ಅಗತ್ಯವೇ ಇರಲಿಲ್ಲ. ದೊಡ್ಡ ಮಟ್ಟದ ಒಪ್ಪಂದಗಳನ್ನು ಮಾಡಿಕೊಳ್ಳಬಹುದಿತ್ತು. ಬೇಕಿದ್ದರೆ ‘ನನ್ನನ್ನು ಶಿಕ್ಷಣ ಸಚಿವನನ್ನಾಗಿ ಮಾಡಿ’ ಎಂದು ಕೇಳಬಹುದಿತ್ತು. ನನಗೆ ಒಪ್ಪಂದ ಮಾಡಿಕೊಳ್ಳುವ ಇಚ್ಛೆ ಇದ್ದಿದ್ದರೆ ಹಲವು ಅವಕಾಶಗಳಿದ್ದವು” ಎಂದು ಸ್ಪಷ್ಟಪಡಿಸಿದ್ದಾರೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಕುರಿತು ಅಭಿಜೀತ್ ದೀಪ್ಕೆ ನೇತೃತ್ವದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಾಂಗ್‌ಚುಕ್, ಜೂನ್ 28 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. ಅವರ ಆರೋಗ್ಯ ಕ್ಷೀಣಿಸಿದ ನಂತರ, ಜುಲೈ 18 ರಂದು ಪೊಲೀಸರು ಅವರನ್ನು ಬಲವಂತವಾಗಿ ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸಿದ್ದರು.

ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಅವರು ನ್ಯಾಯಾಲಯದ ಮೊರೆ ಹೋದ ಬಳಿಕ, ಜುಲೈ 21 ರಂದು ಅವರನ್ನು ಅಧಿಕೃತವಾಗಿ ಮೇದಾಂತ ಆಸ್ಪತ್ರೆಗೆ ವರ್ಗಾಯಿಸಲಾಯಿತು. ಅಲ್ಲಿ ಜುಲೈ 24 ರಂದು ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರನ್ನು ಭೇಟಿಯಾಗಿದ್ದರು. ಪೇಪರ್ ಲೀಕ್ ವಿರುದ್ಧ ಕಠಿಣ ಕಾನೂನುಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ವಿಡಿಯೋ ಸಂದೇಶದ ನಂತರ, ಜುಲೈ 24 ರ ಮಧ್ಯರಾತ್ರಿ ವಾಂಗ್‌ಚುಕ್ ತಮ್ಮ ಉಪವಾಸವನ್ನು ಅಂತ್ಯಗೊಳಿಸಿದ್ದರು. ಆ ಬಳಿಕ ಸಚಿವರು ಅವರಿಗೆ ಸೂಪ್ ನೀಡುತ್ತಿರುವ ಚಿತ್ರಗಳು ಬಹಿರಂಗವಾಗಿದ್ದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...