ದೆಹಲಿ | ಅಸಾದುದ್ದೀನ್ ಒವೈಸಿ ಮನೆ ಮೇಲೆ ಕಪ್ಪು ಮಸಿ ಎಸೆದ ದುಷ್ಕರ್ಮಿಗಳು; ‘ಹೆದರಲ್ಲ’ ಎಂದ ಸಂಸದ

Date:

Advertisements

18ನೇ ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ “ಜೈ ಭೀಮ್, ಜೈ ಮೀಮ್, ಜೈ ಪ್ಯಾಲೆಸ್ತೀನ್” ಎಂದು ಘೋಷಣೆ ಕೂಗಿದ್ದಕ್ಕಾಗಿ ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿರುವ ಎಐಎಂಐಎಂ ಅಧ್ಯಕ್ಷ ಹಾಗೂ ಹೈದರಾಬಾದ್‌ನ ಸಂಸದ ಅಸಾದುದ್ದೀನ್‌ ಒವೈಸಿ ಅವರ ದೆಹಲಿಯ ಮನೆ ಮೇಲೆ ಕಪ್ಪು ಶಾಯಿ ಎಸೆದಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.

ದೆಹಲಿಯ ಅಶೋಕ ರಸ್ತೆಯಲ್ಲಿರುವ ಸಂಸದರ ಮನೆ ಬಳಿ ಬಂದಿದ್ದ ಇಬ್ಬರು ಈ ಕೃತ್ಯ ಎಸಗಿರುವುದಾಗಿ ವರದಿಯಾಗಿದ್ದು, ಘಟನೆಯ ಬಳಿಕ ದೆಹಲಿ ಪೊಲೀಸರೇ ಎದುರು ನಿಂತು ಶಾಯಿಯನ್ನು ನೀರಿನಿಂದ ಸ್ವಚ್ಛಗೊಳಿಸಿದ್ದಾರೆ.

ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಅಸಾದುದ್ದೀನ್ ಒವೈಸಿ, “ಕೆಲವು ಅಪರಿಚಿತ ದುಷ್ಕರ್ಮಿಗಳು ಇಂದು ನನ್ನ ಮನೆಯ ಮೇಲೆ ಕಪ್ಪು ಶಾಯಿಯಿಂದ ದಾಳಿ ಮಾಡಿದ್ದಾರೆ. ನನ್ನ ದೆಹಲಿ ನಿವಾಸವನ್ನು ಎಷ್ಟು ಬಾರಿ ಗುರಿಪಡಿಸಲಾಗಿದೆ ಎಂಬ ಲೆಕ್ಕಾಚಾರವನ್ನು ನಾನು ಈಗ ಕಳೆದುಕೊಂಡಿದ್ದೇನೆ” ಎಂದು ತಿಳಿಸಿದ್ದಾರೆ.

Advertisements

“ನಿಮ್ಮ ಮೂಗಿನ ನೇರಕ್ಕೆ ಇದು ಹೇಗೆ ನಡೆಯುತ್ತಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳನ್ನು ಕೇಳಿದಾಗ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಅಮಿತ್ ಶಾ ಅವರೇ, ಇದು ನಿಮ್ಮ ಮೇಲ್ವಿಚಾರಣೆಯಲ್ಲಿ ನಡೆಯುತ್ತಿದೆಯೇ?” ಎಂದು ಒವೈಸಿ ಪ್ರಶ್ನಿಸಿದ್ದಾರೆ.

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನೂ ಕೂಡ ಟ್ಯಾಗ್ ಮಾಡಿರುವ ಹೈದರಾಬಾದ್‌ನ ಸಂಸದ, “ಸಂಸದರ ಸುರಕ್ಷತೆಯನ್ನು ಖಾತರಿಪಡಿಸಲಾಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ದಯವಿಟ್ಟು ನಮಗೆ ತಿಳಿಸಿ” ಎಂದು ಪ್ರಶ್ನಿಸಿದ್ದು, “ಸಾವರ್ಕರ್ ಮಾದರಿಯ ಈ ರೀತಿಯ ಹೇಡಿತನವನ್ನು ನಿಲ್ಲಿಸಿ ಮತ್ತು ನನ್ನನ್ನು ಎದುರಿಸುವಷ್ಟು ಪುರುಷರಾಗಿರಿ. ಇಂಥದ್ದಕ್ಕೆಲ್ಲ ನಾನು ಹೆದರುವುದಿಲ್ಲ” ಎಂದು ಅಸಾದುದ್ದೀನ್‌ ಒವೈಸಿ ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X