ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಮನೆಗೆ ಬೆಂಕಿ; ಆರೋಪಿಗಳಲ್ಲಿ ಬಿಜೆಪಿಯ ಮಾಜಿ ಶಾಸಕನ ಹೆಸರು

Date:

Advertisements
  • ಉನ್ನಾವೋ ಜಿಲ್ಲೆಯಲ್ಲಿ ಬಾಲಕಿ ಮೇಲೆ 2017ರಲ್ಲಿ ಸಾಮೂಹಿಕ ಅತ್ಯಾಚಾರ
  • ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಬಿಜೆಪಿ ಶಾಸಕನಾಗಿದ್ದ ಕುಲದೀಪ್ ಸೆಂಗಾರ್

ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ಮೌರವಾನ್ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಸಾಮೂಹಿಕ ಅತ್ಯಾಚಾರ ಆರೋಪಿಗಳು ಬೆಂಕಿ ಹಚ್ಚಿರುವ ಘಟನೆ ಸೋಮವಾರ (ಏಪ್ರಿಲ್ 17) ರಾತ್ರಿ ವರದಿಯಾಗಿದೆ.

ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ 2017ರ ಜೂನ್‌ 4ರಂದು ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ಪ್ರಮುಖ ಅಪರಾಧಿಯಾಗಿರುವ ಬಿಜೆಪಿ ಶಾಸಕನಾಗಿದ್ದ ಕುಲದೀಪ್ ಸೆಂಗಾರ್ ಈಗಾಗಲೇ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾನೆ.

ಸಂತ್ರಸ್ತೆ 2018 ಏಪ್ರಿಲ್ 8ರಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿವಾಸದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು.

Advertisements

ಘಟನೆಯಲ್ಲಿ ಬೆಂಕಿಯಿಂದ ಸಂತ್ರಸ್ತೆಯ ಮನೆಯಲ್ಲಿನ ಎರಡು ಶಿಶುಗಳಿಗೆ ಸುಟ್ಟ ಗಾಯಗಳಾಗಿವೆ. ತನ್ನ ಮಗಳ ಮೇಲೆ ಅತ್ಯಾಚಾರಗೈದ ಪೀಡಕರು ಆಕೆಯ ಮಾವ ಹಾಗೂ ಮೈದುನನ ಜೊತೆ ಸೇರಿ ಮನೆಗೆ ಬೆಂಕಿ ಹಚ್ಚಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಆರೋಪಿಸಿದ್ದಾರೆ.

ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿ, ಸಂತ್ರಸ್ತೆಯ ಮಾವ ಹಾಗೂ ಮೈದುನ ಸೇರಿ ಸಂತ್ರಸ್ತೆಯ ಮನೆಗೆ ಬೆಂಕಿ ಹಚ್ಚಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಅಧಿಕಾರಿ ಪುರ್ವಾ ಸಂತೋಷ್ ಕುಮಾರ್ ಹೇಳಿದ್ದಾರೆ.

“ಘಟನೆ ಬಗ್ಗೆ ಸಂತ್ರಸ್ತೆ ನೀಡಿದ ದೂರಿನ ಆಧಾರದಲ್ಲಿ ಆರೋಪಿಗಳ ವಿರುದ್ಧ ನಾನಾ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ಬಂಧನಕ್ಕೆ ಪ್ರಯತ್ನ ನಡೆಸಲಾಗುತ್ತಿದೆ” ಎಂದು ಅವರು ಹೇಳಿದರು.

“ಬೆಂಕಿ ದುರಂತದಲ್ಲಿ ಸಂಬಂಧಿಯ ಮೂರು ತಿಂಗಳ ಹೆಣ್ಣು ಶಿಶು, ಉನ್ನಾವೋ ಸಂತ್ರಸ್ತೆಯ ನಾಲ್ಕು ತಿಂಗಳ ಶಿಶುವಿಗೆ ಗಾಯಗಳಾಗಿವೆ. ಚಿಕಿತ್ಸೆಗೆ ಶಿಶುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ” ಎಂದು ಅಧಿಕಾರಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಜ್ಞಾನವಾಪಿ ಮಸೀದಿ | ‘ವಝು’ಗೆ ಅವಕಾಶ ಕಲ್ಪಿಸಲು ಸಭೆ ಮೂಲಕ ತೀರ್ಮಾನಕ್ಕೆ ಸುಪ್ರೀಂಕೋರ್ಟ್‌ ಸೂಚನೆ

ಉನ್ನಾವೋ ಪ್ರಕರಣದ ಆರೋಪಿಗಳು ಜಾಮೀನಿನ ಮೇಲೆ ಹೊರ ಬಂದಿದ್ದರು. 2019ರಲ್ಲಿ ಯುವತಿ ಕೊಲೆಗೆ ಯತ್ನ ನಡೆದಿತ್ತು. ವಕೀಲರ ಜತೆ ಕೋರ್ಟ್‌ಗೆ ಹೋಗುತ್ತಿದ್ದಾಗ ಆಕೆಯ ಕಾರ್‌ಗೆ ಅಪಘಾತ ಮಾಡಿಸಲಾಗಿತ್ತು. ಈ ಅಪಘಾತದಲ್ಲಿ ವಕೀಲ ಮತ್ತು ಆಕೆಯ ಚಿಕ್ಕಪ್ಪ ಮೃತಪಟ್ಟಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X