ಯುಪಿ | ಲೈಂಗಿಕ ಕೃತ್ಯಕ್ಕೆ ನಿರಾಕರಿಸಿದ್ದಕ್ಕೆ ಪ್ರೇಯಸಿಯನ್ನೇ ಕೊಂದ ಕಾಮುಕ ಪ್ರೇಮಿ

Date:

Advertisements

ತನ್ನೊಂದಿಗೆ ಲೈಂಗಿಕ ಕೃತ್ಯದಲ್ಲಿ ತೊಡಗಲು ನಿರಾಕರಿಸಿದ ಕಾರಣಕ್ಕೆ ಕಾಮುಕ ಪ್ರೇಮಿಯೊಬ್ಬ ತನ್ನ ಪ್ರೇಯಸಿಯನ್ನೇ ಕೊಂದಿರುವ ಘಟನೆ ಉತ್ತರ ಪ್ರದೇಶದ ಕೌಶಾಂಬಿ ಜಿಲ್ಲೆಯಲ್ಲಿ ನಡೆದಿದೆ.

ಕೌಶಾಂಬಿ ಜಿಲ್ಲೆಯ ಸರಾಯಿ ಆಕಿಲ್ ಪ್ರದೇಶದ ಬರಾಯಿ ಗ್ರಾಮದ ಸಾವರಿ ದೇವಿ (60) ಮೃತ ಮಹಿಳೆ. ಆಕೆಯನ್ನು ಅದೇ ಗ್ರಾಮದ ದಿನೇಶ್ ಕುಮಾರ್ ಸೇನ್ (45) ಎಂಬಾತ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಸಾವರಿ ದೇವಿ ಮತ್ತು ದಿನೇಶ್ ಕುಮಾರ್ ಸೇನ್ ನಡುವೆ ಪ್ರೇಮ ಬೆಳೆದಿತ್ತು. ಇಬ್ಬರೂ ಪರಿಸ್ಪರರನ್ನು ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದೆ. ಮೇ 25ರಂದು ಸಾವರಿ ದೇವಿ ಅವರ ಮೃತದೇಹವು ನಗ್ನ ಸ್ಥಿತಿಯಲ್ಲಿ ಅವರ ಮನೆಯಲ್ಲಿ ಪತ್ತೆಯಾಗಿತ್ತು. ಆಕೆಯ ಕುತ್ತಿಗೆಯನ್ನು ಬಟ್ಟೆಯಿಂದ ಬಿಗಿದು ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿತ್ತು.

Advertisements

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಕೆ ಆರಂಭಿಸಿದ್ದರು. ಇದೀಗ, ಆರೋಪಿ ದಿನೇಶ್‌ ಸೇನ್‌ಅನ್ನು ಬಂಧಿಸಲಾಗಿದೆ.

ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ಕೌಶಂಬಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ಸಿಂಗ್, “ಕೃತ್ಯವನ್ನು ತಾನೇ ಎಸಗಿರುವುದಾಗಿ ಆರೋಪಿ ದಿನೇಶ್ ಕುಮಾರ್ ಸೇನ್ ಒಪ್ಪಿಕೊಂಡಿದ್ದಾನೆ. ಮೃತ ಮಹಿಳೆಯ ಪತಿ ವಿವಾಹವಾದ ಕೆಲವೇ ವರ್ಷಗಳಲ್ಲಿ ಆಕೆಯನ್ನು ತೊರೆದು ದೂರವಾಗಿದ್ದರು. ಆಕೆಗೆ ಮಕ್ಕಳು ಇರಲಿಲ್ಲ. ಏಕಾಂಗಿಯಾಗಿ ವಾಸಿಸುತ್ತಿದ್ದ ಮಹಿಳೆಗೆ ಆರೋಪಿ ದಿನೇಶ್‌ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದನು. ದಿನಕಳೆದಂತೆ ಇಬ್ಬರ ನಡುವೆ ಪ್ರೇಮ ಮತ್ತು ದೈಹಿಕ ಸಂಬಂಧ ಬೆಳೆದಿತ್ತು” ಎಂದು ತಿಳಿಸಿದ್ದಾರೆ.

“ವಿಚಾರಣೆ ವೇಳೆ ಹಲವು ಮಾಹಿತಿಗಳನ್ನು ಹಂಚಿಕೊಂಡಿರುವ ದಿನೇಶ್, ‘ರಾತ್ರಿ ವೇಳೆ ನಾನು ಮತ್ತು ಸಾವರಿ ದೇವಿ ಫೋನ್‌ನಲ್ಲಿ ಮಾತನಾಡುತ್ತಿದ್ದೇವು. ಮೇ 23ರಂದು ಆಕೆಯೊಂದಿಗೆ ಫೋನ್‌ನಲ್ಲಿ ಮಾತನಾಡಿದ ನಂತರ, ರಾತ್ರಿ ಸುಮಾರು 10 ಗಂಟೆಯ ಸಮಯದಲ್ಲಿ ಆಕೆಯ ಮನೆಗೆ ಹೋಗಿ ಲೈಂಗಿಕ ಬಯಕೆಯನ್ನು ವ್ಯಕ್ತಪಡಿಸಿದ್ದೆ. ಆದರೆ, ನನ್ನ ಕೋರಿಯನ್ನು ಆಕೆ ನಿರಾಕರಿಸಿದರು. ಆಕೆಯೊಂದಿಗೆ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಲು ಮುಂದಾದೆ. ಈ ವೇಳೆ ಗಲಾಟೆ ನಡೆದು, ಆಕೆಯ ಗುತ್ತಿಗೆಗೆ ಬಟ್ಟೆ ಬಿಗಿದು, ಹತ್ಯೆ ಮಾಡಿದೆ’ನೆಂದು ಆರೋಪಿ ಒಪ್ಪಿಕೊಂಡಿದ್ಧಾನೆ” ಎಂದು ಎಸ್‌ಪಿ ತಿಳಿಸಿದ್ದಾರೆ.

ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಜೈಲಿಗೆ ಕಳಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X