ಉತ್ತರ ಪ್ರದೇಶ| ಮಗುವಿನ ಲಿಂಗ ಪತ್ತೆ ಹಚ್ಚಲು ಪತ್ನಿಯ ಹೊಟ್ಟೆ ಸೀಳಿದ್ದ ಪತಿಗೆ ಜೀವಾವಧಿ ಶಿಕ್ಷೆ

Date:

Advertisements

ಉತ್ತರ ಪ್ರದೇಶದ ಬದೌನ್‌ನಲ್ಲಿ ಭ್ರೂಣದ ಲಿಂಗವನ್ನು ಪರೀಕ್ಷಿಸಲು ತನ್ನ ಎಂಟು ತಿಂಗಳ ಗರ್ಭಿಣಿ ಪತ್ನಿಯ ಹೊಟ್ಟೆಯನ್ನು ಸೀಳಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಬದೌನ್‌ನ ಸಿವಿಲ್ ಲೈನ್ಸ್‌ನ ನಿವಾಸಿಯಾಗಿರುವ ಆರೋಪಿ ಪನ್ನಾ ಲಾಲ್ ಸೆಪ್ಟೆಂಬರ್ 2020ರಲ್ಲಿ ತನ್ನ ಪತ್ನಿ ಅನಿತಾ ಮೇಲೆ ಹಲ್ಲೆ ನಡೆಸಿದ್ದ. ದಂಪತಿಗೆ ಐದು ಹೆಣ್ಣು ಮಕ್ಕಳಿದ್ದು ಗಂಡು ಮಗು ಬೇಕು ಎಂಬ ಕಾರಣಕ್ಕೆ ಪತ್ನಿಯೊಂದಿಗೆ ಜಗಳವಾಡುತ್ತಿದ್ದ.

ಪನ್ನಾ ಲಾಲ್ ತಮ್ಮ ಹೆಣ್ಣು ಮಕ್ಕಳಿಗೆ ನಿತ್ಯ ಕಿರುಕುಳ ನೀಡುತ್ತಿದ್ದು, ಹೆಣ್ಣು ಮಕ್ಕಳಿಗೆ ಮಾತ್ರ ಜನ್ಮ ನೀಡುತ್ತಿರುವುದೇಕೆ, ಗಂಡು ಮಗುವನ್ನು ಕೂಡಾ ಹೆರು ಎಂದು ಪತ್ನಿಗೆ ಹಿಂಸೆ ನೀಡುತ್ತಿದ್ದ ಎಂದು ಅನಿತಾ ಕುಟುಂಬಸ್ಥರು ಆರೋಪಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ?  ಬೀದರ್‌ | ಪತ್ನಿ ಕೊಲೆಗೈದ ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

Advertisements
Bose Military School

ಹಲವಾರು ಬಾರಿ ಅನಿತಾ ಕುಟುಂಬವು ಪನ್ನಾ ಲಾಲ್‌ ಜೊತೆ ಜಗಳವಾಡದಂತೆ ಮನವಿ ಮಾಡಿದ್ದಾರೆ. ಆದರೆ ಪನ್ನಾ ಲಾಲ್ ವಿಚ್ಛೇದನ ನೀಡುವುದಾಗಿ ಮತ್ತು ಗಂಡು ಮಗುವಿಗಾಗಿ ಬೇರೆ ಮಹಿಳೆಯನ್ನು ಮದುವೆಯಾಗುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ.

ಮಗುವಿನ ಲಿಂಗದ ಬಗ್ಗೆ ದಂಪತಿಗಳ ನಡುವೆ ವಾಗ್ವಾದ ನಡೆದಿದ್ದು ಈ ಸಂದರ್ಭದಲ್ಲಿ ಪನ್ನಾ ಲಾಲ್ ಮಗು ಗಂಡೋ ಹೆಣ್ಣೋ ಎಂದು ತಾನೇ ನೋಡುವುದಾಗಿ ಹೇಳಿ ಪತ್ನಿಯ ಹೊಟ್ಟೆಯನ್ನು ಸೀಳಿದ್ದಾನೆ. ದಾಳಿಯಿಂದ ಅನಿತಾ ಕರುಳಿಗೆ ಗಾಯವಾಗಿದ್ದು, ಗರ್ಭಪಾತವಾಗಿದೆ.

ಇದನ್ನು ಓದಿದ್ದೀರಾ?  ಮಂಗಳೂರು| ರಾಜು ಕೋಟ್ಯಾನ್ ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಚಿಂತಾಜನಕ ಸ್ಥಿತಿಯಲ್ಲಿದ್ದ ಅನಿತಾಳನ್ನು ಬರೇಲಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಸಂಬಂಧಿಕರು ಪನ್ನಾ ಲಾಲ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಸೌರಭ್ ಸಕ್ಸೇನಾ ಅವರು ಪನ್ನಾ ಲಾಲ್‌ಗೆ ಜೀವಾವಧಿ ಶಿಕ್ಷೆ ಮತ್ತು 50,000 ರೂಪಾಯಿ ದಂಡ ವಿಧಿಸಿದ್ದಾರೆ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಆರು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements
Advertisements
Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡದಲ್ಲಿ ಭಾರೀ ಮಳೆ; ರುದ್ರಪ್ರಯಾಗ, ಕೇದಾರನಾಥದಲ್ಲಿ ಆತಂಕ

ಉತ್ತರಾಖಂಡದಲ್ಲಿ ಮಳೆ ಅಬ್ಬರ ಜೋರಾಗಿದೆ. ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ರುದ್ರಪ್ರಯಾಗದಲ್ಲಿ ಅಲಕನಂದಾ...

ಛತ್ತೀಸ್‌ಗಢ | ಭೀಕರ ಅಪಘಾತ: ಮೂವರ ಸಾವು, ಆರು ಮಂದಿಗೆ ಗಾಯ

ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿ,...

ಎರಡು ದಶಕಗಳ ನಂತರ ‘ಮರಾಠಿ ವಿಜಯ’ ರ್‍ಯಾಲಿ ನೆಪದಲ್ಲಿ ಒಂದಾದ ರಾಜ್, ಉದ್ಧವ್ ಠಾಕ್ರೆ

ಸುಮಾರು ಎರಡು ದಶಕಗಳಿಂದ ಪ್ರತ್ಯೇಕವಾಗಿ ಸಂಘಟನೆ ಕಟ್ಟುತ್ತಾ ಬಂದಿದ್ದ ಠಾಕ್ರೆ ಸಹೋದರರಾದ...

‘ಜಾತ್ಯತೀತತೆ, ಸಮಾಜವಾದವೇ ನಮ್ಮ ಸಂವಿಧಾನದ ತಳಹದಿ’ ಎಂದಿದ್ದರು ಅಂಬೇಡ್ಕರ್; ಇಲ್ಲಿದೆ ಪುರಾವೆ!

ಇಂಗ್ಲಿಷ್ ಕಾದಂಬರಿಕಾರರಾದ ಮುಲ್ಕ್ ರಾಜ್ ಆನಂದ್‍ರವರು, 1950ರ ಮೇ ತಿಂಗಳ ಒಂದು...

Download Eedina App Android / iOS

X