ಚಲಿಸುತ್ತಿದ್ದ ಕಾರಿನಲ್ಲಿ ಅಪ್ರಾಪ್ತೆಯ ಸಾಮೂಹಿಕ ಅತ್ಯಾಚಾರ; ರಸ್ತೆಗೆ ತಳ್ಳಿದ್ದರಿಂದ ಸಂತ್ರಸ್ತೆಯ ಸ್ನೇಹಿತೆ ಸಾವು

Date:

Advertisements

ಚಲಿಸುತ್ತಿದ್ದ ಕಾರಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದು, ಈ ವೇಳೆ ಆಕೆಯ ಸ್ನೇಹಿತೆಯನ್ನು ಕಾರಿನಿಂದ ಕೆಳಕ್ಕೆ ತಳ್ಳಿದ್ದರಿಂದ, ಆಕೆ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ.

ನಂತರ, ಕಾರಿನಿಂದ ತಪ್ಪಿಸಿಕೊಂಡಿರುವ ಸಂತ್ರಸ್ತ ಬಾಲಕಿಯು, ಈ ಘಟನೆಯನ್ನು ಪೊಲೀಸರಿಗೆ ತಿಳಿಸಿದ್ದಾಳೆ. ಘಟನೆ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಉದ್ಯೋಗ ಕೊಡಿಸುವ ಭರವಸೆ ನೀಡಿ ಹಾಗೂ ಲಖನೌಗೆ ಕಾರಿನಲ್ಲಿ ಬಿಡುತ್ತೇವೆ ಎಂದು ಹೇಳಿ ಮಂಗಳವಾರ ಸಂಜೆ ನನ್ನನ್ನು ಹಾಗೂ ನನ್ನ ಸ್ನೇಹಿತೆಯನ್ನು ಆರೋಪಿಗಳು ಕಾರಿನಲ್ಲಿ ಕರೆದೊಯ್ದರು ಎಂದು ಸಂತ್ರಸ್ತ ಬಾಲಕಿಯು ಪೊಲೀಸರಿಗೆ ತಿಳಿಸಿದ್ದಾಳೆ. ಈ ವೇಳೆ ಆರೋಪಿಗಳು ಕಾರಿನಲ್ಲೇ ಮದ್ಯಪಾನ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಗ್ರೇಟರ್ ನೊಯ್ಡಾ ನಿವಾಸಿಗಳಾದ ಸಂದೀಪ್ ಮತ್ತು ಅಮಿತ್ ಹಾಗೂ ಘಾಝಿಯಾಬಾದ್ ನಿವಾಸಿಯಾದ ಗೌರವ್ ಮತ್ತು ಸಂತ್ರಸ್ತ ಬಾಲಕಿಯ ನಡುವೆ ಈ ಕುರಿತು ಜಗಳ ಪ್ರಾರಂಭವಾದಾಗ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಯ ಸ್ನೇಹಿತೆಯನ್ನು ಮೀರತ್ ಜಿಲ್ಲೆಯಲ್ಲಿ ಕಾರಿನಿಂದ ತಳ್ಳಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಸ್ನೇಹಿತೆ ಮೃತಪಟ್ಟಿದ್ದಾರೆ.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಶಿಮ್ಲಾ ಒಪ್ಪಂದದತ್ತ ಕಣ್ಣು ಹಾಯಿಸಬೇಕಿದೆ ಭಾರತ-ಪಾಕ್

ಆಗ ಕಾರಿನಲ್ಲಿಯೇ ಇದ್ದ ಸಂತ್ತಸ್ತ ಬಾಲಕಿಯ ಮೇಲೆ ಆರೋಪಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆಕೆ ಮೀರತ್ ನಿಂದ ಸುಮಾರು 100 ಕಿಮೀ ದೂರವಿರುವ ಬುಲಂದ್‌ಶಹರ್ ಜಿಲ್ಲೆಯ ಖುರ್ಜಾ ಬಳಿ ಕಾರಿನಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆ. ನಂತರ, ಸಂತ್ರಸ್ತೆ ನೀಡಿದ ಮಾಹಿತಿಯನ್ನಾಧರಿಸಿ, ಆಲಿಗಢ-ಬುಲಂದ್ ಶಹರ್ ಹೆದ್ದಾರಿಯಲ್ಲಿ ಆರೋಪಿಗಳ ಕಿಯಾ ಸೆಲ್ಟೋಸ್ ಕಾರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಆರೋಪಿಗಳಾದ ಗೌರವ್ ಹಾಗೂ ಸಂದೀಪ್ ಕಾಲಿಗೆ ಗುಂಡಿಕ್ಕಿ ಬಂಧಿಸಿಲಾಯಿತು.

ಆರೋಪಿಗಳಿಂದ ಎರಡು ಅಕ್ರಮ ಪಿಸ್ತೂಲ್ ಗಳು, ಜೀವಂತ ಹಾಗೂ ಖಾಲಿ ಕಾರ್ಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬುಲಂದ್ ಶಹರ್ ವಿಶೇಷ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಈ ಘಟನೆಯ ಸಂಬಂಧ ಬುಧವಾರದಂದು ಖುರ್ಜಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳಡಿ ಎಫ್ಐಆರ್ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X