ಮಧ್ಯಪ್ರದೇಶ | ಸರ್ಕಾರಿ ಭೂಮಿಯಲ್ಲಿ ದಲಿತ ವ್ಯಕ್ತಿಯ ಅಂತ್ಯಕ್ರಿಯೆಯನ್ನು ತಡೆದ ಸವರ್ಣೀಯರು

Date:

Advertisements

ಸರ್ಕಾರಿ ಭೂಮಿಯಲ್ಲಿ ದಲಿತ ವ್ಯಕ್ತಿಯ ಅಂತ್ಯಕ್ರಿಯೆಯನ್ನು ಸವರ್ಣೀಯರು ತಡೆದ ಘಟನೆ ಮಧ್ಯಪ್ರದೇಶದ ಶಿಯೋಪುರದ ಲೀಲ್ಡಾ ಗ್ರಾಮದಲ್ಲಿ ಸೋಮವಾರ ನಡೆದಿದೆ. ಈ ಘಟನೆ ಬೆನ್ನಲ್ಲೇ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ, ರಸ್ತೆ ತಡೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

“ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ದಲಿತ ವ್ಯಕ್ತಿ ಸಾವನ್ನಪ್ಪಿದ್ದರು. ಕೆಲವು ಮೇಲ್ಜಾತಿಯವರು ಅತಿಕ್ರಮಣ ಮಾಡಿದ್ದ ಸರ್ಕಾರಿ ಭೂಮಿಯಲ್ಲಿ ದಲಿತ ವ್ಯಕ್ತಿಯ ಅಂತ್ಯಸಂಸ್ಕಾರ ಮಾಡಲು ಸಂಬಂಧಿಕರು ಮತ್ತು ಸಮುದಾಯದ ಸದಸ್ಯರು ಮುಂದಾದಾಗ ಸವರ್ಣೀಯರು ತಡೆದಿದ್ದಾರೆ” ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ರಾಮಮಂದಿರಕ್ಕೆ ದಲಿತರು ಕೊಟ್ಟ ದೇಣಿಗೆಯನ್ನು ‘ಅಶುದ್ಧ’ವೆಂದು ವಾಪಸ್‌ ಕೊಟ್ಟ ಸವರ್ಣೀಯರು

Advertisements

ಎರಡೂ ಕಡೆಯವರು ಕಲ್ಲು ತೂರಾಟ ನಡೆಸಿದ್ದಾರೆ. ಇದಾದ ಬಳಿಕ ಮೃತ ವ್ಯಕ್ತಿಯು ಸೇರಿದ ಜಾತವ ಸಮುದಾಯದ ಸದಸ್ಯರು ಶವವನ್ನು ಇರಿಸಿ ರಸ್ತೆ ತಡೆ ನಡೆಸಿದ್ದಾರೆ. ಹಿರಿಯ ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳು ಎರಡೂ ಕಡೆಯವರನ್ನು ಸಮಾಧಾನಪಡಿಸಿದ್ದಾರೆ ಎಂದು ಶಿಯೋಪುರ ಪೊಲೀಸ್ ವರಿಷ್ಠಾಧಿಕಾರಿ ವೀರೇಂದ್ರ ಜೈನ್ ಹೇಳಿದರು.

ಜಾತವ ಸಮುದಾಯಕ್ಕೆ ಸೇರಿದ ಸ್ಮಶಾನವನ್ನು ರೈಲ್ವೆ ಇಲಾಖೆ ಸ್ವಾಧೀನಪಡಿಸಿಕೊಂಡಿದೆ. ಅದಾದ ಬಳಿಕ ಇನ್ನೊಂದು ಜಾತಿಗೆ ಸೇರಿದ ಸ್ಮಶಾನದಲ್ಲಿ ಜಾತವ ಸಮುದಾಯವರು ಅಂತ್ಯಕ್ರಿಯೆ ನಡೆಸುತ್ತಿದ್ದರು. ಆದರೆ ಇದಕ್ಕೆ ವಿರೋಧ ವ್ಯಕ್ತವಾಗಿತ್ತು.

ಇದಾದ ಬಳಿಕ ಸರ್ಕಾರಿ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲು ದಲಿತರು ಮುಂದಾಗಿದ್ದು, ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ. ಸದ್ಯ ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿಕೊಂಡಿದ್ದಾರೆ.

ಸ್ಮಶಾನವನ್ನು ಸರ್ಕಾರ ಸ್ವಾಧೀನಪಡಿಸಿಕೊಂಡ ಕಾರಣ ಈ ಸರ್ಕಾರಿ ಭೂಮಿಯಲ್ಲೇ ಅಂತ್ಯಕ್ರಿಯೆ ನಡೆಸಲು ಅಧಿಕಾರಿಗಳು ಅವಕಾಶ ನೀಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X