ಉತ್ತರ ಪ್ರದೇಶ | ಸಂಭಾಲ್‌ನ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ; ಪರಿಸ್ಥಿತಿ ಉದ್ವಿಘ್ನ

Date:

Advertisements

ಉತ್ತರ ಪ್ರದೇಶದ ಸಂಭಾಲ್‌ನಲ್ಲಿರುವ ಶಾಹಿ ಜಾಮಾ ಮಸೀದಿಯ ಸಮೀಕ್ಷೆಗಾಗಿ ಭಾನುವಾರ ಬೆಳಗ್ಗೆ ಅಧಿಕಾರಿಗಳು ತೆರಳಿದ್ದ ವೇಳೆ, ಕಲ್ಲು ತೂರಾಟ ನಡೆದಿದೆ. ಪರಿಣಾಮ, ಸಂಭಾಲ್‌ನಲ್ಲಿ ಪರಿಸ್ಥಿತಿ ಉದ್ವಿಘ್ನಗೊಂಡಿದ್ದು, ಹೆಚ್ಚಿನ ಪೊಲೀಸ್‌ ಪಡೆಗಳನ್ನು ನಿಯೋಜಿಸಲಾಗಿದೆ.

ಶಾಹಿ ಜಾಮಾ ಮಸೀದಿಯ ಜಾಗವು ಕೇಲಾ ದೇವಿ ದೇವಸ್ಥಾನಕ್ಕೆ ಸೇರಿದ್ದಾಗಿದೆ. ಶಾಹಿ ಜಾಮಾ ಮಸೀದಿಯು ಮೂಲತಃ ಹರಿಹರ ದೇವಸ್ಥಾನವಾಗಿತ್ತು. 1529ರಲ್ಲಿ ಬಾಬರ್ ಆಳ್ವಿಕೆಯಲ್ಲಿ ದೇವಸ್ಥಾನವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎಂದು ದೇವಸ್ಥಾನ ಸಮಿತಿ ಸದಸ್ಯರು ಆರೋಪಿಸಿದ್ದಾರೆ. ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ ಚಂದೌಸಿಯ ಸಿವಿಲ್ ಹಿರಿಯ ವಿಭಾಗ ನ್ಯಾಯಾಲಯವು ಮಸೀದಿ ಅವರಣದಲ್ಲಿ ಸಮೀಕ್ಷೆ ನಡೆಸಲು ನವೆಂಬರ್ 19ರಂದು ಆದೇಶಿಸಿತ್ತು.

ಕೋರ್ಟ್‌ ಆದೇಶದ ಬಳಿಕ, ನವೆಂಬರ್ 24ರಂದು ಸಂಭಾಲ್ ಜಿಲ್ಲಾಧಿಕಾರಿ ರಾಜೇಂದ್ರ ಪನ್ಸಿಯಾ, ಪೊಲೀಸ್‌ ವರಿಷ್ಠಾಧಿಕಾರಿ ಕೃಷ್ಣ ಬಿಷ್ಣೋಯ್ ಮೇಲ್ವಿಚಾರಣೆಯಲ್ಲಿ ಸಮೀಕ್ಷಾ ತಂಡವು ಸಂಭಾಲ್ ಮಸೀದಿಗೆ ತೆರಳಿತ್ತು. ಆದರೆ, ಈ ವೇಳೆ ಕಲ್ಲು ತೂರಾಟ ನಡೆದಿದೆ. ಸಂಘರ್ಷದ ಛಾಯೆ ಆವರಿಸಿದೆ.

Advertisements

ಸಮೀಕ್ಷೆ ಪ್ರಾರಂಭವಾದ ಸುಮಾರು ಎರಡು ಗಂಟೆಗಳ ನಂತರ, ಪ್ರತಿಭಟನಾಕಾರರ ಗುಂಪು ಮಸೀದಿಯ ಬಳಿ ಜಮಾಯಿಸಿದೆ. ಭದ್ರತಾ ಸಿಬ್ಬಂದಿಗಳ ಮೇಲೆ ಕಲ್ಲು ತೂರಾಟ ನಡೆಸಿದೆ. ಘರ್ಷಣೆಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಮತ್ತು ಇಬ್ಬರು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲ್ಲು ತೂರಾಟ ನಡೆಸಿದ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.

ಜನಸಮೂಹಗಳ ನಡುವೆ ಕೆಲವರು ಗುಂಡು ಹಾರಿಸಿದ್ದಾರೆ. ಪೊಲೀಸ್‌ ಪಡೆಗಳ ಮೇಲೆ ಕಲ್ಲು ತೂರಿದ್ದಾರೆ. ನಮ್ಮ ವಾಹನಗಳಿಗೆ ದುಷ್ಕರ್ಮಿಗಳ ಗುಂಪು ಬೆಂಕಿ ಹಚ್ಚಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸುತ್ತಿದ್ಧೇವೆ. ನೆರೆಯ ಜಿಲ್ಲೆಗಳಿಂದಲೂ ಪೊಲೀಸ್‌ ಪಡೆಗಳನ್ನು ಕರೆಸಿಕೊಂಡಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X