ಉತ್ತರ ಪ್ರದೇಶ | ಕೆಲಸದ ಅವಧಿಯಲ್ಲಿ ಕ್ಯಾಂಡಿ ಕ್ರಷ್ ಆಡಿದ ಶಿಕ್ಷಕ ಅಮಾನತು!

Date:

Advertisements

ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕರೊಬ್ಬರನ್ನು ಕೆಲಸದ ಅವಧಿಯಲ್ಲಿ ಫೋನ್‌ನಲ್ಲಿ ಕ್ಯಾಂಡಿ ಕ್ರಷ್ ಆಡುತ್ತಿದ್ದ ಮತ್ತು ಕರೆಯಲ್ಲಿ ಮಾತನಾಡುತ್ತಿದ್ದ ಕಾರಣದಿಂದಾಗಿ ಅಮಾನತುಗೊಳಿಸಲಾಗಿದೆ.

ಜಿಲ್ಲಾಧಿಕಾರಿ ರಾಜೇಂದ್ರ ಪನ್ಸಿಯಾ ಅವರು ಪರಿಶೀಲನೆಗಾಗಿ ಶಾಲೆಗೆ ಭೇಟಿ ನೀಡಿದಾಗ ವಿದ್ಯಾರ್ಥಿಗಳ ಕಾಪಿ ಪುಸ್ತಕಗಳಲ್ಲಿ ಮೊದಲ ಪುಟದಿಂದ ಹಿಡಿದು ಕೊನೆಯ ಪುಟದವರೆಗೂ ಹಲವಾರು ತಪ್ಪುಗಳು ಕಂಡು ಬಂದಿದೆ. ಇದಾದ ಬಳಿಕ ಘಟನೆಯು ಬೆಳಕಿಗೆ ಬಂದಿದೆ.

ನಂತರ ಶಿಕ್ಷಕನ ಫೋನ್‌ನಲ್ಲಿ ನಿರ್ದಿಷ್ಟ ಅಪ್ಲಿಕೇಷನ್ ಬಳಕೆಯ ಅವಧಿಯನ್ನು ಪರಿಶೀಲಿಸಲಾಗಿದ್ದು, ಈ ವೇಳೆ ಶಿಕ್ಷಕ ಶಾಲಾ ಅವಧಿಯಲ್ಲಿ ಸುಮಾರು ಎರಡು ಗಂಟೆಗೂ ಅಧಿಕ ಕಾಲ ಕ್ಯಾಂಡಿ ಕ್ರಷ್ ಆಟ ಆಡಿರುವುದು ಬಹಿರಂಗವಾಗಿದೆ.

Advertisements

“ಶಿಕ್ಷಕರು ವಿದ್ಯಾರ್ಥಿಗಳ ಹೋಮ್‌ವರ್ಕ್‌ಗಳನ್ನು ಪರಿಶೀಲಿಸುವತ್ತ ಗಮನಹರಿಸಬೇಕು. ಮಕ್ಕಳು ಗುಣಮಟ್ಟದ ಶಿಕ್ಷಣವನ್ನು ಪಡೆಯುವುದನ್ನು ಖಾತ್ರಿಪಡಿಸಿಕೊಳ್ಳಬೇಕು” ಎಂದು ರಾಜೇಂದ್ರ ಪನ್ಸಿಯಾ ಇಂಡಿಯಾ ಟುಡೇಗೆ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?   ಗುಜರಾತ್ | ರಾಜ್‌ಕೋಟ್‌ನ ಗೇಮಿಂಗ್ ಝೋನ್‌ನಲ್ಲಿ ಭಾರೀ ಬೆಂಕಿ ಅವಘಡ; 20 ಮಂದಿ ಮೃತ್ಯು

“ಮೊಬೈಲ್ ಫೋನ್‌ಗಳನ್ನು ಬಳಸುವುದು ಸಮಸ್ಯೆಯಲ್ಲ. ಆದರೆ ಶಾಲಾ ಸಮಯದಲ್ಲಿ ವೈಯಕ್ತಿಕ ಕಾರಣಗಳಿಗಾಗಿ ಅವುಗಳನ್ನು ಬಳಸುವುದು ಸರಿಯಲ್ಲ” ಎಂದೂ ಕೂಡಾ ರಾಜೇಂದ್ರ ಪನ್ಸಿಯಾ ಹೇಳಿದ್ದಾರೆ.

ಜಿಲ್ಲಾಧಿಕಾರಿ ರಾಜೇಂದ್ರ ಪನ್ಸಿಯಾ ಅವರು ಆರು ವಿದ್ಯಾರ್ಥಿಗಳ ಕಾಪಿ ಪುಸ್ತಕವನ್ನು ಪರಿಶೀಲಿಸಿದ್ದಾರೆ. ಇದರಲ್ಲಿ 95 ತಪ್ಪುಗಳು ಕಂಡುಬಂದಿದೆ. ಅದರಲ್ಲಿಯೂ ಒಂಬತ್ತು ತಪ್ಪುಗಳು ಮೊದಲ ಪುಟದಲ್ಲಿಯೇ ಕಂಡುಬಂದಿದೆ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಸಹಾಯಕ ಶಿಕ್ಷಕ ಪ್ರಿಯಾಂ ಗೋಯಲ್ ಅವರ ಫೋನ್ ಪರಿಶೀಲಿಸಿದರು.

ಈ ವೇಳೆ ಶಿಕ್ಷಕ ಪ್ರತಿದಿನ ಸರಾಸರಿ ಒಂದೂವರೆ ಗಂಟೆ ಕಾಲ ಕ್ಯಾಂಡಿ ಕ್ರಷ್ ಅನ್ನು ಆಡಿರುವುದು ಬಹಿರಂಗವಾಗಿದೆ. ಶಾಲೆಯ ಐದೂವರೆ ಗಂಟೆಗಳಲ್ಲಿ, ಪ್ರಿಯಮ್ ಗೋಯಲ್ ಕ್ಯಾಂಡಿ ಕ್ರಷ್‌ನಲ್ಲಿ ಸುಮಾರು ಎರಡು ಗಂಟೆಗಳ ಕಾಲ ಕಳೆದಿದ್ದು, 26 ನಿಮಿಷಗಳ ಕಾಲ ಫೋನ್‌ನಲ್ಲಿ ಮಾತನಾಡಿದ್ದು, ಸುಮಾರು 30 ನಿಮಿಷಗಳ ಕಾಲ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್‌ಗಳನ್ನು ಬಳಸಿದ್ದಾರೆ ಎಂದು ತಿಳಿದುಬಂದಿದೆ.

ಇದಾದ ಬಳಿಕ ಜಿಲ್ಲಾಧಿಕಾರಿ ರಾಜ್ಯ ಶಿಕ್ಷಣ ಇಲಾಖೆಗೆ ಈ ಬಗ್ಗೆ ಮಾಹಿತಿ ನೀಡಿದ್ದ, ಶಿಕ್ಷಣ ಇಲಾಖೆಯು ಸಹಾಯಕ ಶಿಕ್ಷಕ ಪ್ರಿಯಮ್ ಗೋಯಲ್ ಅವರನ್ನು ಅಮಾನತುಗೊಳಿಸಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X