ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಯೋಗಿ ಸರ್ಕಾರ; ಒಂದೇ ದಿನ ಯುಪಿಪಿಎಸ್‌ಸಿ ಪರೀಕ್ಷೆ ನಡೆಸಲು ಅಸ್ತು

Date:

Advertisements

ಸತತ ನಾಲ್ಕು ದಿನಗಳ ಕಾಲ ಯುಪಿಎಸ್‌ಸಿ ಆಕಾಂಕ್ಷಿಗಳು ನಡೆಸಿದ ಪ್ರತಿಭಟನೆಗೆ ಕೊನೆಗೂ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಮಣಿದಿದೆ. ಒಂದೇ ದಿನದಲ್ಲಿ ಉತ್ತರ ಪ್ರದೇಶ ಲೋಕಸೇವಾ ಆಯೋಗ (ಯುಪಿಪಿಎಸ್‌ಸಿ) ಪೂರ್ವಭಾವಿ ಪರೀಕ್ಷೆಯನ್ನು ನಡೆಸಲು ಯೋಗಿ ಸರ್ಕಾರ ಅಸ್ತು ಎಂದಿದೆ.

ಪಿಸಿಎಸ್ ಮತ್ತು ಆರ್‌ಒ/ಎಆರ್‌ಒ ಪರೀಕ್ಷೆಗಳನ್ನು ಒಂದು ದಿನ ಮತ್ತು ಒಂದೇ ಪಾಳಿಯಲ್ಲಿ ನಡೆಸಬೇಕು ಎಂದು ಒತ್ತಾಯಿಸಿ ಪ್ರಯಾಗ್‌ರಾಜ್‌ನಲ್ಲಿ ಹಲವು ಆಕಾಂಕ್ಷಿಗಳು ಯುಪಿಪಿಎಸ್‌ಸಿ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ನಾಲ್ಕು ದಿನಗಳ ಪ್ರತಿಭಟನೆಯ ಬಳಿಕ ಸರ್ಕಾರವು ಈ ನಿರ್ಧಾರವನ್ನು ತಳೆದಿದೆ.

ಯುಪಿಎಸ್‌ಸಿ ಕಾರ್ಯದರ್ಶಿ ಅಶೋಕ್‌ಕುಮಾರ್‌ ಗುರುವಾರ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿ ಮಾಡಿದರು. ಅದಾದ ಬಳಿಕ ಆರ್‌ಒ/ಎಆರ್‌ಒ ಪರೀಕ್ಷೆಗಾಗಿ ಆಯೋಗದಿಂದ ಸಮಿತಿಯನ್ನು ರಚಿಸಲಾಗಿದೆ ಎಂದು ಸಿಎಂ ಕಚೇರಿ ಹೇಳಿದೆ.

Advertisements

ಇದನ್ನು ಓದಿದ್ದೀರಾ? ಬ್ರೇಕಿಂಗ್ ನ್ಯೂಸ್‌ | ‘ಬುಲ್ಡೋಜರ್ ನ್ಯಾಯ’ ನಿಷೇಧ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು; ಯೋಗಿ ಸರ್ಕಾರಕ್ಕೆ ತರಾಟೆ

ಈ ಬಗ್ಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಪ್ರಯಾಗ್‌ರಾಜ್‌ನಲ್ಲಿರುವ ಯುಪಿಎಸ್‌ಸಿ ವಿದ್ಯಾರ್ಥಿಗಳ ಬಗ್ಗೆ ಯುಪಿ ಸರ್ಕಾರ ಮತ್ತು ಉತ್ತರ ಪ್ರದೇಶ ಸಾರ್ವಜನಿಕ ಸೇವಾ ಆಯೋಗದ ವರ್ತನೆ ಅತ್ಯಂತ ಸಂವೇದನಾರಹಿತ ಮತ್ತು ದುರದೃಷ್ಟಕರವಾಗಿದೆ. ಸಾಮಾನ್ಯೀಕರಣದ ಹೆಸರಿನಲ್ಲಿ ಪಾರದರ್ಶಕವಲ್ಲದ ವ್ಯವಸ್ಥೆ ಸ್ವೀಕಾರಾರ್ಹವಲ್ಲ. ಒಂದೇ ಪಾಳಿಯಲ್ಲಿ ಪರೀಕ್ಷೆಗೆ ವಿದ್ಯಾರ್ಥಿಗಳ ಬೇಡಿಕೆಯು ಸಂಪೂರ್ಣವಾಗಿ ಸಮರ್ಥನೀಯವಾಗಿದೆ” ಎಂದು ಹೇಳಿದ್ದಾರೆ.

“ಶಿಕ್ಷಣ ವ್ಯವಸ್ಥೆಯನ್ನು ಹಾಳುಗೆಡವುತ್ತಿರುವ ಬಿಜೆಪಿ ಸರ್ಕಾರದ ಅದಕ್ಷತೆಗೆ ವಿದ್ಯಾರ್ಥಿಗಳೇಕೆ ಬೆಲೆ ತೆರಬೇಕು? ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಬೀದಿಗಿಳಿದು ಹೋರಾಟ ಮಾಡುವಂತಾಗಿದೆ. ಇದೀಗ ಪೊಲೀಸರಿಂದ ಕಿರುಕುಳ ಅನುಭವಿಸುವಂತಾಗಿದೆ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

“ತಮ್ಮ ಮತ್ತು ತಮ್ಮ ಕುಟುಂಬದ ಕನಸುಗಳನ್ನು ನನಸಾಗಿಸಲು ಮನೆ ಬಿಟ್ಟು ಅಭ್ಯಾಸ ಮಾಡುತ್ತಿರುವ ಯುವಕರಿಗೆ ಆಗುತ್ತಿರುವ ಈ ಅನ್ಯಾಯವನ್ನು ನಾವು ಒಪ್ಪುವುದಿಲ್ಲ. ಸ್ಪರ್ಧಾತ್ಮಕ ವಿದ್ಯಾರ್ಥಿಗಳ ಬೇಡಿಕೆಯನ್ನು ನಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ಅವರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಸರ್ವಾಧಿಕಾರದಿಂದ ಹತ್ತಿಕ್ಕಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X