ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಯೋಗಿ ಸರ್ಕಾರ; ಒಂದೇ ದಿನ ಯುಪಿಪಿಎಸ್‌ಸಿ ಪರೀಕ್ಷೆ ನಡೆಸಲು ಅಸ್ತು

Date:

ಸತತ ನಾಲ್ಕು ದಿನಗಳ ಕಾಲ ಯುಪಿಎಸ್‌ಸಿ ಆಕಾಂಕ್ಷಿಗಳು ನಡೆಸಿದ ಪ್ರತಿಭಟನೆಗೆ ಕೊನೆಗೂ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಮಣಿದಿದೆ. ಒಂದೇ ದಿನದಲ್ಲಿ ಉತ್ತರ ಪ್ರದೇಶ ಲೋಕಸೇವಾ ಆಯೋಗ (ಯುಪಿಪಿಎಸ್‌ಸಿ) ಪೂರ್ವಭಾವಿ ಪರೀಕ್ಷೆಯನ್ನು ನಡೆಸಲು ಯೋಗಿ ಸರ್ಕಾರ ಅಸ್ತು ಎಂದಿದೆ.

- Advertisement -

ಪಿಸಿಎಸ್ ಮತ್ತು ಆರ್‌ಒ/ಎಆರ್‌ಒ ಪರೀಕ್ಷೆಗಳನ್ನು ಒಂದು ದಿನ ಮತ್ತು ಒಂದೇ ಪಾಳಿಯಲ್ಲಿ ನಡೆಸಬೇಕು ಎಂದು ಒತ್ತಾಯಿಸಿ ಪ್ರಯಾಗ್‌ರಾಜ್‌ನಲ್ಲಿ ಹಲವು ಆಕಾಂಕ್ಷಿಗಳು ಯುಪಿಪಿಎಸ್‌ಸಿ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ನಾಲ್ಕು ದಿನಗಳ ಪ್ರತಿಭಟನೆಯ ಬಳಿಕ ಸರ್ಕಾರವು ಈ ನಿರ್ಧಾರವನ್ನು ತಳೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಯುಪಿಎಸ್‌ಸಿ ಕಾರ್ಯದರ್ಶಿ ಅಶೋಕ್‌ಕುಮಾರ್‌ ಗುರುವಾರ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿ ಮಾಡಿದರು. ಅದಾದ ಬಳಿಕ ಆರ್‌ಒ/ಎಆರ್‌ಒ ಪರೀಕ್ಷೆಗಾಗಿ ಆಯೋಗದಿಂದ ಸಮಿತಿಯನ್ನು ರಚಿಸಲಾಗಿದೆ ಎಂದು ಸಿಎಂ ಕಚೇರಿ ಹೇಳಿದೆ.

ಇದನ್ನು ಓದಿದ್ದೀರಾ? ಬ್ರೇಕಿಂಗ್ ನ್ಯೂಸ್‌ | ‘ಬುಲ್ಡೋಜರ್ ನ್ಯಾಯ’ ನಿಷೇಧ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು; ಯೋಗಿ ಸರ್ಕಾರಕ್ಕೆ ತರಾಟೆ

ಈ ಬಗ್ಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಪ್ರಯಾಗ್‌ರಾಜ್‌ನಲ್ಲಿರುವ ಯುಪಿಎಸ್‌ಸಿ ವಿದ್ಯಾರ್ಥಿಗಳ ಬಗ್ಗೆ ಯುಪಿ ಸರ್ಕಾರ ಮತ್ತು ಉತ್ತರ ಪ್ರದೇಶ ಸಾರ್ವಜನಿಕ ಸೇವಾ ಆಯೋಗದ ವರ್ತನೆ ಅತ್ಯಂತ ಸಂವೇದನಾರಹಿತ ಮತ್ತು ದುರದೃಷ್ಟಕರವಾಗಿದೆ. ಸಾಮಾನ್ಯೀಕರಣದ ಹೆಸರಿನಲ್ಲಿ ಪಾರದರ್ಶಕವಲ್ಲದ ವ್ಯವಸ್ಥೆ ಸ್ವೀಕಾರಾರ್ಹವಲ್ಲ. ಒಂದೇ ಪಾಳಿಯಲ್ಲಿ ಪರೀಕ್ಷೆಗೆ ವಿದ್ಯಾರ್ಥಿಗಳ ಬೇಡಿಕೆಯು ಸಂಪೂರ್ಣವಾಗಿ ಸಮರ್ಥನೀಯವಾಗಿದೆ” ಎಂದು ಹೇಳಿದ್ದಾರೆ.

“ಶಿಕ್ಷಣ ವ್ಯವಸ್ಥೆಯನ್ನು ಹಾಳುಗೆಡವುತ್ತಿರುವ ಬಿಜೆಪಿ ಸರ್ಕಾರದ ಅದಕ್ಷತೆಗೆ ವಿದ್ಯಾರ್ಥಿಗಳೇಕೆ ಬೆಲೆ ತೆರಬೇಕು? ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಬೀದಿಗಿಳಿದು ಹೋರಾಟ ಮಾಡುವಂತಾಗಿದೆ. ಇದೀಗ ಪೊಲೀಸರಿಂದ ಕಿರುಕುಳ ಅನುಭವಿಸುವಂತಾಗಿದೆ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

“ತಮ್ಮ ಮತ್ತು ತಮ್ಮ ಕುಟುಂಬದ ಕನಸುಗಳನ್ನು ನನಸಾಗಿಸಲು ಮನೆ ಬಿಟ್ಟು ಅಭ್ಯಾಸ ಮಾಡುತ್ತಿರುವ ಯುವಕರಿಗೆ ಆಗುತ್ತಿರುವ ಈ ಅನ್ಯಾಯವನ್ನು ನಾವು ಒಪ್ಪುವುದಿಲ್ಲ. ಸ್ಪರ್ಧಾತ್ಮಕ ವಿದ್ಯಾರ್ಥಿಗಳ ಬೇಡಿಕೆಯನ್ನು ನಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ಅವರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಸರ್ವಾಧಿಕಾರದಿಂದ ಹತ್ತಿಕ್ಕಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

Formula E Case: ಎಸಿಬಿ ನ್ಯಾಯಾಲಯಕ್ಕೆ ಕೆಟಿಆರ್ ಹಾಜರು; ‘ದುರುದ್ದೇಶಪೂರಿತ ಪ್ರಚಾರ’ ಎಂದು ವಾಗ್ದಾಳಿ

ಫಾರ್ಮುಲಾ ಇ ರೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್ ಕಾರ್ಯಾಧ್ಯಕ್ಷ ಹಾಗೂ ತೆಲಂಗಾಣ...

ಪಂಜಾಬ್: ಬಿಜೆಪಿ ನಾಯಕ ರವನೀತ್ ಸಿಂಗ್ ಬೆಂಗಾವಲು ಪಡೆಯ ಮೇಲೆ ದಾಳಿ

ಪಂಜಾಬ್‌ನಲ್ಲಿ ಆಯೋಜಿಸಲಾಗಿದ್ದ ಬಿಜೆಪಿಯ ಮಾದಕವಸ್ತು ವಿರೋಧಿ ಅಭಿಯಾನದಲ್ಲಿ ಪಾಲ್ಗೊಳ್ಳಲು ಪಠಾಣ್‌ಕೋಟ್‌ನತ್ತ ತೆರಳುತ್ತಿದ್ದ...

ರಾಜಸ್ಥಾನ ಸ್ಥಳೀಯ ಚುನಾವಣೆ: 86 ಗೆದ್ದರೂ ಮಿಷನ್-200 ಸಾಧಿಸಲು ಬಿಜೆಪಿ ಹರಸಾಹಸ; ‘ಆಪರೇಷನ್ ಲೋಟಸ್’ ಸದ್ದು!

ರಾಜಸ್ಥಾನದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಒಟ್ಟು 200...

ಅಮೆರಿಕದ ಶೇ 100 ಸುಂಕದಿಂದ ಭಾರತದ ಆರ್ಥಿಕತೆಗೆ ಕಾದಿದೆ ಭಾರಿ ಆಪತ್ತು

ವಾಷಿಂಗ್ಟನ್‌ನಿಂದ ಹೊರಬಿದ್ದಿರುವ ಈ ನಿರ್ಧಾರ ಭಾರತದ ಆರ್ಥಿಕತೆಯ ಪಾಲಿಗೆ ಅಕ್ಷರಶಃ ಮರಣಶಾಸನವಾಗಿ...