ಉತ್ತರಾಖಂಡ ಮಳೆ | ತೆಹ್ರಿ ಗಡ್ವಾಲ್ ಭೂಕುಸಿತ: ತಾಯಿ, ಮಗಳು ಜೀವಂತ ಸಮಾಧಿ

Date:

Advertisements

ಕಳೆದ ಮೂರು ದಿನಗಳಿಂದ ಉತ್ತರಾಖಂಡದ ಗುಡ್ಡಗಾಡು ಪ್ರದೇಶಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸರಣಿ ಭೂಕುಸಿತ ಉಂಟಾಗಿದೆ. ತೆಹ್ರಿ ಗಡ್ವಾಲ್ ಭೂಕುಸಿತದಲ್ಲಿ ತಾಯಿ, ಮಗಳು ಜೀವಂತ ಸಮಾಧಿಯಾಗಿದ್ದಾರೆ.

ಶುಕ್ರವಾರ ತಡರಾತ್ರಿ ಸಂಭವಿಸಿದ ಭೂಕುಸಿತದಿಂದಾಗಿ ತಾಯಿ ಮತ್ತು ಮಗಳು ತಮ್ಮ ಮನೆಯ ಅವಶೇಷದಡಿಯಲ್ಲಿ ಹೂತು ಹೋಗಿದ್ದಾರೆ. ನಿದ್ರೆಯಲ್ಲಿದ್ದ ತಾಯಿ, ಮಗಳು ಅಲ್ಲಿಯೇ ಜೀವಂತ ಸಮಾಧಿಯಾಗಿದ್ದಾರೆ. ಇತರ ಕುಟುಂಬ ಸದಸ್ಯರು ಭೂಕುಸಿತವಾಗುತ್ತಿದ್ದಂತೆ ಸ್ಥಳದಿಂದ ಪರಾರಿಯಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಭೂಕುಸಿತ ಘಟನೆಯ ನಂತರ, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್), ಪೊಲೀಸರು ಮತ್ತು ಕಂದಾಯ ಪೊಲೀಸರ ತಂಡಗಳು ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲು ಟೋಲಿ ಗ್ರಾಮಕ್ಕೆ ಧಾವಿಸಿವೆ. ಈ ನಡುವೆ ಭಾರೀ ಮಳೆಯಿಂದಾಗಿ ಭಿಲಂಗಾನ ಬ್ಲಾಕ್‌ನ ಎಲ್ಲಾ ಶಾಲೆಗಳನ್ನು ಮುಚ್ಚಲಾಗಿದೆ. ಸೂಕ್ಷ್ಮ ಪ್ರದೇಶಗಳ ಗ್ರಾಮಸ್ಥರು ಜಾಗರೂಕರಾಗಿರಲು ಮತ್ತು ಎಚ್ಚರಿಕೆ ವಹಿಸುವಂತೆ ಆಡಳಿತವು ಮನವಿ ಮಾಡಿದೆ.

Advertisements

ಇದನ್ನು ಓದಿದ್ದೀರಾ?  ಉತ್ತರಾಖಂಡ | ತಾತ್ಕಾಲಿಕ ಸೇತುವೆ ಕುಸಿತ; ನದಿಯಲ್ಲಿ ಕೊಚ್ಚಿ ಹೋದ ಪ್ರವಾಸಿಗರು

ಈ ಬಗ್ಗೆ ಟೋಲಿ ಗ್ರಾಮದ ಮುಖಂಡ ರಮೇಶ್ ಜಿರ್ವಾಲ್ ಮಾತನಾಡಿ, “ಕಳೆದ ರಾತ್ರಿ ಸುಮಾರು 2:30ರ ಸುಮಾರಿಗೆ ಈ ಪ್ರದೇಶದಲ್ಲಿ ಭಾರಿ ಮಳೆ ಸುರಿದಿದೆ. ಈ ಸಮಯದಲ್ಲಿ ಸ್ಥಳೀಯ ನಿವಾಸಿ ವೀರೇಂದ್ರ ಲಾಲ್ ಅವರ ಮನೆಯಲ್ಲಿ ಕಟ್ಟಡದ ಹಿಂದೆ ಸಂಭವಿಸಿದ ಭೂಕುಸಿತದಿಂದ ಮನೆಯ ಗೋಡೆಗೆ ಹಾನಿಯಾಗಿದೆ. ವೀರೇಂದ್ರ ಅವರ ಪತ್ನಿ ಸರಿತಾ ದೇವಿ (36) ಮತ್ತು ಅವರ 15 ವರ್ಷದ ಮಗಳು ಅಂಕಿತಾ ಮನೆಯ ಅವಶೇಷಗಳಡಿಯಲ್ಲಿ ಸಮಾಧಿಯಾಗಿದ್ದಾರೆ” ಎಂದು ತಿಳಿಸಿದರು.

ಎಸ್‌ಡಿಆರ್‌ಎಫ್‌ನ ಇನ್ಸ್‌ಪೆಕ್ಟರ್ ಕವೀಂದ್ರ ಸಜ್ವಾನ್ ಮಾಹಿತಿ ನೀಡಿದ್ದು, “ಒಂದೂವರೆ ಗಂಟೆಗಳ ಕಾಲ ನಡೆದ ಕಠಿಣ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯ ನಂತರ ಎಸ್‌ಡಿಆರ್‌ಎಫ್ ತಂಡವು ಇಬ್ಬರ ಮೃತದೇಹವನ್ನು ಹೊರತೆಗೆದಿದೆ” ಎಂದು ಹೇಳಿದರು.

ವಿಪತ್ತು ನಿರ್ವಹಣಾ ಇಲಾಖೆಯ ಮೂಲಗಳ ಪ್ರಕಾರ, ಭೂಕುಸಿತದಿಂದ ತಿಂಗರ್ ಗ್ರಾಮದ ಜೂನಿಯರ್ ಹೈಸ್ಕೂಲ್ ಕಟ್ಟಡವು ಸಂಪೂರ್ಣ ಹಾನಿಯಾಗಿದೆ. ವಿಷನ್ ಗ್ರಾಮವನ್ನು ದಲಾ ಗ್ರಾಮಕ್ಕೆ ಸಂಪರ್ಕಿಸುವ ಸೇತುವೆ ಕೊಚ್ಚಿಹೋಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X