ಪಾನಿಪುರಿ ಕಡಿಮೆ ನೀಡಿದ್ದಕ್ಕೆ ರಸ್ತೆ ಮಧ್ಯೆ ಪ್ರತಿಭಟನೆಗೆ ಕುಳಿತ ಮಹಿಳೆ: ವಿಡಿಯೋ ವೈರಲ್

Date:

Advertisements

ಇಪ್ಪತ್ತು ರೂಪಾಯಿಗೆ ಆರು ಪಾನಿಪುರಿ ನೀಡುವ ಬದಲು ಬರೀ ನಾಲ್ಕು ಪಾನಿಪುರಿ ನೀಡಿದ್ದಕ್ಕೆ ನೊಂದ ಮಹಿಳೆಯೊಬ್ಬರು ರಸ್ತೆ ಮಧ್ಯೆ ಕುಳಿತು ಪ್ರತಿಭಟನೆ ನಡೆಸಿದ ಘಟನೆ ವಡೋದರಾದಲ್ಲಿ ನಡೆದಿದೆ. ಮಹಿಳೆ ರಸ್ತೆ ಮಧ್ಯೆ ಅಳುತ್ತಾ ಕುಳಿತಿದ್ದರಿಂದ ವಾಹನ ಸವಾರರು ಬೇರೆ ಲೇನ್‌ನಲ್ಲಿ ಸಾಗಬೇಕಾದ ಸ್ಥಿತಿ ಉಂಟಾಗಿತ್ತು. ಕೊನೆಗೆ ಪೊಲೀಸರು ಮಧ್ಯಪ್ರವೇಶಿಸಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಮಹಿಳೆ ರಸ್ತೆ ಮಧ್ಯೆ ಕುಳಿತು ಅಳುತ್ತಿರುವುದು, “20 ರೂಪಾಯಿಗೆ ಬರೀ ನಾಲ್ಕು ಪಾನಿ ಪುರಿ ನೀಡಲಾಗಿದೆ, ಆರು ಪಾನಿಪುರಿ ನೀಡಬೇಕಾಗಿತ್ತು. ಈ ಅಂಗಡಿಯನ್ನೇ ಮುಚ್ಚಿಸಬೇಕು” ಎಂದು ಮಹಿಳೆ ಆಗ್ರಹಿಸಿರುವುದು ವಿಡಿಯೋದಲ್ಲಿ ಕಾಣಬಹುದು. ವಡೋದರಾ ಪೊಲೀಸರು ಈ ಸಮಸ್ಯೆಯನ್ನು ಪರಿಹರಿಸಿದ್ದಾರೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಪಾನಿಪುರಿ ವ್ಯಾಪಾರಿಗಳಿಗೂ ಜಿಎಸ್‌ಟಿ; ಕೇಂದ್ರದ ವಿರುದ್ಧ ಆಕ್ರೋಶ

“ಮಹಿಳೆ ರಸ್ತೆಯಲ್ಲಿ ಕುಳಿತು ಅಳಲು ಪ್ರಾರಂಭಿಸಿದರು. ವಡೋದರಾ ಪೊಲೀಸರು ಸಮಸ್ಯೆಯನ್ನು ಪರಿಹರಿಸಿದರು. ಸುರ್‌ಸಾಗರ್‌ ಬಳಿ ಈ ಘಟನೆ ನಡೆದಿದೆ” ಎಂದು ವಿಡಿಯೋ ಪೋಸ್ಟ್‌ ಮಾಡಿದ ಸಾಗರ್ ಪಟೋಲಿಯಾ ಎಕ್ಸ್‌ ಖಾತೆಯಲ್ಲಿ ಉಲ್ಲೇಖಿಸಲಾಗಿದೆ. ಇನ್ನೋರ್ವರು “ವಡೋದರಾ ಪೊಲೀಸರು ಮಧ್ಯಪ್ರವೇಶಿಸಿ ಈ ಪಾನಿಪುರಿ ಬಿಕ್ಕಟ್ಟನ್ನು ತ್ವರಿತವಾಗಿ ಪರಿಹರಿಸಿದ್ದಕ್ಕಾಗಿ ಅವರಿಗೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ಈ ಪಾನಿಪುರಿ ಪ್ರತಿಭಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು “ಈ ವಿಚಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಬೇಕಾಗಿದ್ದು” ಎಂದು ವ್ಯಂಗ್ಯವಾಡಿದ್ದಾರೆ. “ಪಾವತಿಸಿದ ಹಣಕ್ಕೆ ಸರಿಯಾಗಿ ಪಾನಿಪುರಿ ಸಿಕ್ಕಿದೆಯೇ ಎಂದು ಕೇಳುವ ಹಕ್ಕು ಇದೆ” ಎಂದು ಕೆಲವು ನೆಟ್ಟಿಗರು ಹೇಳಿದರೆ, “ಪ್ರತಿಭಟಿಸುವಷ್ಟು, ಮಾರ್ಗಗಳನ್ನು ನಿರ್ಬಂಧಿಸುವಷ್ಟು ದೊಡ್ಡ ಕಾರಣ ಇದಲ್ಲ. ಇದು ಮೂರ್ಖತನ” ಎಂದು ಇನ್ನು ಕೆಲವು ನೆಟ್ಟಿಗರು ಅಭಿಪ್ರಾಯಿಸಿದ್ದಾರೆ.

“ಪಾನಿಪುರಿ ಭೈಯ್ಯ ಅವರಿಗೆ 20 ರೂಪಾಯಿಗೆ ಆರು ಪಾನಿಪುರಿ ನೀಡುವ ಬದಲಾಗಿ ಕೇವಲ ನಾಲ್ಕು ಪಾನಿಪುರಿಗಳನ್ನು ನೀಡಿದರು. ಅದರ ವಿರುದ್ದ ಪ್ರತಿಭಟಿಸಲು ಮಹಿಳೆ ರಸ್ತೆಯ ಮಧ್ಯದಲ್ಲಿ ಕುಳಿತರು. ರಾಹುಲ್ ಗಾಂಧಿಯವರು ಮತ ಕಳ್ಳತನದ ಬಗ್ಗೆ ಗಂಭೀರವಾದ ಆರೋಪ ಮಾಡುತ್ತಿದ್ದಾರೆ. ಆದರೆ ಜನರಿಗೆ ಪಾನಿಪುರಿ ಪ್ರತಿಭಟನೆಯೇ ಅತಿ ಗಂಭೀರವಾಗಿದೆ” ಎಂದು ಇನ್ನೋರ್ವರು ಕಾಮೆಂಟ್ ಮಾಡಿದ್ದಾರೆ.

“ಪಾನಿಪುರಿ ವಿಷಯದಲ್ಲಿ ನಡೆದ ಅನ್ಯಾಯವು ನಗುವ ವಿಷಯವಲ್ಲ. ಇದನ್ನು ನೋಡಿ ನಗುವವರಿಗೆ ನಾಚಿಕೆಯಾಗಬೇಕು. ಪಾನಿ ಪುರಿ ಎಂದರೆ ಉತ್ಸಾಹ, ಭಾವನೆ, ಬಯಕೆ. ಒಂದು ತಟ್ಟೆಯಲ್ಲಿ ಆರಕ್ಕಿಂತ ಕಡಿಮೆ ಪಾನಿಪುರಿ ಇದ್ದರೆ ಅದನ್ನು ಒಪ್ಪಲಾಗದು” ಎಂದೂ ನೆಟ್ಟಗರು ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರ ಬಂಧನ

ಯುವತಿಯೊಬ್ಬರ ಮೇಲೆ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ. ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ...

ರೆಪೋ ದರ ಶೇ. 5.5 ಕ್ಕೆ ಸ್ಥಿರವಾಗಿರಿಸಿದ ಆರ್‌ಬಿಐ; ಸತತ ಎರಡನೇ ಬಾರಿಯೂ ಯಥಾಸ್ಥಿತಿ

ಶೇ.5.5ರ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ ಎಂದು...

Bihar SIR | ಬಿಜೆಪಿ-ಚುನಾವಣಾ ಆಯೋಗದ ಕುತಂತ್ರಕ್ಕೆ 47 ಲಕ್ಷ ಮತದಾರರು ಬಲಿ

ಚುನಾವಣೆಯ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ತೀವ್ರ...

ಎಲ್ಲರ ತಾಯಿ ಸಾಯುತ್ತಾರೆ; ರಜೆ ಕೇಳಿದ್ದಕ್ಕೆ ಮೇಲಧಿಕಾರಿಯ ಉಡಾಫೆಯ ಉತ್ತರ

ತಾಯಿಯನ್ನು ಕಳೆದುಕೊಂಡ ದುಃಖದಲ್ಲಿ ರಜೆ ಕೇಳಿದ ಬ್ಯಾಂಕ್ ಉದ್ಯೋಗಿಗೆ, “ಎಲ್ಲರ ತಾಯಿ...

Download Eedina App Android / iOS

X