ದೇವಿ ಪ್ರತ್ಯಕ್ಷವಾಗಲಿಲ್ಲ ಎಂದು ಅರ್ಚಕ ಆತ್ಮಹತ್ಯೆ

Date:

Advertisements

ತಾವು ಪೂಜಿಸುತ್ತಿದ್ದ ಕಾಳಿ ದೇವಿ ಪ್ರತ್ಯಕ್ಷವಾಗಲಿಲ್ಲವೆಂದು ಅರ್ಚಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದಿದೆ. ಮೃತ ಅರ್ಚಕನನ್ನು ಅಮಿತ್ ಶರ್ಮಾ ಎಂದು ಗುರುತಿಸಲಾಗಿದ್ದು, ಆತ ಕತ್ತು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾಳಿ ದೇವಿ ಪ್ರತ್ಯಕ್ಷವಾಗಬೇಕೆಂದು ಸತತ 24 ಗಂಟಗಳ ಕಾಲ ಅಮಿತ್‌ ಶರ್ಮಾ ಪೂಜೆ ಮಾಡಿದ್ದರು. ಆದರೆ, ದೇವಿ ಪ್ರತ್ಯಕ್ಷವಾಗಿಲ್ಲ. ಕುಪಿತಗೊಂಡ ಅರ್ಚಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಾರಾಣಸಿಯ ಗಾಯ್ ಘಾಟ್ ಪ್ರದೇಶದಲ್ಲಿ ಅಮಿತ್ ಶರ್ಮಾ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಕಾಳಿ ದೇವಿಯು ತನಗೆ ಕಾಣಿಸಿಕೊಳ್ಳುತ್ತಾಳೆ ಎಂಬ ಮೌಢ್ಯಕ್ಕೆ ಒಳಗಾಗಿದ್ದ ಶರ್ಮಾ ನಿರಂತರವಾಗಿ 24 ಗಂಟೆಗಳ ಕಾಲ ಪೂಜೆಗಳನ್ನು ಮಾಡಿದ್ದರು. ಆದರೆ, ಯಾವ ದೇವಿಯೂ ಪ್ರತ್ಯಕ್ಷವಾಗಿಲ್ಲ. ಹೀಗಾಗಿ, ಅವರ ಪತ್ನಿ ಮನೆಯಲ್ಲಿ ಇಲ್ಲದಿದ್ದ ಸಮಯದಲ್ಲಿ ಕತ್ತು ಕೊಯ್ಡುಕೊಂಡಿದ್ದಾರೆ. ಶರ್ಮಾ ಅವರ ಪತ್ನಿ ಮನೆಗೆ ಬಂದಾಗ ಪತಿ ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನ ಕಂಡು, ತಕ್ಷಣವೇ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಆ ವೇಳೆಗಾಗಲೇ ಶರ್ಮಾ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

Advertisements

ಜೂಲಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆತ್ಮಹತ್ಯೆ ಸಮಸ್ಯೆಗೆ ಪರಿಹಾರವಲ್ಲ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X