ಟಿಕೆಟ್ ನೀಡದಿದ್ದರೆ ಬಿಜೆಪಿಗೆ ವರುಣ್ ಗಾಂಧಿ ರಾಜೀನಾಮೆ ಸಾಧ್ಯತೆ!

Date:

Advertisements

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡಲು ನಿರಾಕರಿಸಿದರೆ ಸ್ವತಂತ್ರ ಸ್ಪರ್ಧಿಯಾಗಿ ಸ್ಪರ್ಧಿಸಲು ಉತ್ತರ ಪ್ರದೇಶದ ಫಿಲಿಬಿಟ್ ಕ್ಷೇತ್ರದ ಸಂಸದ ಬಿಜೆಪಿ ಸಂಸದ ವರುಣ್ ಗಾಂಧಿ ನಿರ್ಧರಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

2009 ಹಾಗೂ 2019ರ ಚುನಾವಣೆಯಲ್ಲಿ ಪಿಲಿಭಿಟ್ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿರುವ ವರುಣ್ ಗಾಂಧಿ ಮೂರನೇ ಬಾರಿಗೆ ಟಿಕೆಟ್ ನಿರೀಕ್ಷೆಯಲ್ಲಿದ್ದರು.

ಆದರೆ ರಾಜ್ಯ ಬಿಜೆಪಿಯ ಹಲವು ನಾಯಕರು ಕೋರ್‌ ಕಮಿಟಿ ಸಭೆಯಲ್ಲಿ ವರುಣ್ ಗಾಂಧಿಗೆ ಟಿಕೆಟ್ ನೀಡಲು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಾರಿ ಟಿಕೆಟ್ ಸಿಗುವುದು ಅನುಮಾನದ ಹಿನ್ನೆಲೆಯಲ್ಲಿ ಸ್ವತಂತ್ರ ಸ್ಪರ್ಧಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

Advertisements

ಕಳೆದ ವರ್ಷ ಸಭೆಯೊಂದರಲ್ಲಿ ಮಾತನಾಡಿದ್ದ ವರುಣ್ ಗಾಂಧಿ. ಹತ್ತಿರದ ಸಾಧುವಿಗೆ ಅಡ್ಡಿಪಡಿಸಬೇಡಿ, ಮತ್ತೊಬ್ಬ ನಾಯಕರು ಯಾವಾಗ ಮುಖ್ಯಮಂತ್ರಿಯಾಗುತ್ತಾರೆ ಎಂಬುದು ಯಾರಿಗೂ ತಿಳಿದಿಲ್ಲ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಟೀಕಿಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಬಿಜೆಪಿ-ಜೆಡಿಎಸ್ ನಡುವಿನ ಬಿರುಕಲ್ಲ, ಬಿಕ್ಕಟ್ಟಲ್ಲ, ಆಟ

2023ರ ಸೆಪ್ಟೆಂಬರ್‌ನಲ್ಲಿ ಉತ್ತರ ಪ್ರದೇಶ ಸರ್ಕಾರ ಓರ್ವ ರೋಗಿ ಮೃತಪಟ್ಟ ಕಾರಣ ಅಮೇಥಿಯ ಸಂಜಯ್‌ ಗಾಂಧಿ ಆಸ್ಪತ್ರೆಯ ಪರವಾನಗಿಯನ್ನು ರದ್ದುಗೊಳಿಸಿದ್ದನ್ನು ವರುಣ್ ಗಾಂಧಿ ಅಪಹಾಸ್ಯ ಮಾಡಿದ್ದರು.

80 ಲೋಕಸಭಾ ಕ್ಷೇತ್ರದ ಉತ್ತರ ಪ್ರದೇಶದಲ್ಲಿ ಬಿಜೆಪಿ ಈಗಾಗಲೇ ನರೇಂದ್ರ ಮೋದಿ, ರಾಜನಾಥ್ ಸಿಂಗ್‌, ಹೇಮಾ ಮಾಲಿನಿ,ಸ್ಮೃತಿ ಇರಾನಿ ಸೇರಿದಂತೆ 51 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಪಿಲಿಭಿಟ್‌ ಕ್ಷೇತ್ರಕ್ಕೆ ಬಿಜೆಪಿಯಿಂದ ವರುಣ್‌ ಗಾಂಧಿ ಅಥವಾ ಮೇನಕಾ ಗಾಂಧಿ ಬದಲು ಬೇರೆ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ವರುಣ್‌ ಗಾಂಧಿ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಮೊಮ್ಮಗ. ಅವರ ತಂದೆ ಸಂಜಯ್‌ ಗಾಂಧಿ ಇನ್ನೋರ್ವ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರ ಸಹೋದರ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X