ಅತ್ಯಾಚಾರ ಸಂತ್ರಸ್ತರಿಗೆ ಗರ್ಭಪಾತ ಮಾಡಿಸುವ ಹಕ್ಕಿದೆ: ಅಲಹಾಬಾದ್ ಹೈಕೋರ್ಟ್

Date:

Advertisements

ಅತ್ಯಾಚಾರ ಸಂತ್ರಸ್ತೆಯು ಗರ್ಭಪಾತ ಮಾಡಿಸಿಕೊಳ್ಳುವ ಎಲ್ಲಾ ಹಕ್ಕನ್ನು ಹೊಂದಿದ್ದಾರೆ. ಹೆರುವಂತೆ ಆಕೆಗೆ ಒತ್ತಡ ಹೇರುವುದು ಆಕೆಯ ಘನತೆಗೆ ಚ್ಯುತಿ ತಂದಂತೆ ಮತ್ತು ಆಕೆಯ ಮೂಲಭೂತ ಹಕ್ಕು ಉಲ್ಲಂಘಿಸಿದಂತೆ ಆಗುತ್ತದೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.

ನ್ಯಾಯಮೂರ್ತಿ ಮಹೇಶ್ ಚಂದ್ರ ತ್ರಿಪಾಠಿ ಮತ್ತು ಪ್ರಶಾಂತ್ ಕುಮಾರ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠವು ಅತ್ಯಾಚಾರಕ್ಕೆ ಒಳಗಾಗಿ ಗರ್ಭಿಣಿಯಾಗಿರುವ 17 ವರ್ಷದ ಬಾಲಕಿ ಸಲ್ಲಿಸಿದ ಅರ್ಜಿಯ ವಿಚಾರಣೆ ವೇಳೆ ಈ ತೀರ್ಪು ನೀಡಿದೆ.

ಇದನ್ನು ಓದಿದ್ದೀರಾ? ಯುವತಿಯ ಮೇಲೆ ಅತ್ಯಾಚಾರ; ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿದ ಸ್ನೇಹಿತರು

Advertisements

ಗರ್ಭಪಾತಕ್ಕೆ ಸಂಬಂಧಿಸಿದ ಅಧಿನಿಯಮದ ಸೆಕ್ಷನ್ 3(2) ಅನ್ನು ಉಲ್ಲೇಖಿಸಿದ ಕೋರ್ಟ್, “ಅತ್ಯಾಚಾರಕ್ಕೆ ಒಳಗಾದ ಪ್ರಕರಣದಲ್ಲಿ ಗರ್ಭಪಾತಕ್ಕೆ ನಿರಾಕರಿಸುವುದು ಮತ್ತು ತಾಯಿಯಾಗುವಂತೆ ಆಕೆಯ ಮೇಲೆ ಒತ್ತಡ ಹೇರುವುದು ಘನತೆಯಿಂದ ಬದುಕುವ ಹಕ್ಕಿಗೆ ಚ್ಯುತಿ ತಂದಂತೆ ಆಗುತ್ತದೆ. ತನ್ನ ದೇಹದ ಮೇಲೆ ಆಕೆಗೆ ಹಕ್ಕು ಇದೆ. ಆಕೆಯೇ ತಾನು ತಾಯಿಯಾಗಬೇಕೇ ಅಥವಾ ಬೇಡವೇ ಎಂದು ನಿರ್ಧರಿಸಬೇಕು” ಎಂದು ಹೇಳಿದೆ.

ಇನ್ನು ಬಾಲಕಿಯು ಮೂರು ತಿಂಗಳು, 15 ದಿನಗಳ ಗರ್ಭಿಣಿ ಎಂದು ವರದಿಯಾಗಿದೆ. ಬಾಲಕಿ ಪರ ವಕೀಲರು, ಆಕೆಯ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಲಾಗಿದೆ ಎಂದು ಹೇಳಿದ್ದಾರೆ.

ಇನ್ನು ನಿಯಮ ಪ್ರಕಾರ ಅತ್ಯಾಚಾರಕ್ಕೆ ಒಳಗಾದವರಿಗೆ 24 ವಾರಗಳವರೆಗೆ ಗರ್ಭಪಾತ ಮಾಡಿಸಿಕೊಳ್ಳುವ ಹಕ್ಕಿದೆ ಎಂದು ಕೋರ್ಟ್ ಉಲ್ಲೇಖಿಸಿದೆ. ಹಾಗೆಯೇ ಈ ಹಿಂದಿನ ಸುಪ್ರೀಂ ಕೋರ್ಟ್ ಮತ್ತು ದೆಹಲಿ ಹೈಕೋರ್ಟ್‌ನಲ್ಲಿ ನಡೆದ ಇಂತಹುದ್ದೆ ವಿಚಾರಣೆಯನ್ನು ಕೂಡಾ ಪ್ರಸ್ತಾಪಿಸಿದೆ. ಹಾಗೆಯೇ ಬಾಲಕಿಗೆ ಗರ್ಭಪಾತ ಮಾಡಿಸಿಕೊಳ್ಳಲು ಅಲಹಾಬಾದ್ ಹೈಕೋರ್ಟ್ ಅನುಮತಿ ನೀಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X