ಸಿದ್ಧಿವಿನಾಯಕ ದೇವಸ್ಥಾನದ ಪ್ರಸಾದ ಪ್ಯಾಕೆಟ್‌ಗಳ ಮೇಲೆ ಇಲಿಗಳಿರುವ ವಿಡಿಯೋ ವೈರಲ್

Date:

Advertisements

ತಿರುಪತಿ ಲಡ್ಡುವಿನಲ್ಲಿ ಪ್ರಾಣಿ ಕೊಬ್ಬು ಬಳಸಲಾಗಿದೆ ಎಂಬ ವಿವಾದದ ನಡುವೆ ಮುಂಬೈನ ಸಿದ್ಧಿವಿನಾಯಕ ದೇವಸ್ಥಾನದ ಪ್ರಸಾದ ಪ್ಯಾಕೆಟ್‌ಗಳ ಮೇಲೆ ಇಲಿಗಳಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಶ್ರೀ ಸಿದ್ಧಿವಿನಾಯಕ ಗಣಪತಿ ದೇವಸ್ಥಾನ ಟ್ರಸ್ಟ್ (ಎಸ್‌ಎಸ್‌ಜಿಟಿ) ಈ ಆರೋಪವನ್ನು ಮಾತ್ರ ನಿರಾಕಿಸಿದೆ. ಹಾಗೆಯೇ ಈ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದ್ದೇವೆ ಎಂದು ಎಸ್‌ಎಸ್‌ಜಿಟಿ ಹೇಳಿದೆ. ವಿಡಿಯೋದಲ್ಲಿ ನೀಲಿ ಟ್ರೇನಲ್ಲಿ ಇರಿಸಲಾದ ಲಡ್ಡುಗಳ ಹರಿದ ಪ್ಯಾಕೆಟ್‌ಗಳ ಮೇಲೆ ಇಲಿಗಳು ಇರುವುದು ಕಂಡುಬಂದಿದೆ.

ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಈ ಬಗ್ಗೆ ಪಿಟಿಐಗೆ ಪ್ರತಿಕ್ರಿಯೆ ನೀಡಿದ ಶಿವಸೇನಾ ಮುಖಂಡ ಮತ್ತು ಎಸ್‌ಎಸ್‌ಜಿಟಿ ಅಧ್ಯಕ್ಷ ಸದಾ ಸರ್ವಾಂಕರ್, “ಪ್ರತಿನಿತ್ಯ ಲಕ್ಷ ಲಕ್ಷ ಲಡ್ಡುಗಳನ್ನು ವಿತರಿಸಲಾಗುತ್ತದೆ. ಅವುಗಳನ್ನು ಸಿದ್ಧಪಡಿಸಿದ ಸ್ಥಳವು ಸ್ವಚ್ಛವಾಗಿದೆ. ಆದರೆ ವಿಡಿಯೋದಲ್ಲಿ ಕೊಳಕು ಸ್ಥಳವಿದೆ” ಎಂದು ಹೇಳಿದ್ದಾರೆ.

Advertisements

ಇದನ್ನು ಓದಿದ್ದೀರಾ? ಬೆಳಗಾವಿ | ತಿರುಪತಿ ಲಡ್ಡು ವಿವಾದ; ನಂದಿನಿ ತುಪ್ಪಕ್ಕೆ ಬೇಡಿಕೆ

“ಈ ವಿಡಿಯೋವನ್ನು ನೋಡಿದಾಗ ನಮ್ಮ ದೇವಸ್ಥಾನದಲ್ಲಿ ತೆಗೆದಿರುವುದಲ್ಲ ಎಂದನಿಸುತ್ತದೆ. ಇದು ಬೇರೆಲ್ಲೋ ತೆಗೆದಿರುವ ವಿಡಿಯೋವಾಗಿದೆ” ಎಂದು ತಿಳಿಸಿದ್ದಾರೆ.

“ನಾವು ಸಿಸಿಟಿವಿಯನ್ನು ಪರಿಶೀಲಿಸುತ್ತೇವೆ ಮತ್ತು ವಿಚಾರಣೆ ನಡೆಸಲು ಡಿಸಿಪಿ ಶ್ರೇಣಿಯ ಅಧಿಕಾರಿಯನ್ನು ನೇಮಿಸುತ್ತೇವೆ. ಯಾರೇ ತಪ್ಪಿತಸ್ಥರಾದರೂ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಹೇಳಿದರು.

ಇದಕ್ಕೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸರ್ವಾಂಕರ್, “ದೇವಸ್ಥಾನವು ಪ್ರಸಾದವನ್ನು ಶುದ್ಧ ಸ್ಥಳದಲ್ಲಿ ತಯಾರಿಸುತ್ತದೆ. ತುಪ್ಪ, ಗೋಡಂಬಿ ಮತ್ತು ಇತರ ಪದಾರ್ಥಗಳನ್ನು ಮೊದಲು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್‌ನ ಲ್ಯಾಬ್‌ನಲ್ಲಿ ಪರೀಕ್ಷೆಗೆ ಕಳುಹಿಸಲಾಗುತ್ತದೆ. ಅನುಮೋದನೆಯ ನಂತರ ಅದನ್ನು ಬಳಸಲಾಗುತ್ತದೆ. ಲ್ಯಾಬ್‌ನಲ್ಲಿ ನೀರನ್ನು ಸಹ ಪರೀಕ್ಷಿಸಲಾಗುತ್ತದೆ” ಎಂದು ತಿಳಿಸಿದ್ದಾರೆ.

ತಿರುಪತಿ ಲಡ್ಡುಗಳ ವಿವಾದದ ನಡುವೆಯೇ ಈ ವಿಡಿಯೋ ವೈರಲ್ ಆಗಿದೆ. ಹಿಂದಿನ ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ತಿರುಪತಿ ಲಡ್ಡುಗಳಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸೆಪ್ಟೆಂಬರ್ 18ರಂದು ಆರೋಪಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X