ಉತ್ತರ ಪ್ರದೇಶ | ದುರ್ಗಾ ದೇವಿ ಮೆರವಣಿಗೆ ವೇಳೆ ಹಿಂಸಾಚಾರ: ಓರ್ವ ಯುವಕ ಸಾವು

Date:

Advertisements

ದುರ್ಗಾ ದೇವಿ ಮೆರವಣಿಗೆ ವೇಳೆ ಉಂಟಾದ ಕೋಮು ಹಿಂಸಾಚಾರದಿಂದ 22 ವರ್ಷದ ಯುವಕ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಬಹರಾಯಿಚ್‌ನಲ್ಲಿ ನಡೆದಿದೆ. ಘಟನೆಯಿಂದಾಗಿ ಬಹರಾಯಿಚ್‌ನಲ್ಲಿನ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪ್ರಕ್ಷುಬ್ಧ ಜನಸಮೂಹವು ಕಬ್ಬಿಣದ ಸಲಾಕೆಗಳನ್ನು ಹಿಡಿದು ವಾಹನಗಳ ಮೇಲೆ ದಾಳಿ ನಡೆಸಿದ್ದು, ಅಂಗಡಿಗಳಿಗೂ ಬೆಂಕಿ ಹಚ್ಚಿದೆ.

ಮಹಾರಾಜ್‌ಗಂಜ್ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದ ಜನರ ವಾಸಿಸುವ ಮನ್ಸೂರ್‌ ಪ್ರದೇಶದಲ್ಲಿ ಹಿಂದು ಸಮುದಾಯವು ದುರ್ಗಾ ದೇವಿ ಮೆರವಣಿಗೆ ನಡೆಸಿದೆ. ಈ ವೇಳೆ, ಉದ್ದೇಶಪೂರ್ವಕವಾಗಿ ಡಿ.ಜೆ ಸೌಂಡ್‌ ಜಾಸ್ತಿ ಮಾಡಿ, ಗದ್ದಲ ಸೃಷ್ಟಿಸಿದೆ. ಇದನ್ನು ಮುಸ್ಲಿಂ ಸಮುದಾಯದ ಮುಖಂಡರು ಪ್ರಶ್ನಿಸಿದ್ದಾರೆ. ಆ ಕಾರಣಕ್ಕಾಗಿಯೇ ಎರಡೂ ಸಮುದಾಯದ ನಡುವೆ ಗಲಾಟೆ ನಡೆದಿದೆ ಎಂದು ವರದಿಯಾಗಿದೆ.

ಗಲಾಟೆ ವೇಳೆ, ಕಲ್ಲು ತೂರಾಟವೂ ನಡೆದಿದ್ದು, ದುರ್ಗಾ ದೇವಿ ಪ್ರತಿಮೆಗೂ ಹಾನಿಯಾಗಿದೆ. ಅಪರಿಚಿತರು ಗುಂಡಿನ ದಾಳಿ ನಡೆಸಿದ್ದು, ರಾಮ್‌ ಗೋಪಾಲ್‌ ಮಿಶ್ರಾ ಎಂಬ ಯುವಕ ಸಾವನ್ನಪ್ಪಿದ್ದಾರೆ. ಯುವಕನ ಸಾವಿನ ಬಳಿಕ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಕೋಮು ಹಿಂಸಾಚಾರ ಭುಗಿಲೆದ್ದಿದೆ.

Advertisements

ಹಿಂಸಾಚಾರ ಪ್ರಕರಣದಲ್ಲಿ ಎರಡೂ ಸಮುದಾಯದ 25 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕರ್ತವ್ಯ ನಿರ್ಲಕ್ಷ್ಯ ಆರೋಪದ ಮೇಲೆ ಹಾರ್ದಿ ಪೊಲೀಸ್‌ ಠಾಣಾಧಿಕಾರಿ ಸೇರಿದಂತೆ ಇಬ್ಬರನ್ನು ಯೋಗಿ ಸರ್ಕಾರ ಅಮಾನತುಗೊಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X