ಬಿಜೆಪಿ ಸೋಲಿಸುವ ಅಭ್ಯರ್ಥಿಗಳಿಗೆ ಮತ ನೀಡಿ: ರೈತ ನಾಯಕ ರಾಕೇಶ್ ಟಿಕಾಯತ್ ಮನವಿ

Date:

Advertisements

ಲೋಕಸಭಾ ಚುನಾವಣೆಯಲ್ಲಿ ಮೇ.25 ಹಾಗೂ ಜೂನ್‌ 1ರ  ಕೊನೆಯ ಎರಡು ಹಂತದ ಮತದಾನ ಬಾಕಿಯುಳಿದಿದ್ದು, ಈ ಹಿನ್ನೆಲೆಯಲ್ಲಿ ರೈತ ನಾಯಕ ಹಾಗೂ ಸಂಯುಕ್ತ ಕಿಸಾನ್‌ ಮೋರ್ಚಾದ(ಎಸ್‌ಕೆಎಂ) ಅಂಗಸಂಸ್ಥೆ ಭಾರತೀಯ ಕಿಸಾನ್‌ ಯೂನಿಯನ್‌(ಬಿಕೆಯು) ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಅವರು ಬಿಜೆಪಿ ಸೋಲಿಸುವ ಅಭ್ಯರ್ಥಿಗಳಿಗೆ ಮತ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಸಾಮಾಜಿಕ ಮಾಧ್ಯಮದ ಮೂಲಕ ಸಂದೇಶ ನೀಡಿರುವ ಟಿಕಾಯತ್ತ್‌, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪರ್ಧಿಸುತ್ತಿಲ್ಲ ಬದಲಿಗೆ ದೇಶವನ್ನು ತಮ್ಮ ಹಿಡಿತದಲ್ಲಿಟ್ಟುಕೊಂಡಿರುವ ಬಂಡವಾಳಶಾಹಿಗಳ ಗುಂಪು ಚುನಾವಣೆಯಲ್ಲಿ ಸ್ಪರ್ಧಿಸಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

“ಎರಡು ಹಂತಗಳ ಮತದಾನ ಬಾಕಿಯುಳಿದಿದೆ. ಎಸ್‌ಕೆಎಂ ಸ್ಪಷ್ಟವಾಗಿ ಹೇಳುತ್ತದೆ ಬಿಜೆಪಿ ಸೋಲಿಸುವ ಅಭ್ಯರ್ಥಿಗಳಿಗೆ ಮತ ನೀಡಿ. ಇದು ಬಿಜೆಪಿ ಸರ್ಕಾರವಲ್ಲ, ಇದೊಂದು ಬಂಡವಾಳಶಾಹಿ ಗುಂಪಿನ ಸರ್ಕಾರ. ಈ ಗುಂಪು ದೇಶವನ್ನು ಹಿಡಿದಿಟ್ಟುಕೊಂಡಿದ್ದು, ಚುನಾವಣೆಯಲ್ಲಿ ಸ್ಪರ್ಧಿಸಿದೆ. ಯಾರೊಬ್ಬರು ಅವರಿಗೆ ಬೆಂಬಲಿಸಬೇಡಿ” ಎಂದು ಟಿಕಾಯತ್ ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರವೇ ಬರಲಿ, ನೆರೆಯೇ ಇರಲಿ, ಭರವಸೆಗಳಿಗೆ ಬರವಿಲ್ಲ

“ಈ ಚುನಾವಣೆಯು ನೇರವಾಗಿ ಭಾರತದ ಸಾರ್ವಜನಿಕರು ಹಾಗೂ ಒಂದು ಗುಂಪಿನ ನಡುವೆ ನಡೆಯುತ್ತಿದೆ. ಸಾರ್ವಜನಿಕರು ಈ ಚುನಾವಣೆಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಇಲ್ಲಿ ಆತಂಕಪಡುವ ಅಗತ್ಯವಿಲ್ಲ. ನಿಮ್ಮ ಪ್ರದೇಶದಲ್ಲಿ ಬಿಜೆಪಿಯನ್ನು ಸೋಲಿಸುವ ಅಭ್ಯರ್ಥಿಗೆ ಮತ ನೀಡಿ” ಎಂದು ಟಿಕಾಯತ್ ತಿಳಿಸಿದ್ದಾರೆ.

“ನಮಗೆ ನಿರ್ದಿಷ್ಟವಾಗಿ ಯಾರ ವಿರುದ್ಧವೂ ವೈಯುಕ್ತಿತ ಸಮಸ್ಯೆಗಳಿಲ್ಲ. ಎಸ್‌ಕೆಎಂ ಇದನ್ನೇ ಹೇಳುತ್ತಿದೆ. ಹರಿಯಾಣ, ದೆಹಲಿ, ಪಂಜಾಬ್, ಉತ್ತರ ಪ್ರದೇಶ ಅಥವಾ ದೇಶದ ಇತರ ಭಾಗ ಯಾವುದೇ ಇರಲಿ ಎಸ್‌ಕೆಎಂ ಬಿಜೆಪಿ ಸೋಲಿಸುವ ಅಭ್ಯರ್ಥಿಗೆ ಮತ ನೀಡಿ ಎಂದು ಸಂದೇಶಗಳನ್ನು ನೀಡುತ್ತದೆ” ಎಂದು ರಾಕೇಶ್ ಟಿಕಾಯತ್ ಹೇಳಿದರು.

“ಎಸ್‌ಕೆಎಂ ಒಂದು ರಾಜಕೀಯೇತರ ಪಕ್ಷವಾಗಿದ್ದು, ಚುನಾವಣೆಗಳಿಂದ ದೂರವುಳಿದಿದೆ. ನೀವು ನೋಟಾಗೆ ಮತ ನೀಡಿದರೆ ನೇರವಾಗಿ ಸರ್ಕಾರಕ್ಕೆ ಸಹಾಯ ಮಾಡಿದಂತೆ. ಯಾವುದೇ ಕಾರಣಕ್ಕೂ ನೋಟಾಗೆ ಮತ ನೀಡಬೇಡಿ. ಇದು ಜನರ ಚುನಾವಣೆ. ಜನರು ಚುನಾವಣೆಯ ಮೂಲಕ ಹೋರಾಟ ನಡೆಸುತ್ತಿದ್ದಾರೆ. ಫಲಿತಾಂಶ ಏನೇ ಬರಬಹುದು, ನಾವು ಹೋರಾಟಕ್ಕೆ ಸಿದ್ಧರಾಗಿರಬೇಕು. ಜನರು ಶಾಂತವಾಗಿದ್ದಾರೆ ಎಂದರೆ ಅವರ ಕೋಪ ತಣಿದಿದೆ ಎಂದಲ್ಲ. ಸಮಾಧಾನದಿಂದಿರಿ. ಭರವಸೆ ಇಟ್ಟುಕೊಳ್ಳಿ. ಜನರು ಗೆಲುವು ಸಾಧಿಸಲಿದ್ದಾರೆ” ಎಂದು ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X