ಗುರುಗ್ರಾಮ ಹಿಂಸಾಚಾರ ಕುರಿತ ಟ್ವೀಟ್‌ ನನ್ನದಲ್ಲ; ಖಾತೆ ಹ್ಯಾಕ್‌ ಆಗಿತ್ತು ಎಂದ ಬಾಲಿವುಡ್‌ ನಟ ಗೋವಿಂದ

Date:

Advertisements

ಹರಿಯಾಣ ಗಲಭೆ ಕುರಿತಂತೆ ಮಾಡಿದ ಪೋಸ್ಟ್‌ ನಂತರ ನಟ ಗೋವಿಂದ ತಮ್ಮ ಟ್ವಿಟರ್‌ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದಾರೆ ಎನ್ನಲಾಗಿದೆ.

ಗುರುವಾರ ಇನ್‌ಸ್ಟಾಗ್ರಾಂ ಪೋಸ್ಟ್‌ ಒಂದನ್ನು ಮಾಡಿದ ಗೋವಿಂದ ತಮ್ಮ ಟ್ವಿಟರ್‌ ಖಾತೆಯನ್ನು ಹ್ಯಾಕ್‌ ಮಾಡಲಾಗಿತ್ತು ಎಂದಿದ್ದಾರೆ. ತಾನು ಯಾವುದೇ ಟ್ವೀಟ್‌ ಮಾಡಿಲ್ಲ, ತನ್ನ ತಂಡವೂ ಟ್ವೀಟ್‌ ಮಾಡಿಲ್ಲ ಎಂದು ಇನ್‌ಸ್ಟಾಗ್ರಾಂ ವಿಡಿಯೋ ಮೂಲಕ ನಟ ಹೇಳಿದ್ದಾರೆ. ಸೈಬರ್‌ ಕ್ರೈಂ ಘಟಕಕ್ಕೆ ದೂರು ಸಲ್ಲಿಸುವುದಾಗಿಯೂ ಅವರು ತಿಳಿಸಿದ್ದಾರೆ.

ಬುಧವಾರ(ಆಗಸ್ಟ್ 2) @ಗೋವಿಂದಅಹುಜಾ21 ಎಂಬ ಖಾತೆಯಿಂದ ಗುರುಗ್ರಾಮ ಹಿಂಸಾಚಾರ ಕುರಿತು ಟ್ವೀಟ್‌ ಒಂದನ್ನು ಮಾಡಲಾಗಿತ್ತು. ಆದರೆ ತಾನು ಆ ಖಾತೆಯನ್ನು ಬಹಳ ಸಮಯದಿಂದ ಬಳಸಿಲ್ಲ ಎಂದು ಗೋವಿಂದ ಹೇಳಿದ್ದಾರಲ್ಲದೆ ಚುನಾವಣೆ ಸಮಯ ಹತ್ತಿರ ಬರುತ್ತಿರುವುದರಿಂದ ನಾನು ಒಂದು ಪಕ್ಷದ ಪರ ಕಣಕ್ಕಿಳಿಯಬಹುದೆಂದು ಕೆಲ ಜನರು ಅಂದುಕೊಂಡು ಈ ಟ್ವೀಟ್‌ ಮಾಡಿರಬಹುದು. ಆದರೆ ನಾನು ಟ್ವೀಟ್‌ ಮಾಡಿಲ್ಲ, ಇಂತಹ ವಿಷಯಗಳ ಬಗ್ಗೆ ಮಾತನಾಡುವುದೂ ಇಲ್ಲ,” ಎಂದು ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬಳ್ಳಾರಿ ಜೀನ್ಸ್‌ ಘಟಕಗಳಿಗೆ ಸೌಲಭ್ಯ ಕಲ್ಪಿಸಿ: ರಾಜ್ಯ ಸರ್ಕಾರಕ್ಕೆ ರಾಹುಲ್‌ ಪತ್ರ

ಗುರುಗ್ರಾಮದಲ್ಲಿ ಮುಸ್ಲಿಮರ ಅಂಗಡಿಗಳ ಮೇಲಿನ ದಾಳಿ ಸಂಬಂಧಿತ ವಿಡಿಯೋವೊಂದಕ್ಕೆ ಉತ್ತರಿಸಿದ್ದ ಗೋವಿಂದ ಹೆಸರಿನ ಟ್ವಿಟರ್‌ ಖಾತೆಯು “ನಾವೆಷ್ಟು ಕೆಳಮಟ್ಟಕ್ಕೆ ಇಳಿದಿದ್ದೇವೆ. ತಮ್ಮನ್ನು ಹಿಂದುಗಳೆಂದು ಹೇಳಿಕೊಂಡು ನಂತರ ಇಂತಹ ಕೃತ್ಯಗಳನ್ನು ನಡೆಸುವವರಿಗೆ ನಾಚಿಕೆಯಾಗಬೇಕು. ಶಾಂತಿ ಕಾಪಾಡಿ, ನಮ್ಮದು ಡೆಮಾಕ್ರೆಸಿ, ಅಟಾಕ್ರೆಸಿ ಅಲ್ಲ,” ಎಂದು ಟ್ವೀಟ್‌ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಎಮ್ಮೆ ಕೊಡಿಸುವುದಾಗಿ ಹೇಳಿ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಲಕ್ಷಗಟ್ಟಲೆ ವಂಚನೆ

ಕನ್ನಡ ಸಿನಿಮಾದ ನಿರ್ದೇಶಕ ಪ್ರೇಮ್‌ ಅವರು ಎಮ್ಮೆಗಳನ್ನು ಖರೀದಿಸಲು ಮುಂದಾಗಿ ಮೋಸಕ್ಕೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X