ಏನಿದೆ ಪುರಾವೆ?: ಹಿಂಡನ್‌ಬರ್ಗ್ ಪ್ರಕರಣದಲ್ಲಿ ಸುಪ್ರೀಂ ಕಠಿಣ ಪ್ರಶ್ನೆ

Date:

Advertisements

ಅದಾನಿ ಸಮೂಹವನ್ನು ಗುರಿಯಾಗಿಸಿಕೊಂಡು ಜಾರ್ಜ್ ಸೊರೊಸ್ ಬೆಂಬಲಿತ ಸಮೂಹ ಯೋಜನೆ ವರದಿಗೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಇಂದು ಅರ್ಜಿದಾರರ ವಿರುದ್ಧ ಕಠಿಣ ಪ್ರಶ್ನೆಗಳನ್ನು ಕೇಳಿದೆ.

“ನಾವು ವಿದೇಶಿ ವರದಿಗಳನ್ನು ಏಕೆ ಸತ್ಯವೆಂದು ತೆಗೆದುಕೊಳ್ಳಬೇಕು? ನಾವು ವರದಿಯನ್ನು ತಿರಸ್ಕರಿಸುತ್ತಿಲ್ಲ, ಆದರೆ ನಮಗೆ ಪುರಾವೆ ಬೇಕು. ಹಾಗಾದರೆ ಅದಾನಿ ಸಮೂಹದ ವಿರುದ್ಧ ನಿಮ್ಮ ಬಳಿ ಏನು ಪುರಾವೆ ಇದೆ?” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ಅರ್ಜಿದಾರರ ಪರ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಕಠಿಣ ಪ್ರಶ್ನೆಗಳನ್ನು ಕೇಳಿದರು.

ಜಾರ್ಜ್ ಸೊರೊಸ್ ಹಾಗೂ ರಾಕೆಟ್ ಫೆಲ್ಲರ್ ಬ್ರದರ್ಸ್ ಫಂಡ್ ಅನುದಾನಿತ ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಯೋಜನೆ(ಒಸಿಸಿಆರ್ ಪಿ)ಯು ಇಬ್ಬರು ವಿದೇಶಿ ಹೂಡಿಕೆದಾರರ ಮೂಲಕ ಅದಾನಿ ಸಮೂಹ ಆಂತರಿಕ ವಹಿವಾಟು ಮಾಡುತ್ತಿದೆ ಎಂದು ಆರೋಪಿಸಿದೆ. ಈ ಆರೋಪವನ್ನು ಅದಾನಿ ಸಮೂಹ ಯಾವುದೇ ಆಧಾರವಿಲ್ಲ ಎಂದು ಅಲ್ಲಗಳೆದಿತ್ತು.

Advertisements

ಈ ಸುದ್ದಿ ಓದಿದ್ದೀರಾ? ಡ್ರಗ್ಸ್ ಖರೀದಿಸಲು ಹೆತ್ತ ಮಕ್ಕಳನ್ನೆ ಮಾರಾಟ ಮಾಡಿದ ದಂಪತಿ

“ನಾವು ಅಂತಹ ವರದಿಗಳ ಮೇಲೆ ಕ್ರಮ ಕೈಗೊಂಡರೆ ನಮ್ಮ ಏಜೆನ್ಸಿಗಳು ಏನು ಮಾಡುತ್ತವೆ? ವಿದೇಶಿ ವರದಿಗಳಿಂದ ಭಾರತೀಯ ನೀತಿಗಳ ಮೇಲೆ ಪ್ರಭಾವ ಬೀರುವ ಹೊಸ ಪ್ರವೃತ್ತಿ ಇದಾಗಿದೆ” ಎಂದು ಭಾರತೀಯ ಷೇರುಪೇಟೆಯ ನಿಯಂತ್ರಣ ಪ್ರಾಧಿಕಾರ (ಸೆಬಿ) ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.

ಅದಾನಿ ಹಗರಣವು ಭಾರತದ ಒಕ್ಕೂಟ ಸರ್ಕಾರದಲ್ಲಿ ಮೋದಿ ಹಿಡಿತವನ್ನು ದುರ್ಬಲಗೊಳಿಸಲಿದೆ ಮತ್ತು ಬಹು ಅಪೇಕ್ಷಿತ ಸಾಂಸ್ಥಿಕ ಸುಧಾರಣೆಗೆ ಕಾರಣವಾಗಲಿದೆ. ಅದಾನಿಯ ಅವರ ವ್ಯವಹಾರದ ತೊಂದರೆಗಳಿಂದ ಪ್ರಧಾನಿ ಮೋದಿ ದುರ್ಬಲರಾಗುತ್ತಾರೆ ಎಂದು ಅಮೆರಿಕಾದ ಕೋಟ್ಯಾಧಿಪತಿ 92 ವರ್ಷದ ಜಾರ್ಜ್ ಸೊರೊಸ್ ಈ ವರ್ಷದ ಫೆಬ್ರವರಿಯಲ್ಲಿ ಜರ್ಮನಿಯ ಮ್ಯೂನಿಚ್‌ನಲ್ಲಿ ನಡೆದ ಭದ್ರತಾ ಸಮ್ಮೇಳನದಲ್ಲಿ ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X