ಔರಾಂಗಾಬಾದ್, ಉಸ್ಮಾನಾಬಾದ್ ಜಿಲ್ಲೆಗಳ ಹೆಸರು ಬದಲಾವಣೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್

Date:

Advertisements

ಔರಾಂಗಾಬಾದ್, ಉಸ್ಮಾನಾಬಾದ್ ಹೆಸರುಗಳನ್ನು ಛತ್ರಪತಿ ಸಾಂಬಾಜಿ ನಗರ್‌ ಹಾಗೂ ಧರಶಿವ್‌ ಎಂದು ಬದಲಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಬಾಂಬೆ ಹೈಕೋರ್ಟ್ ‘ಹೆಸರಲ್ಲೇನಿದೆ’ ಎಂದು ವಜಾಗೊಳಿಸಿತು.

ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಹಾಗೂ ನ್ಯಾಯಮೂರ್ತಿ ಆರೀಫ್ ಡಾಕ್ಟರ್ ಅವರಿದ್ದ ಪೀಠವು, ಅರ್ಜಿಗಳು ಸರಿಯಾದ ಅರ್ಹತೆಯನ್ನು ಹೊಂದಿಲ್ಲ ಹಾಗೂ ರಾಜ್ಯ ಸರ್ಕಾರ ಹೊರಡಿಸಿರುವ ಹೆಸರು ಬದಲಾವಣೆಯ ಅಧಿಸೂಚನೆಯು ಯಾವುದೇ ಮಧ್ಯಸ್ಥಿಕೆಯನ್ನು ಸಮರ್ಥಿಸುವುದಿಲ್ಲ ಎಂದು ತಮ್ಮ ಆದೇಶದಲ್ಲಿ ತಿಳಿಸಿತು.

“ರಾಜ್ಯ ಸರ್ಕಾರ ಹೊರಡಿಸಿರುವ ಔರಂಗಬಾದ್ ಹಾಗೂ ಉಸ್ಮಾನಾಬಾದ್ ಹೆಸರು ಬದಲಾವಣೆಯ ಅಧಿಸೂಚನೆಯು ಯಾವುದೇ ಅಕ್ರಮ ಅಥವಾ ಕಾನೂನು ದುರ್ಬಲತೆಯನ್ನು ಹೊಂದಿಲ್ಲ ಎಂದು ಹೇಳಲು ನಾವು ಹಿಂಜರಿಯುವುದಿಲ್ಲ” ಎಂದು ಪೀಠವು ತಿಳಿಸಿತು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಕ್ಕಳ ಬಗೆಗಿನ ಮಮಕಾರ ಮತ್ತು ಮೋದಿಯ ಸೋಗಲಾಡಿತನ

ಈ ಸಂದರ್ಭದಲ್ಲಿ ವಿಲಿಯಂ ಶೇಕ್ಸ್‌ಪಿಯರ್‌ನ ರೋಮಿಯೋ ಮತ್ತು ಜೂಲಿಯಟ್‌ ನಾಟಕದ “ ಹೆಸರಲ್ಲೇನಿದೆ? ಗುಲಾಬಿಯನ್ನು ಯಾವುದೇ ಹೆಸರಿನಿಂದ ಕರೆದರೂ ಅದರ ಸುವಾಸನೆ ಸಹಿಯಾಗಿರುತ್ತದೆ” ಎಂಬ ಸಾರಾಂಶವನ್ನು ಪೀಠ ಉಲ್ಲೇಖಿಸಿತು.

ಮಹಾರಾಷ್ಟ್ರ ಕಂದಾಯ ಸಂಹಿತೆಯು ರಾಜ್ಯ ಸರ್ಕಾರವು ಯಾವುದೇ ಭೂಪ್ರದೇಶವನ್ನು ರದ್ದುಗೊಳಿಸಲು ಹಾಗೂ ಭೂಪ್ರದೇಶದ ಹೆಸರು ಹಾಗೂ ಹೊಸ ಹೆಸರನ್ನು ಬದಲಿಸಲು ಅನುಮತಿಸುತ್ತದೆ ಎಂದು ಪೀಠವು ತನ್ನ ತೀರ್ಪಿನಲ್ಲಿ ತಿಳಿಸಿತು.

2022 ರಲ್ಲಿ ಮಹಾರಾಷ್ಟ್ರ ಸಂಪುಟವು ಔರಾಂಗಾಬಾದ್, ಉಸ್ಮಾನಾಬಾದ್ ಹೆಸರುಗಳನ್ನು ಛತ್ರಪತಿ ಸಾಂಬಾಜಿ ನಗರ್‌ ಹಾಗೂ ಧರಶಿವ್‌ ಎಂದು ಬದಲಿಸಿ ಅನುಮೋದನೆ ನೀಡಿತ್ತು. ಹಳೆಯ ಹೆಸರುಗಳನ್ನು ಬದಲಾಯಿಸಿರುವುದನ್ನು ಪ್ರಶ್ನಿಸಿ ಎರಡೂ ಜಿಲ್ಲೆಯ ನಾಗರಿಕರು ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X