ಚುನಾವಣಾ ಬಾಂಡ್ ಅಂಕಿಅಂಶ ಸೂಕ್ತ ಸಮಯಕ್ಕೆ ಬಹಿರಂಗ: ಮುಖ್ಯ ಚುನಾವಣಾ ಆಯುಕ್ತ

Date:

Advertisements

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿರುವ ರಾಜಕೀಯ ಪಕ್ಷಗಳ ಚುನಾವಣಾ ಬಾಂಡ್‌ಗಳ ಅಂಕಿಅಂಶವನ್ನು ಸೂಕ್ತ ಸಮಯಕ್ಕೆ ಬಹಿರಂಗಪಡಿಸುವುದಾಗಿ ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್, “ ನಾನು ಅಂಕಿಅಂಶಗಳನ್ನು ಪರಿಶೀಲಿಸಿ ಸೂಕ್ತ ಸಮಯಕ್ಕೆ ಬಹಿರಂಗ ಪಡಿಸುತ್ತೇನೆ” ಎಂದು ತಿಳಿಸಿದರು.

ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಸ್ಟೇಟ್‌ ಬ್ಯಾಂಕ್ ಇಂಡಿಯಾವು ಚುನಾವಣಾ ಬಾಂಡ್‌ಗಳನ್ನು ಚುನಾವಣಾ ಆಯೋಗಕ್ಕೆ ಮಾ.12 ರಂದು ಸಲ್ಲಿಸಿತ್ತು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜನರ ಗಮನ ಬೇರೆಡೆಗೆ ಸೆಳೆಯಲು ‘ಸಿಎಎ’ ಮುಂದೆ ಮಾಡಿದ ‘ಮೋಶಾ’

“ಚುನಾವಣಾ ಆಯೋಗವು ಪಾರದರ್ಶಕತೆಯ ಪರವಾಗಿದೆ. ನಾವು ಪಾರದರ್ಶಕತೆಯ ಪರವಾಗಿದ್ದೇವೆ ಎಂದು ಕೋರ್ಟ್‌ಗೆ ತಿಳಿಸಿದ್ದೇವೆ. ಆಯೋಗವು ಚುನಾವಣಾ ಪ್ರಕ್ರಿಯೆಯ ಮೇಲೆ ಏನು ಮಾಡಬೇಕು ಎಲ್ಲವನ್ನು ಕೈಗೊಳ್ಳುತ್ತದೆ. ಸಾರ್ವಜನಿಕರಿಗೆ ಹಾಗೂ ಮತದಾರರಿಗೆ ಎಲ್ಲವನ್ನು ಬಹಿರಂಗಗೊಳಿಸಲಾಗುವುದು. ಆಯೋಗವು ಸದಾ ಪಾರದರ್ಶಕತೆಯ ಪರವಾಗಿರುತ್ತದೆ.ಚುನಾವಣಾ ಬಾಂಡ್‌ಗಳ ವಿಚಾರದಲ್ಲೂ ಕೂಡ ನಾವು ಇದಕ್ಕೆ ಬದ್ಧರಾಗಿರುತ್ತೇನೆ” ಎಂದು ರಾಜೀವ್‌ ಕುಮಾರ್‌ ಹೇಳಿದರು.

ಎಸ್‌ಬಿಐ ಮುಖ್ಯಸ್ಥರು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಕೆಲವು ಗಂಟೆಗಳ ನಂತರ ರಾಜೀವ್‌ ಕುಮಾರ್ ಹೇಳಿಕೆ ನೀಡಿದ್ದಾರೆ. ಬಾಂಡ್‌ಗಳ ಅಂಕಿಅಂಶಗಳು ಏಪ್ರಿಲ್‌ 12 2019ರಿಂದ ಫೆ.15, 2024ರವರೆಗೆ ಒಳಗೊಂಡಿದೆ.

ಏ.1, 2019ರಿಂದ ಫೆ.15, 2024ರವರೆಗೆ ಒಟ್ಟು 22,217 ಬಾಂಡ್‌ಗಳನ್ನು ಒಳಗೊಂಡಿದೆ ಎಂದು ಎಸ್‌ಬಿಐ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X