ನಿಮಗೆ 75 ವರ್ಷ ತುಂಬಿತು ಎಂದರೆ, ನೀವು ನಿವೃತ್ತರಾಗಬೇಕು ಎಂದರ್ಥ; ಪ್ರಧಾನಿ ಮೋದಿಗೆ ಆರ್‌ಎಸ್‌ಎಸ್‌ ಮುಖ್ಯಸ್ಥ ಪರೋಕ್ಷ ಸೂಚನೆ

Date:

Advertisements

ನಿಮಗೆ 75 ತುಂಬಿತು ಎಂದರೆ, ನೀವು ನಿವೃತ್ತರಾಗಬೇಕು ಎಂದರ್ಥ ಎಂದು ರಾಷ್ಟ್ರೀಯ ಸ್ವಯಂ ಸೇವಾ ಸಂಘದ(ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಪ್ರಧಾನಿ ನರೇಂದ್ರ ಮೋದಿ ರಾಜಕೀಯದಿಂದ ನಿವೃತ್ತರಾಗಬೇಕೆಂದು ಪರೋಕ್ಷವಾಗಿ ಸೂಚಿಸಿದ್ದಾರೆ.

ನಾಗ್ಪುರದಲ್ಲಿ ಬುಧವಾರ ದಿವಂಗತ ಆರ್‌ಎಸ್‌ಎಸ್ ಸಿದ್ಧಾಂತವಾದಿ ಮೊರೊಪಂತ್ ಪಿಂಗಳೆ ಅವರ ದಿ ಆರ್ಕಿಟೆಕ್ಟ್ ಆಫ್ ಹಿಂದೂ ರಿಸರ್ಜೆನ್ಸ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಮೋಹನ್‌ ಭಾಗವತ್‌ ಅವರು, “ಪಿಂಗಳೆ ಒಮ್ಮೆ ಹೇಳಿದ್ದರು… 75 ವರ್ಷ ತುಂಬಿದ ನಂತರ ನಿಮಗೆ ಶಾಲು ಹೊದಿಸಿ ಸನ್ಮಾನಿಸಿದರೆ, ನೀವು ಈಗಲೇ ನಿಲ್ಲಿಸಬೇಕು ಎಂದರ್ಥ, ನೀವು ವಯಸ್ಸಾದವರು; ಪಕ್ಕಕ್ಕೆ ಸರಿದು ಇತರರು ಒಳಗೆ ಬರಲಿ” ಎಂದು ಹೇಳಿದರು.

75 ವರ್ಷಗಳ ನಂತರ ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ಬೆನ್ನಲ್ಲೇ ಪ್ರಧಾನಿ ಮೋದಿ ಅವರ ನಿವೃತ್ತಿಗೆ ವಿಪಕ್ಷಗಳ ನಾಯಕರು ಆಗ್ರಹಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದಾಖಲೆ ಬರೆದ ಶಕ್ತಿ ಯೋಜನೆ: ಆಡಿದ್ದನ್ನು ಮಾಡಿ ತೋರಿಸಿದ ಸರ್ಕಾರ

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಪ್ರಧಾನಿ ಮೋದಿಯನ್ನು ʼಕಳಪೆ ಪ್ರಶಸ್ತಿ ವಿಜೇತ ಪ್ರಧಾನಿʼ ಎಂದು ವ್ಯಂಗ್ಯವಾಡಿದರು. 2025ರ ಸೆಪ್ಟೆಂಬರ್ 17ರಂದು ಮೋದಿಗೆ 75 ವರ್ಷ ತುಂಬುವುದರಿಂದ ಆರ್‌ಎಸ್‌ಎಸ್‌ ಮುಖ್ಯಸ್ಥರು ಮನೆಗೆ ಮರಳುವಂತೆ ನೆನಪಿಸಿದ್ದಾರೆ. ಪ್ರಧಾನ ಮಂತ್ರಿಗಳು ಕೂಡ ಆರ್‌ಎಸ್‌ಎಸ್‌ ಮುಖ್ಯಸ್ಥರಿಗೆ 2025ರ ಸೆಪ್ಟೆಂಬರ್ 11ರಂದು ಅವರಿಗೂ 75 ವರ್ಷ ತುಂಬುತ್ತದೆ ಎಂದು ನೆನಪಿಸಬಹುದು ಎಂದು ಹೇಳಿದರು.

ಕಾಂಗ್ರೆಸ್ ನಾಯಕ ಪವನ್ ಖೇರಾ ಈ ಕುರಿತು ಪ್ರತಿಕ್ರಿಯಿಸಿ, ʼಪ್ರಧಾನಿ ಮೋದಿ ಮತ್ತು ಭಾಗವತ್ ಇಬ್ಬರೂ ತಮ್ಮ ಬ್ಯಾಗ್‌ಗಳನ್ನು ಎತ್ತಿಕೊಂಡು ಕಚೇರಿಯಿಂದ ಹೊರಹೋಗಬೇಕು. ಈಗ ನೀವಿಬ್ಬರೂ ಬ್ಯಾಗ್ ಎತ್ತಿಕೊಂಡು ಹೋಗಿ ಪರಸ್ಪರ ಮಾರ್ಗದರ್ಶಕರಾಗಿʼ ಎಂದು ಹೇಳಿದರು.

ʼ75 ವರ್ಷ ತುಂಬಿದ ನಂತರ ಬಿಜೆಪಿಯ ಹಿರಿಯ ನಾಯಕರನ್ನು ಮೂಲೆಗುಂಪು ಮಾಡಲು ಬಳಸಲಾಗುತ್ತಿದ್ದ ನಿವೃತ್ತಿ ನಿಯಮವನ್ನು ಪ್ರಧಾನಿ ಮೋದಿ ತಮ್ಮ ಮೇಲೂ ಅನ್ವಯಿಸಿಕೊಳ್ಳುತ್ತಾರೆಯೇʼ ಎಂದು ಉದ್ಧವ್ ನೇತೃತ್ವದ ಶಿವಸೇನೆ ಸಂಸದ ಸಂಜಯ್ ರಾವತ್ ಪ್ರಶ್ನಿಸಿದ್ದಾರೆ.

ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಮತ್ತು ಜಸ್ವಂತ್ ಸಿಂಗ್ ಅವರಂತಹ ನಾಯಕರಿಗೆ 75 ವರ್ಷ ತುಂಬಿದ ನಂತರ ನಿವೃತ್ತಿ ಹೊಂದುವಂತೆ ಪ್ರಧಾನಿ ಮೋದಿ ಒತ್ತಾಯಿಸಿದ್ದರು. ಅವರು ಈಗ ಅದೇ ನಿಯಮವನ್ನು ಸ್ವತಃ ಅನ್ವಯಿಸುತ್ತಾರೆಯೇ ಎಂದು ನೋಡೋಣ ಎಂದು ಸಂಜಯ್ ರಾವತ್ ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X