ಚುನಾವಣೆಗೂ ಮುನ್ನ ಏಕೆ ಬಂಧಿಸಿದ್ದೀರಿ? ಕೇಜ್ರಿವಾಲ್ ಬಂಧನ ಕುರಿತು ಇ.ಡಿ.ಗೆ ಸುಪ್ರೀಂ ಪ್ರಶ್ನೆ

Date:

Advertisements

ಲೋಕಸಭೆ ಚುನಾವಣೆಗಳು ಆರಂಭವಾಗಲು ಕೆಲವು ದಿನಗಳು ಬಾಕಿ ಇರುವಾಗ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಏಕೆ ಬಂಧಿಸಿದ್ದೀರಿ ಎಂದು ಸುಪ್ರೀಂ ಕೋರ್ಟ್ ಇಂದು ಜಾರಿ ನಿರ್ದೇಶನಾಲಯವನ್ನು ತರಾಟೆಗೆ ತೆಗೆದುಕೊಂಡಿತು.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮ ಬಂಧನವನ್ನು ಪ್ರಶ್ನಿಸಿ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಪ್ರಕರಣವನ್ನು ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ದೀಪಂಕರ್ ದತ್ತ ಅವರಿದ್ದ ಪೀಠವು ಈ ಸಮಯದಲ್ಲಿಯೇ ಏಕೆ ಬಂಧಿಸಲಾಗಿದೆ ಎಂಬ ಕಾರಣ ವಿವರಿಸುವಂತೆ ಪ್ರಶ್ನಿಸಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವೇಗೌಡರ ಧೃತರಾಷ್ಟ್ರ ಸಿಂಡ್ರೋಮ್ ಮತ್ತು ಮೋದಿ ವಾಷಿಂಗ್ ಮಷೀನ್

ಪ್ರಕರಣದಲ್ಲಿ ನ್ಯಾಯಾಂಗ ವಿಚಾರಣೆಗೆ ತೆರಳದೆ ಅಪರಾಧ ವಿಚಾರಣೆಗಳನ್ನು ಕೈಗೆತ್ತಿಕೊಂಡಿರುವುದನ್ನು ತಿಳಿಸುವಂತೆ ಜಾರಿ ನಿರ್ದೇಶನಾಲಯವನ್ನು ಪ್ರಶ್ನಿಸಿತು.

“ಪ್ರಕರಣದಲ್ಲಿ ಇಲ್ಲಿಯವರೆಗೂ ಕ್ರಮ ಕೈಗೊಂಡಿರುವ ಬಗ್ಗೆ ದಾಖಲೆಯನ್ನು ಸಲ್ಲಿಸಿಲ್ಲ. ಇದು ಕೈಕೊಂಡಿದ್ದರೆ ಕೇಜ್ರಿವಾಲ್ ಅವರು ಹೇಗೆ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ತೋರಿಸುವಂತೆ” ಜಾರಿ ನಿರ್ದೇಶನಾಲಯ ಪರ ಹಾಜರಿದ್ದ ಸಹಾಯಕ ಸಾಲಿಟರ್ ಜನರಲ್‌ ಅವರಿಗೆ ನ್ಯಾಯಮೂರ್ತಿ ಸಂಜೀವ್‌ ಖನ್ನಾ ಅವರು ಪ್ರಶ್ನಿಸಿದರು.

“ಸ್ವಾತಂತ್ರವು ತುಂಬಾ ಮುಖ್ಯವಾದದು. ಅದನ್ನು ನೀವು ನಿರಾಕರಿಸಲು ಸಾಧ್ಯವಿಲ್ಲ. ಬಂಧನಕ್ಕೆ ಸಂಬಂಧಿಸಿದಂತೆ ಪ್ರಮುಖ ಪ್ರಶ್ನೆ ಏನೆಂದರೆ ಲೋಕಸಭಾ ಚುನಾವಣೆಗಳು ಕೆಲವು ದಿನ ಇರುವ ಮುನ್ನವೇ ಬಂಧಿಸಿರುವುದರಿಂದ ಹೆಚ್ಚು ಪ್ರಾಮುಖ್ಯ ಪಡೆದುಕೊಂಡಿದೆ” ಎಂದು ಸುಪ್ರೀಂ ಕೋರ್ಟ್ ಪೀಠ ತಿಳಿಸಿತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

Download Eedina App Android / iOS

X