ಆರೋಪಿಗಳ ಆಸ್ತಿ ಮಾರಿ ಪರಿಹಾರ ನೀಡಬಾರದೇಕೆ? – ಆ್ಯಸಿಡ್ ದಾಳಿಕೋರರಿಗೆ ಕಠಿಣ ಶಿಕ್ಷೆ ವಿಧಿಸಲು ಸುಪ್ರೀಂ ಚಿಂತನೆ

Date:

ಆ್ಯಸಿಡ್ ದಾಳಿ ಪ್ರಕರಣಗಳ ವಿಚಾರಣೆ ವಿಳಂಬದ ಬಗ್ಗೆ ಇತ್ತೀಚೆಗೆ ಆತಂಕ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್‌, ಇದೀಗ ಆ್ಯಸಿಡ್ ದಾಳಿಕೋರರಿಗೆ ಕಠಿಣ ಶಿಕ್ಷೆಯ ಬಗ್ಗೆ ಚಿಂತನೆ ನಡೆಸುತ್ತಿದೆ. “ಆ್ಯಸಿಡ್ ದಾಳಿಕೋರರ ಆರೋಪಿಗಳನ್ನು ಮಾರಿ ಅದರ ಹಣವನ್ನು ಸಂತ್ರಸ್ತರಿಗೆ ಪರಿಹಾರ ನೀಡಲು ಯಾಕೆ ಬಳಸಬಾರದು” ಎಂದು ಮಂಗಳವಾರ ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.

- Advertisement -

2009ರ ಆ್ಯಸಿಡ್ ದಾಳಿ ಸಂತ್ರಸ್ತೆ ಮತ್ತು ಎನ್‌ಜಿಒ ಬ್ರೇವ್ ಸೋಲ್ಸ್ ಫೌಂಡೇಶನ್‌ನ ಸಂಸ್ಥಾಪಕಿ ಶಾಹೀನ್ ಮಲಿಕ್ ಸಲ್ಲಿಸಿದ ಪಿಐಎಲ್ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ಪೀಠವು, “ಈ ಘೋರ ಅಪರಾಧಗಳನ್ನು ತಡೆಗಟ್ಟಲು ನಾವು ಅಸಾಧಾರಣವಾದ, ನೋವಿನಿಂದ ಕೂಡಿದ ಶಿಕ್ಷೆಯನ್ನು ನೀಡುವ ಅಗತ್ಯವಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಇದನ್ನು ಓದಿದ್ದೀರಾ? ಶೇ.97.5 ಪ್ರಕರಣಗಳ ವಿಚಾರಣೆ ಬಾಕಿ: ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಬೇಕಾಗಿರುವುದು ಸಹಾನುಭೂತಿಯಲ್ಲ ನ್ಯಾಯ

ಸಂತ್ರಸ್ತರಿಗೆ ಕನಿಷ್ಠ 3 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ಈ ಹಿಂದೆಯೇ ಸುಪ್ರೀಂ ಕೋರ್ಟ್ ಆದೇಶಿಸಿದೆ. ಆದರೆ ಚಿಕಿತ್ಸೆ ಮತ್ತು ಪುನರ್ವಸತಿಗೆ ಈ ಪರಿಹಾರ ಮೊತ್ತ ಸಾಕಾಗುವುದಿಲ್ಲ ಎಂಬುದನ್ನು ಗಮನಿಸಿದ ಸುಪ್ರೀಂ ಕೋರ್ಟ್, ಸದ್ಯ ಇರುವ ಪರಿಹಾರವನ್ನಾದರೂ ಸರಿಯಾದ ರೀತಿಯಲ್ಲಿ ಸಂತ್ರಸ್ತರಿಗೆ ದೊರಕುವಂತೆ ನೋಡಿಕೊಳ್ಳಬೇಕು ಎಂದು ಒತ್ತಿ ಹೇಳಿದೆ.

ಇನ್ನು ಎಲ್ಲಾ ಆರೋಪಿಗಳು ಕೆಳ ನ್ಯಾಯಾಲಯದಲ್ಲಿ ಖುಲಾಸೆಗೊಂಡಿರುವ ಬಗ್ಗೆ ಸಂತ್ರಸ್ತೆ ಸುಪ್ರೀಂ ಕೋರ್ಟ್‌ಗೆ ಹೇಳಿದ್ದು, ಆ್ಯಸಿಡ್ ದಾಳಿ ಸಂತ್ರಸ್ತೆಯು ಹೈಕೋರ್ಟ್‌ನಲ್ಲಿ ತನ್ನ ಪ್ರಕರಣವನ್ನು ಹೋರಾಡಲು ಅತ್ಯುತ್ತಮ ವಕೀಲರನ್ನು ಪಡೆಯುವಂತೆ ಸುಪ್ರೀಂ ಕೋರ್ಟ್ ನೋಡಿಕೊಳ್ಳುತ್ತದೆ ಎಂದು ಸಿಜೆಐ ಭರವಸೆ ನೀಡಿದರು.

2009ರಲ್ಲಿ 26 ವರ್ಷ ವಯಸ್ಸಿನ ಶಾಹೀನ್ ಮಲಿಕ್ ಅವರ ಮೇಲೆ ಹರಿಯಾಣದ ಪಾಣಿಪತ್‌ನಲ್ಲಿರುವ ಅವರ ಕಚೇರಿಯ ಹೊರಗೆ ಆ್ಯಸಿಡ್ ದಾಳಿಯಾಗಿದ್ದು, ಈ ಘಟನೆ ನಡೆದು ಈಗಾಗಲೇ 16 ವರ್ಷ ಕಳೆದಿದೆ. ಆದರೆ, ಇಂದಿಗೂ ವಿಚಾರಣೆ ಬಾಕಿ ಉಳಿದಿದೆ.

ಇದನ್ನು ಓದಿದ್ದೀರಾ? ಅತ್ಯಾಚಾರಕ್ಕೆ ಒಳಗಾದ ಮಹಿಳೆಯರನ್ನೇ ದೂಷಿಸುವ ಸಮಾಜ, ‘ವಿಕ್ಟಿಮ್ ಬ್ಲೇಮಿಂಗ್’ ನಿಲ್ಲುವುದು ಯಾವಾಗ?

ಇತ್ತೀಚೆಗೆ ಶಾಹೀನ್ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣದ ವಿಚಾರಣೆ ಬಾಕಿ ಪ್ರಶ್ನಿಸಿ ಸಲ್ಲಿಸಿದ ಪಿಐಎಲ್‌ ವಿಚಾರಣೆ ನಡೆಸಿದ್ದ ಸಿಜೆಐ ನೇತೃತ್ವದ ಪೀಠವು, “ವಿಚಾರಣೆಯಲ್ಲಿ ವಿಳಂಬವು ನ್ಯಾಯಾಂಗ ವ್ಯವಸ್ಥೆಯ ಅಪಹಾಸ್ಯ. ರಾಷ್ಟ್ರವೇ ತಲೆತಗ್ಗಿಸುವ ವಿಚಾರ. ಇದು ನಾಚಿಕೆಗೇಡಿನದು” ಎಂದು ಹೇಳಿತ್ತು. ಹಾಗೆಯೇ ದೇಶದಲ್ಲಿ ಬಾಕಿ ಇರುವ ಇಂತಹ ಪ್ರಕರಣಗಳ ಕುರಿತ ವಿವರಗಳನ್ನು ನಾಲ್ಕು ವಾರಗಳಲ್ಲಿ ಸಲ್ಲಿಸುವಂತೆ ಹೈಕೋರ್ಟ್‌ಗಳಿಗೆ ಸೂಚಿಸಿತ್ತು. ಕೇಂದ್ರ ಸರ್ಕಾರ ಮತ್ತು ಅಂಗವಿಕಲರ ಸಬಲೀಕರಣ ಇಲಾಖೆಗೆ ನೋಟಿಸ್ ಜಾರಿ ಮಾಡಿತ್ತು.

ಅಷ್ಟು ಮಾತ್ರವಲ್ಲದೆ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ದತ್ತಾಂಶದ ಪ್ರಕಾರ ದೇಶದಲ್ಲಿ ಆ್ಯಸಿಡ್ ದಾಳಿ ಪ್ರಕರಣಗಳಲ್ಲಿ ಶೇ.97.5ರಷ್ಟು ಪ್ರಕರಣಗಳ ವಿಚಾರಣೆ ಬಾಕಿ ಉಳಿದಿವೆ. ಬರೀ ಶೇ.2.5ರಷ್ಟು ಪ್ರಕರಣಗಳಲ್ಲಿ ವಿಚಾರಣೆ ನಡೆದಿದೆ. ವಿಚಾರಣೆಗೆ ಒಳಗಾದ ಪ್ರಕರಣಗಳಲ್ಲಿಯೂ ಅಪರಾಧಿಗಳಿಗೆ ಶಿಕ್ಷೆಯಾಗಿರುವ ಪ್ರಮಾಣ ಅತಿ ಕಡಿಮೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...

ಹೌತಿಗಳ ವಿರುದ್ಧ ಮಿಲಿಟರಿ ದಾಳಿಗೆ ಸೌದಿ ಅರೇಬಿಯಾ ಮನವಿ: ಬೆಂಬಲಿಸಿಲ್ಲ ಎಂದ ಟ್ರಂಪ್

ಕೆಂಪು ಸಮುದ್ರದ ಆಯಕಟ್ಟಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ದಾಳಿ...