ಹರಿಯಾಣ, ಮಹಾರಾಷ್ಟ್ರ ಮತದಾರರ ಪಟ್ಟಿ ಬಿಡುಗಡೆ ಕೋರಿ ಕಾಂಗ್ರೆಸ್ ಅರ್ಜಿ: 3 ತಿಂಗಳಲ್ಲಿ ಇತ್ಯರ್ಥವೆಂದ ಇಸಿಐ

Date:

Advertisements

2009 ಮತ್ತು 2024ರ ನಡುವೆ ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ನಡೆದ ಚುನಾವಣೆಗಳಿಗೆ ಮತದಾರರ ಪಟ್ಟಿಯನ್ನು ಕೋರಿ ಕಾಂಗ್ರೆಸ್ ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ ಸಲ್ಲಿಸಿರುವ ಅರ್ಜಿಯನ್ನು ಮೂರು ತಿಂಗಳ ಒಳಗಾಗಿ ಇತ್ಯರ್ಥಗೊಳಿಸಲಾಗುವುದು ಎಂದು ಭಾರತೀಯ ಚುನಾವಣಾ ಆಯೋಗವು (ಇಸಿಐ) ಮಂಗಳವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರು ಚುನಾವಣಾ ಆಯೋಗದ (ಇಸಿಐ) ವಕೀಲರ ಅರ್ಜಿಯನ್ನು ದಾಖಲಿಸಿಕೊಂಡರು. 2009ಕ್ಕೆ ಸಂಬಂಧಿಸಿದ ವಿವರಗಳು ಕೋರಿರುವ ಕಾರಣ ತಕ್ಷಣ ನಿರ್ಧಾರ ಕೈಗೊಳ್ಳಲು ಸಾಧ್ಯವಾಗದು. ಮೂರು ತಿಂಗಳುಗಳ ಅವಕಾಶಬೇಕು ಎಂದು ಇಸಿಐ ಪರ ವಕೀಲರು ಅರ್ಜಿಯಲ್ಲಿ ಕೋರಿದ್ದಾರೆ.

“ಇಸಿಐ ಅರ್ಜಿಯಲ್ಲಿ 2024ರ ಡಿಸೆಂಬರ್ 29ರಂದು ಸಲ್ಲಿಸಲಾದ ಅರ್ಜಿಯನ್ನು ಸಾಧ್ಯವಾದಷ್ಟು ಬೇಗ ಮತ್ತು ಇಂದಿನಿಂದ ಮೂರು ತಿಂಗಳ ನಂತರ ನಿರ್ಧರಿಸಲಾಗುವುದು ಎಂದು ಇಸಿಐ ತಿಳಿಸಿದ ಕಾರಣ ಈ ರಿಟ್ ಅರ್ಜಿಯನ್ನು ವಿಲೇವಾರಿ ಮಾಡಲಾಗಿದೆ” ಎಂದು ನ್ಯಾಯಾಲಯ ಹೇಳಿದೆ.

Advertisements

ಇದನ್ನು ಓದಿದ್ದೀರಾ? ಮತದಾರರ ಪಟ್ಟಿಯಲ್ಲಿ ಅಕ್ರಮ; ಮಹಾರಾಷ್ಟ್ರ ಸರ್ಕಾರ ಕಾನೂನುಬದ್ಧವಾಗಿ ಆಯ್ಕೆಯಾಗಿಲ್ಲ : ಕಾಂಗ್ರೆಸ್ ಆರೋಪ

ಸುರ್ಜೆವಾಲಾ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, 2009 ಮತ್ತು 2024ರ ನಡುವೆ ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ನಡೆದ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಿಗೆ ಮತದಾರರ ಪಟ್ಟಿಯನ್ನು ಪೂರೈಸುವಂತೆ ಕೋರಿ 2024ರ ಡಿಸೆಂಬರ್ 29ರಂದು ಸಲ್ಲಿಸಿದ ಅರ್ಜಿಯ ಬಗ್ಗೆ ಇಸಿಐ ಇನ್ನೂ ಕೂಡಾ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

2025ರ ಫೆಬ್ರವರಿಯಲ್ಲಿ ಕಾನೂನಿನ ಪ್ರಕಾರ ಪ್ರಾತಿನಿಧ್ಯವನ್ನು ನಿರ್ಧರಿಸಲು ಆಯಾ ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಇಸಿಐ ಪತ್ರವನ್ನು ನೀಡಿತ್ತು. ಆದರೆ ಈ ಬಗ್ಗೆ ನಿರ್ಧರಿಸಲು ಕಾನೂನಿನ ಪ್ರಕಾರ ಪ್ರಾತಿನಿಧ್ಯವನ್ನು ನಿರ್ಧರಿಸಲು ಆಯಾ ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಇಸಿಐ ಪತ್ರವನ್ನು ನೀಡಿತ್ತು ಎಂದು ಸಿಂಘ್ವಿ ವಾದಿಸಿದ್ದಾರೆ.

ಇದನ್ನು ಓದಿದ್ದೀರಾ? 2024ರಲ್ಲಿ ದ್ವೇಷ ಭಾಷಣಗಳ ಸಂಖ್ಯೆ 74.4% ಹೆಚ್ಚಳ; ಬಿಜೆಪಿಗರೇ ಪ್ರಮುಖ ಆರೋಪಿಗಳು!

ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಚುನಾವಣೆಯಲ್ಲಿ ಮತ ಪ್ರಮಾಣದಲ್ಲಿ ಭಾರೀ ವ್ಯತ್ಯಾಸ ಕಂಡುಬಂದಿದೆ. ಅದರಲ್ಲೂ ಮಹಾರಾಷ್ಟ್ರದ ಹಲವು ಬೂತ್‌ಗಳಲ್ಲಿ ಮತದಾರರ ಪ್ರಮಾಣ ಮತ್ತು ಎಣಿಕೆಯಾದ ಮತದ ನಡುವೆ ತೀವ್ರ ವ್ಯತ್ಯಾಸ ಕಂಡುಬಂದಿದೆ. ಈ ಬಗ್ಗೆ ಸ್ಥಳೀಯವಾಗಿ ಪ್ರತಿಭಟನೆಗಳು ನಡೆದಿದೆ. ಗ್ರಾಮಕ್ಕೆ ಗ್ರಾಮವೇ ಪ್ರತಿಭಟನೆ ನಡೆಸಿದೆ.

ಇವೆಲ್ಲವುದರ ನಡುವೆ 2009 ಮತ್ತು 2024ರ ನಡುವೆ ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ನಡೆದ ಚುನಾವಣೆಗಳಿಗೆ ಮತದಾರರ ಪಟ್ಟಿಯನ್ನು ಕೋರಿ ಕಾಂಗ್ರೆಸ್ ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ ಅರ್ಜಿಯನ್ನು ಸಲ್ಲಿಸಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ಅರ್ಜಿ ಸಲ್ಲಿಸಿದ್ದರೂ ಇಸಿಐ ಈವರೆಗೂ ಸರಿಯಾದ ಮಾಹಿತಿ ನೀಡಿಲ್ಲ. ಇದೀಗ ಪ್ರಕರಣ ಹೈಕೋರ್ಟ್ ಮೆಟ್ಟಿಲೇರುತ್ತಿದ್ದಂತೆ ಮೂರು ತಿಂಗಳ ಅವಕಾಶ ಕೋರಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X