ಬಿಹಾರ ಎಸ್‌ಐಆರ್ ಕಾರ್ಯವಿಧಾನ ಅಕ್ರಮವೆಂದು ಕಂಡುಬಂದರೆ ಇಡೀ ಪ್ರಕ್ರಿಯೆ ರದ್ದು: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ

Date:

Advertisements

ಚುನಾವಣಾ ಆಯೋಗವು ಅಳವಡಿಸಿಕೊಂಡಿರುವ ಕಾರ್ಯವಿಧಾನದಲ್ಲಿ ಯಾವುದೇ ಅಕ್ರಮವು ಕಂಡು ಬಂದರೆ ಬಿಹಾರದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯನ್ನು(ಎಸ್‌ಐಆರ್) ಸಂಪೂರ್ಣವಾಗಿ ರದ್ದುಗೊಳಿಸುವುದಾಗಿ ಸುಪ್ರೀಂ ಕೋರ್ಟ್ ಸೋಮವಾರ ಎಚ್ಚರಿಕೆ ನೀಡಿದೆ.

ಬಿಹಾರದಲ್ಲಿ ಎಸ್‌ಐಆರ್‌ಗಾಗಿ ಚುನಾವಣಾ ಆಯೋಗವು ಅಳವಡಿಸಿಕೊಂಡಿರುವ ಕಾರ್ಯವಿಧಾನದಲ್ಲಿ ಯಾವುದೇ ಹಂತದಲ್ಲಿ ಅಕ್ರಮ ಕಂಡುಬಂದರೆ ಇಡೀ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗುವುದು ಎಂದು ನ್ಯಾಯಮೂರ್ತಿಗಳಾದ ಸೂರ್ಯಕಾಂತ ಮತ್ತು ಜಾಯಮಲ್ಯ ಬಾಗ್ಚಿ ಅವರ ಪೀಠವು ಖಡಕ್ಕಾಗಿ ಹೇಳಿತು.

ಎಸ್‌ಐಆರ್‌ನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ನಡೆಸುತ್ತಿದ್ದ ಪೀಠವು, ಸಾಂವಿಧಾನಿಕ ಪ್ರಾಧಿಕಾರವಾಗಿ ಚುನಾವಣಾ ಆಯೋಗವು ಎಸ್‌ಐಆರ್ ನಡೆಸುವಾಗ ಕಾನೂನಿಗೆ ಬದ್ಧವಾಗಿದೆ ಮತ್ತು ಎಲ್ಲ ಕಡ್ಡಾಯ ನಿಯಮಗಳನ್ನು ಪಾಲಿಸಿದೆ ಎಂದು ಭಾವಿಸಿ ನ್ಯಾಯಾಲಯವು ಮುಂದುವರಿಯುತ್ತಿದೆ ಎಂದು ತಿಳಿಸಿತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮತಾಂತರ ವಿಚಾರದಲ್ಲಿ ಬಿಜೆಪಿಯ ಬೂಟಾಟಿಕೆ ಮತ್ತು ವಾಸ್ತವ

ಎಸ್‌ಐಆರ್ ಸಿಂಧುತ್ವ ಕುರಿತು ಅಂತಿಮ ವಾದಗಳನ್ನು ಮಂಡಿಸಲು ಅ.7ರ ದಿನಾಂಕವನ್ನು ನಿಗದಿಗೊಳಿಸಿದ ಪೀಠವು, ಎಸ್‌ಐಆರ್ ಕುರಿತು ಯಾವುದೇ ಬಿಡಿ ಅಭಿಪ್ರಾಯವನ್ನು ನೀಡಲು ನಿರಾಕರಿಸಿತು.

‘ಬಿಹಾರ ಎಸ್‌ಐಆರ್ ಕುರಿತು ನಮ್ಮ ತೀರ್ಪು ದೇಶಾದ್ಯಂತ ಎಸ್‌ಐಆರ್‌ಗೆ ಅನ್ವಯಿಸುತ್ತದೆ ’ಎಂದು ಹೇಳಿದ ಪೀಠವು, ಚುನಾವಣಾ ಆಯೋಗವು ದೇಶಾದ್ಯಂತ ಎಸ್‌ಐಆರ್ ನಡೆಸುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿತು.

ಆದಾಗ್ಯೂ,ಬಿಹಾರ ಎಸ್‌ಐಆರ್‌ನ್ನು ವಿರೋಧಿಸಿರುವ ಅರ್ಜಿದಾರರು ಅ.7ರಂದು ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ದೇಶಾದ್ಯಂತ ಎಸ್‌ಐಆರ್ ಕುರಿತು ವಾದ ಮಂಡಿಸಲು ಪೀಠವು ಅನುಮತಿ ನೀಡಿತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರ ಬಂಧನ

ಯುವತಿಯೊಬ್ಬರ ಮೇಲೆ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ. ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ...

ರೆಪೋ ದರ ಶೇ. 5.5 ಕ್ಕೆ ಸ್ಥಿರವಾಗಿರಿಸಿದ ಆರ್‌ಬಿಐ; ಸತತ ಎರಡನೇ ಬಾರಿಯೂ ಯಥಾಸ್ಥಿತಿ

ಶೇ.5.5ರ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ ಎಂದು...

Bihar SIR | ಬಿಜೆಪಿ-ಚುನಾವಣಾ ಆಯೋಗದ ಕುತಂತ್ರಕ್ಕೆ 47 ಲಕ್ಷ ಮತದಾರರು ಬಲಿ

ಚುನಾವಣೆಯ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ತೀವ್ರ...

ಎಲ್ಲರ ತಾಯಿ ಸಾಯುತ್ತಾರೆ; ರಜೆ ಕೇಳಿದ್ದಕ್ಕೆ ಮೇಲಧಿಕಾರಿಯ ಉಡಾಫೆಯ ಉತ್ತರ

ತಾಯಿಯನ್ನು ಕಳೆದುಕೊಂಡ ದುಃಖದಲ್ಲಿ ರಜೆ ಕೇಳಿದ ಬ್ಯಾಂಕ್ ಉದ್ಯೋಗಿಗೆ, “ಎಲ್ಲರ ತಾಯಿ...

Download Eedina App Android / iOS

X