ಓವೈಸಿ ಸಹೋದರರ ವಿರುದ್ಧ ಬಿಜೆಪಿಯ ನವನೀತ್ ರಾಣಾ ವಿವಾದಾತ್ಮಕ ಹೇಳಿಕೆ

Date:

Advertisements

ಎಐಎಂಐಎಂ ಪಕ್ಷದ ಓವೈಸಿ ಸಹೋದರರ ಬಗ್ಗೆ ಮಹಾರಾಷ್ಟ್ರದ ಅಮರಾವತಿ ಲೋಕಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿ ನವನೀತ್‌ ರಾಣಾ ವಿವಾದಾತ್ಮಕ ಹೇಳಿಕೆ ನೀಡಿರುವುದು ಎಲ್ಲಡೆ ಆಕ್ರೋಶಕ್ಕೆ ಕಾರಣವಾಗಿದೆ.

ಹೈದರಾಬಾದ್‌ನಲ್ಲಿ ಮಾತನಾಡಿರುವ ನವನೀತ್‌ ರಾಣಾ, ಪೊಲೀಸರನ್ನು 15 ಸೆಕೆಂಡ್‌ ಹಿಂದಕ್ಕೆ ಪಡೆದರೆ ಸಹೋದರರು ಎಲ್ಲಿಂದ ಆಗಮಿಸಿದರು ಎಲ್ಲಿಗೆ  ವಾಪಸ್‌ ಹೋದರು ಎಂಬುದನ್ನು ತಿಳಿಯದ ಹಾಗೆ ಮಾಡುತ್ತೇವೆ ಎಂದು ಓವೈಸಿ ಸಹೋದರರನ್ನು ಗುರಿಯಾಗಿಸಿಕೊಂಡು ಹೇಳಿದ್ದಾರೆ.

2019ರಲ್ಲಿ ಮಹಾರಾಷ್ಟ್ರದ ಅಮರಾವತಿಯಿಂದ ಸ್ವತಂತ್ರವಾಗಿ ಸಂಸದರಾಗಿ ಆಯ್ಕೆಯಾಗಿದ್ದು, ಈ ಬಾರಿ ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ.

Advertisements

ನವನೀತ್‌ ರಾಣಾಗೆ ತಿರುಗೇಟು ನೀಡಿರುವ ಅಸಾದುದ್ದೀನ್ ಓವೈಸಿ, “ನಾನು ಪ್ರಧಾನಿ ನರೇಂದ್ರ ಮೋದಿಯವರಿಗೆ ಆಕೆಗೆ 15 ಸೆಕೆಂಡ್‌ ನೀಡಿ ಎಂದು ಮನವಿ ಮಾಡಿಕೊಳ್ಳುತ್ತೇನೆ. ಕೇವಲ 15 ಸೆಕೆಂಡ್ ಮಾತ್ರವಲ್ಲ, ಒಂದು ಗಂಟೆ ತೆಗೆದುಕೊಳ್ಳಿ. ನಾವು ಹೆದರಿಕೊಳ್ಳುವುದಿಲ್ಲ. ನಿಮ್ಮಿಂದ ಮಾನವೀಯತೆ ಹೇಗೆ ಕಳೆದುಹೋಗಿದೆ ಎಂಬುದನ್ನು ಸಹ ನಾವು ನೋಡ ಬಯಸುತ್ತೇವೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಜೆಡಿಎಸ್-ಬಿಜೆಪಿ ಜಂಟಿ ಕೃತ್ಯ, ಘನಘೋರ ಲೈಂಗಿಕ ಹತ್ಯಾಕಾಂಡ

“ಪ್ರಧಾನಿಯೂ ನಿಮ್ಮವರೆ, ಆರ್‌ಎಸ್‌ಎಸ್‌ ಕೂಡ ನಿಮ್ಮವರೆ. ಮಾಡಿ ನಿಮ್ಮನ್ನು ಯಾರೂ ತಡೆಯುತ್ತಾರೆ. ಎಲ್ಲಿಗೆ ಬರಬೇಕೆಂದು ಹೇಳಿ ಅಲ್ಲಿಗೆ ಬರುತ್ತೇವೆ. ಅದನ್ನು  ಈಗಲೇ ಮಾಡಿ” ಎಂದು ಹೇಳಿದ್ದಾರೆ.

ನವನೀತ್‌ ಹೇಳಿಕೆಯನ್ನು ಖಂಡಿಸಿರುವ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಪೃಥ್ವಿರಾಜ್‌ ಚೌಹಾಣ್, “ಇಂತಹ ವ್ಯಕ್ತಿಗಳು ಸಮಾಜಕ್ಕೆ ವಿಷಬೀಜ ಬಿತ್ತುತ್ತಿದ್ದಾರೆ. ಚುನಾವಣೆಯಲ್ಲಿ ಎಲ್ಲ ಬಿಜೆಪಿ ನಾಯಕರು ಇದನ್ನೇ ಮಾಡುತ್ತಿದ್ದಾರೆ” ಎಂದು ದೂರಿದರು.

ಅಸಾದುದ್ದೀನ್‌ ಓವೈಸಿ ವಿರುದ್ಧ ಸ್ಪರ್ಧಿಸಿರುವ ಬಿಜೆಪಿಯ ಮಾಧವಿ ಲತಾ ಕೂಡ ಈ ಹಿಂದೆ ಪ್ರಚಾರ ಕೈಗೊಳ್ಳುವ ಸಂದರ್ಭದಲ್ಲಿ ಮಸೀದಿಯನ್ನು ಬಿಲ್ಲುಬಾಣದಿಂದ ಕೆಡವುವ ಅಣಕು ಪ್ರದರ್ಶನ ಮಾಡಿದ್ದರು.

ಹೈದರಾಬಾದ್‌ ಲೋಕಸಭಾ ಕ್ಷೇತ್ರವು 6 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಅಸಾದುದ್ದೀನ್‌ ಓವೈಸಿ 2004ರಿಂದ ಈ ಕ್ಷೇತ್ರದ ಸಂಸದರಾಗಿದ್ದಾರೆ. ತೆಲಂಗಾಣದ 17 ಲೋಕಸಭಾ ಕ್ಷೇತ್ರಗಳಿಗೆ ಮೇ 13 ರಂದು ಚುನಾವಣೆ ನಡೆಯಲಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X