ಜಾತಿ ಗಣತಿ, ಆರ್ಥಿಕ ಸಮೀಕ್ಷೆ ಆಧಾರದ ಮೇಲೆ ಶೇ.50ರ ಮೀಸಲಾತಿ ಮಿತಿ ತೆರವು: ರಾಹುಲ್ ಗಾಂಧಿ

Date:

ನಾವು ಅಧಿಕಾರಕ್ಕೆ ಬಂದರೆ ಜಾತಿ ಗಣತಿ ಹಾಗೂ ಆರ್ಥಿಕ ಸಮೀಕ್ಷೆಯ ಆಧಾರದ ಮೇಲೆ ಶೇ.50 ಮಿತಿಯನ್ನು ತೆರವುಗೊಳಿಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

- Advertisement -

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿಕೊಂಡಿರುವ ಅವರು, ಕಾಂಗ್ರೆಸ್‌ನ ಘೋಷಣೆ ಎಣಿಕೆ, ಏಕೆಂದರೆ ಇದು ನ್ಯಾಯದ ಕಡೆಗಿನ ಮೊದಲ ಹೆಜ್ಜೆಯಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

“ಯಾರು ಬಡವರು ಎಂದು ನಾವು ಎಂದಾದರೂ ಯೋಚಿಸಿದ್ದೇವೆಯೆ?ಎಷ್ಟು ಮಂದಿ ಯಾವ ಪರಿಸ್ಥಿತಿಯಲ್ಲಿದ್ದಾರೆ? ಇವೆಲ್ಲವನ್ನು ಲೆಕ್ಕ ಮಾಡಬೇಕಿತ್ತಲ್ಲವೆ? ಬಿಹಾರದಲ್ಲಿ ಕೈಗೊಂಡ ಜಾತಿ ಸಮೀಕ್ಷೆಯಲ್ಲಿ ಶೇ 88 ರಷ್ಟಿರುವ ಬಡವರು ದಲಿತರು, ಆದಿವಾಸಿಗಳು, ಹಿಂದುಳಿದ ವರ್ಗದವರು ಹಾಗೂ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದವರಾಗಿದ್ದಾರೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

ಬಿಹಾರದ ಅಂಕಿಅಂಶಗಳು ದೇಶದ ನಿಜ ಚಿತ್ರಣದ ಒಂದು ಸಣ್ಣ ನೋಟವಷ್ಟೆ, ದೇಶದ ಬಡ ಜನರು ಯಾವ ಪರಿಸ್ಥಿತಿಯಲ್ಲಿ ಬದುಕುತ್ತಿದ್ದಾರೆ ಎಂಬ ಕಲ್ಪನೆ ಕೂಡ ನಮಗಿಲ್ಲ. ಅದಕ್ಕಾಗಿ ನಾವು ಜಾತಿ ಗಣತಿ ಹಾಗೂ ಆರ್ಥಿಕ ಸಮೀಕ್ಷೆ ಎರಡು ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಇದರ ಆಧಾರದ ಮೇಲೆ ನಾವು ಶೇ.50 ರಷ್ಟಿನ ಮೇಸಲಾತಿ ಮಿತಿಯನ್ನು ತೆರವುಗೊಳಿಸುತ್ತೇವೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಬಾಂಡ್ ಬಹಿರಂಗಗೊಳಿಸಲು ಎಸ್‌ಬಿಐ ಏಕೆ ಹಿಂಜರಿಯುತ್ತಿದೆ?

ಈ ಕ್ರಮವು ದೇಶದ ಎಕ್ಸ್‌ರೆಯಾಗಿದೆ ಹಾಗೂ ಸರಿಯಾದ ಮೀಸಲಾತಿ, ಹಕ್ಕುಗಳು ಹಾಗೂ ಹಂಚಿಕೆಯನ್ನು ಪ್ರತಿಯೊಬ್ಬರಿಗೂ ಒದಗಿಸುತ್ತದೆ ಎಂದು ರಾಹುಲ್ ಹೇಳಿದರು.

“ಇದು ಬಡವರಿಗೆ ಸರಿಯಾದ ಯೋಜನೆಗಳನ್ನು ಜಾರಿಗೊಳಿಸುವುದಕ್ಕೆ ಸಹಾಯ ಮಾಡುವುದು ಮಾತ್ರವಲ್ಲದೆ, ಶಿಕ್ಷಣ, ಗಳಿಕೆ, ‍ವೈದ್ಯಕೀಯ ಸೇವೆಯಿಂದ ವಂಚಿತರಾದವರನ್ನು ಮೇಲೆತ್ತುತ್ತದೆ. ಜೊತೆಗೆ ಅಭಿವೃದ್ಧಿಯ ಮುಖ್ಯವಾಹಿನಿಗೆ ಸಂಪರ್ಕಿಸುತ್ತದೆ” ಎಂದರು.

“ಅಲ್ಲಿಯವರೆಗೂ ಎದ್ದೇಳಿ, ಜಾತಿ ಸಮೀಕ್ಷೆ ನಿಮ್ಮ ಹಕ್ಕು ಎಂದು ನಿಮ್ಮ ಧ್ವನಿಯನ್ನು ತೋರ್ಪಡಿಸಿ . ಇದು ನಿಮ್ಮನ್ನು ಕತ್ತಲ ಸಂಕಷ್ಟದಿಂದ ಬೆಳಕಿನಡೆಗೆ ಕರೆದೊಯ್ಯುತ್ತದೆ” ಎಂದು ರಾಹುಲ್ ಗಾಂಧಿ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಪೊಲೀಸರ ‘ಮಧ್ಯರಾತ್ರಿ ದಾಳಿ’: ದೆಹಲಿ ಮಾಜಿ ಮೇಯರ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪತ್ರಕರ್ತರೊಬ್ಬರನ್ನು ಹುಡುಕುವ ನೆಪದಲ್ಲಿ ಉತ್ತರ ಪ್ರದೇಶ ಪೊಲೀಸರು ತಮ್ಮ ನಿವಾಸದ ಮೇಲೆ...

TMC ಬಂಡಾಯ ಸಂಸದರು ಬಿಜೆಪಿ ಸೇರಲಿದ್ದಾರೆ ಎಂದ ಬಸುನಿಯಾ; ಇಲ್ಲ ಎಂದ BJP

ತೃಣಮೂಲ ಕಾಂಗ್ರೆಸ್‌ (TMC) ತೊರೆದು ನ್ಯಾಷನಲಿಸ್ಟ್‌ ಸಿಟಿಜನ್ಸ್‌ ಪಾರ್ಟಿ ಆಫ್‌ ಇಂಡಿಯಾ...

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...