ನೀನ್ಯಾಕೆ ಸಾಯಬಾರದು ಎಂದ ಪತಿ; ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಮಹಿಳೆ

Date:

Advertisements

ಯಾವುದೋ ವಿಷಯಕ್ಕೆ ಜಗಳ ನಡೆದಾಗ ನೀನ್ಯಾಕೆ ಸಾಯಬಾರದು ಎಂದು ಪತಿ ಹೇಳಿದ ಕಾರಣಕ್ಕೆ 22 ವರ್ಷದ ಮಹಿಳೆ ವಿಡಿಯೋ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ. ಸುಮಾರು ನಾಲ್ಕು ತಿಂಗಳ ಹಿಂದೆ ವಿವಾಹ ನಡೆದಿತ್ತು.

ಮೃತ ಮಹಿಳೆಯನ್ನು ಅಮ್ರೀನ್‌ ಎಂದು ಗುರುತಿಸಲಾಗಿದೆ. ಅಮ್ರೀಮ್ ಪ್ರೇಮ ವಿವಾಹವಾಗಿದ್ದು ಆಕೆಯ ಪತಿ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ. ಆಕೆ ಮೊರಾದಾಬಾದ್‌ನಲ್ಲಿ ತನ್ನ ಮಾವ, ಅತ್ತಿಗೆಯೊಂದಿಗೆ ವಾಸವಾಗಿದ್ದಳು. ವಿಡಿಯೋ ಮಾಡಿಕೊಂಡು ತನ್ನ ಮಾವ, ಅತ್ತಿಗೆ, ಪತಿಯ ಒತ್ತಡದಿಂದ ಈ ನಿರ್ಧಾರ ಮಾಡಿಕೊಂಡಿದ್ದೇನೆ ಎಂದು ಹೇಳಿ ಅಮ್ರೀನ್ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇದನ್ನು ಓದಿದ್ದೀರಾ? ಬೆಂಗಳೂರು | ವಕೀಲೆ ಆತ್ಮಹತ್ಯೆ ಪ್ರಕರಣ; ಡಿವೈಎಸ್‌ಪಿ ಕನಕಲಕ್ಷ್ಮೀ ಬಂಧನ

Advertisements

“ಗರ್ಭಪಾತವಾದಾಗಿನಿಂದ ನಾನು ಅಸ್ವಸ್ಥಳಾಗಿದ್ದೇನೆ. ಆದರೆ ಇವರೆಲ್ಲರೂ ನನ್ನ ಆಹಾರ ಪದ್ಧತಿ ಬಗ್ಗೆಯೇ ಮಾತನಾಡುತ್ತಾರೆ. ನನ್ನ ಅತ್ತಿಗೆ ಖತೀಜಾ ಮತ್ತು ನನ್ನ ಮಾವ ಶಾಹಿದ್‌ ನನ್ನ ಸಾವಿಗೆ ಕಾರಣರು. ನನ್ನ ಪತಿ ಕೂಡ ಭಾಗಶಃ ಕಾರಣ” ಎಂದು ಅಮ್ರೀನ್ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

“ನನ್ನ ಪತಿ ನನ್ನನ್ನು ಅರ್ಥಮಾಡಿಕೊಳ್ಳುವುದಿಲ್ಲ. ಪ್ರತಿ ಬಾರಿಯೂ ನನ್ನದೇ ತಪ್ಪೆಂದು ಭಾವಿಸುತ್ತಾರೆ. ನನ್ನ ಪತಿ, ಮಾವ, ಅತ್ತಿಗೆ ನಾನು ಸಾಯಬೇಕೆಂದು ಬಯಸಿದ್ದರು. ‘ನೀನ್ಯಾಕೆ ಸಾಯಬಾರದು’ ಎಂದು ನನ್ನ ಪತಿ ಕೇಳಿದ್ದರು. ಅವರ ತಂದೆ, ಸಹೋದರಿ ಕೂಡಾ ಇದೇ ಮಾತನ್ನು ಆಗಾಗೇ ಹೇಳುತ್ತಾರೆ. ಈ ಎಲ್ಲ ಮಾತಿಂದ ನಾನು ಬೇಸತ್ತಿದ್ದೇನೆ. ಇನ್ನು ನನಗೆ ಇದನ್ನು ಸಹಿಸಲಾಗದು” ಎಂದು ಅಮ್ರೀನ್ ಆರೋಪಿಸಿದ್ದಾರೆ.

ಈ ವಿಡಿಯೋ ಮಾಡಿ ಅಮ್ರೀನ್‌ ನೇಣು ಬಿಗಿದು ಮೃತಪಟ್ಟಿದ್ದಾಳೆ. ಘಟನೆಯ ಬಗ್ಗೆ ಅಮ್ರೀನ್‌ಳ ತಾಯಿಗೆ ತಿಳಿಸಿದಾಗ, ಆಕೆಯ ಗಂಡನ ಮನೆಯವರು ಮಾನಸಿಕ ಹಿಂಸೆ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ. ತನಿಖೆಯ ಸಮಯದಲ್ಲಿ, ಪೊಲೀಸರಿಗೆ ಅಮ್ರೀನ್‌ಳ ಫೋನ್‌ನಲ್ಲಿ ವಿಡಿಯೋ ಪತ್ತೆಯಾಗಿದೆ.

ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ವಿಷಯದ ಬಗ್ಗೆ ಸಂಪೂರ್ಣ ತನಿಖೆಯ ನಂತರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. ಸದ್ಯ ಅಮ್ರೀನ್‌ ಕುಟುಂಬದಿಂದ ದೂರು ಪಡೆದುಕೊಂಡಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X