ಮಾವನ ಕೊಂದು ಅರಿಶಿನ ಹಚ್ಚಿ ಗಾಯಗಳನ್ನು ಮುಚ್ಚಿಡಲು ಯತ್ನಿಸಿದ ಮಹಿಳೆ

Date:

Advertisements

ಮಹಿಳೆಯೋರ್ವರು ತನ್ನ 60 ವರ್ಷದ ಮಾವನನ್ನು ಕೊಂದು ಅರಿಶಿನ ಹಚ್ಚಿ ಗಾಯಗಳನ್ನು ಮುಚ್ಚಿಡಲು ಯತ್ನಿಸಿದ ಘಟನೆ ಛತ್ತೀಸ್‌ಗಢದ ಬಲೋದ್ ಜಿಲ್ಲೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮನೋಹರ್ ನಿರ್ಮಲ್ಕರ್ ಎಂದು ಗುರುತಿಸಲಾಗಿದೆ.

ಆರೋಪಿ ಮಹಿಳೆ ಗೀತಾ ನಿರ್ಮಲ್ಕರ್ ತನ್ನ ಸ್ನೇಹಿತ ಲೇಖ್ರಾಮ್ ನಿಶಾದ್ ಸಹಾಯದಿಂದ ಈ ಕೊಲೆ ಮಾಡಿದ್ದಾಳೆ ಎಂದು ಹೇಳಲಾಗಿದೆ. ತನ್ನ ಮಾವ ನಿದ್ದೆ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ನೀಡಿ ಹತ್ಯೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ.

ಇದನ್ನು ಓದಿದ್ದೀರಾ? ಶಿವಮೊಗ್ಗ | ಬೊಮ್ಮನಕಟ್ಟೆಯಲ್ಲಿ ಕುಡಿದ ಅಮಲಿನಲ್ಲಿ ಗಲಾಟೆ : ಕೊಲೆಯಲ್ಲಿ ಅಂತ್ಯ

Advertisements

ಮನೋಹರ್ ಕುಡಿದು ಸೈಕಲ್‌ನಿಂದ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಗೀತಾ ಕುಟುಂಬಸ್ಥರು ಮತ್ತು ಗ್ರಾಮಸ್ಥರಿಗೆ ತಿಳಿಸಿದ್ದಾಳೆ. ಆದರೆ ಅಂತ್ಯಕ್ರಿಯೆ ಸಿದ್ಧತೆ ನಡೆಸುವಾಗ ಗ್ರಾಮಸ್ಥರು ದೇಹದ ಮೇಲೆ ಹಲವು ಗಾಯದ ಗುರುತುಗಳನ್ನು ನೋಡಿ ದೋಂಡಿ ಲೋಹರಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ವಿದ್ಯುತ್ ಆಘಾತದಿಂದ ಸಾವು ಸಂಭವಿಸಿದೆ ಎಂದು ದೃಢಪಟ್ಟಿದೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ಯೋಗೇಶ್ ಪಟೇಲ್, “ಕೊಲೆ ನಡೆದಾಗ ಮನೋಹರ್ ಕುಡಿದು ನಿದ್ರಿಸುತ್ತಿದ್ದರು. ಅಂತ್ಯಕ್ರಿಯೆಗೆ ಸಿದ್ಧತೆ ನಡೆಸುತ್ತಿದ್ದಾಗ ಗ್ರಾಮಸ್ಥರು ದೇಹದ ಮೇಲೆ ಗಾಯಗಳನ್ನು ನೋಡಿ ಕೊಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ಮಾಹಿತಿ ನೀಡಿದರು. ಮರಣೋತ್ತರ ಪರೀಕ್ಷೆ ವೇಳೆ ಕೊಲೆ ನಡೆದಿರುವುದು ದೃಢಪಟ್ಟಿದೆ” ಎಂದು ತಿಳಿಸಿದ್ದಾರೆ.

ತನಿಖೆಯ ಸಮಯದಲ್ಲಿ, ಪೊಲೀಸರು ಕುಟುಂಬ ಮತ್ತು ಗ್ರಾಮಸ್ಥರನ್ನು ಪ್ರಶ್ನಿಸಿದ್ದು ಮನೋಹರ್ ಮತ್ತು ಅವರ ಸೊಸೆಯ ನಡುವೆ ಆಗಾಗ್ಗೆ ಜಗಳಗವಾಗುತ್ತಿತ್ತು ಎಂದು ತಿಳಿದುಬಂದಿದೆ. ಇನ್ನು ಸೊಸೆ ತನಗೆ ಮಾವ ಹಿಂಸೆ ನೀಡುತ್ತಿದ್ದರು ಎಂದು ಆರೋಪಿಸಿದ್ದಾಳೆ.

“ಆರೋಪಿಗಳು ಮನೋಹರ್ ಮಲಗಿದ್ದಾಗ ದೇಹದ ವಿವಿಧ ಭಾಗಗಳಿಗೆ ವಿದ್ಯುತ್ ಶಾಕ್ ನೀಡಿ ಕೊಂದಿದ್ದಾರೆ. ಬಳಿಕ ಗಾಯಗಳನ್ನು ಮರೆಮಾಡಲು ಅರಿಶಿನ ಮತ್ತು ರೋಸ್ ವಾಟರ್ ಹಚ್ಚಿದ್ದಾರೆ. ಕುಟುಂಬಸ್ಥರು ಮತ್ತು ಗ್ರಾಮದ ಜನರಿಗೆ ಮನೋಹರ್ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ” ಎಂದು ಘಟನೆಯ ವಿವರ ನೀಡಿದ್ದಾರೆ.

ಇಬ್ಬರೂ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದ್ದು ತನಿಖೆ ಮುಂದುವರೆದಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X