ಮಹಿಳಾ ಪೊಲೀಸ್‌ ಜೊತೆ ಡಿಎಸ್‌ಪಿ ದುಂಡಾವರ್ತನೆ; ನೆಟ್ಟಿಗರ ಆಕ್ರೋಶ

Date:

Advertisements

ಮಹಿಳಾ ಪೊಲೀಸ್‌ ಅಧಿಕಾರಿಯೊಂದಿಗೆ ಜಿಲ್ಲಾ ಉಪ ಪೊಲೀಸ್‌ ವರಿಷ್ಠಾಧಿಕಾರಿ (ಡಿಎಸ್‌ಪಿ) ಅನುಚಿತವಾಗಿ ವರ್ತಿಸಿರುವ ಘಟನೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಡಿಎಸ್‌ಪಿ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುರು ನಗರದಲ್ಲಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ನಡೆಸಿದ ಪ್ರತಿಭಟನೆ ವೇಳೆ, ಮಹಿಳಾ ಅಧಿಕಾರಿ ಮೇಲೆ ಡಿಎಸ್‌ಪಿ ಸುನಿಲ್ ಜಜಾರಿಯಾ ಅವರು ದುಂಡಾವರ್ತನೆ ಪ್ರದರ್ಶಿಸಿದ್ದಾರೆ.

ಚುರು ಸಂಸದ ರಾಹುಲ್ ಕಸ್ವಾನ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಬಿಜೆಪಿ ಸರ್ಕಾರದ ನೀತಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಪ್ರವೇಶಿಸದಂತೆ ತಡೆಯುವ ಸಮಯದಲ್ಲಿ ಘಟನೆ ನಡೆದಿದೆ. ಡಿಎಸ್‌ಪಿ ಜಜಾರಿಯಾ ಅವರು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಇದೇ ವೇಳೆ, ಮಹಿಳಾ ಪೊಲೀಸ್ ಅಧಿಕಾರಿಯ ಬೆನ್ನಿಗೆ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ.

Advertisements

ವೈರಲ್ ಆಗಿರುವ ವಿಡಿಯೋದಲ್ಲಿ; ಮುಂದೆ ಸಾಗುತ್ತದ್ದ ಮಹಿಳಾ ಪೊಲೀಸ್‌ ಅಧಿಕಾರಿಯ ಬೆನ್ನಿಗೆ ಹಿಂದಿನಿಂದ ಡಿಎಸ್‌ಪಿ ಸುನಿಲ್ ಜಜಾರಿಯಾ ಅವರು ಹೊಡೆಯುತ್ತಿರುವುದು ಮತ್ತು ನಿಂದಿಸುತ್ತಿರುವುದು ಕಂಡುಬಂದಿದೆ.

ಆದರೆ, ತಾವು ಮಹಿಳಾ ಪೊಲೀಸ್‌ ಅಧಿಕಾರಿಗೆ ಹೊಡೆದಿಲ್ಲವೆಂದು ಡಿಎಸ್‌ಪಿ ಜಜಾರಿಯಾ ಹೇಳಿಕೊಂಡಿದ್ದಾರೆ. ಮಾತ್ರವಲ್ಲದೆ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪತ್ರಕರ್ತೆಯ ವಿರುದ್ಧ ವಿಡಿಯೋದಲ್ಲಿ ಹಲ್ಲೆಗೊಳಗಾದ ಮಹಿಳಾ ಪೊಲೀಸ್‌ ಅಧಿಕಾರಿಯೇ ಪ್ರಕರಣ ದಾಖಲಿಸಿದ್ದಾರೆ.

“ಡಿಎಸ್‌ಪಿ ಸರ್ ನನಗೆ ಅವರಿಗೆ ಹೊಡೆದಿಲ್ಲ. ಅವರು ಹಿಂದಿನಿಂದ ನನ್ನನ್ನು ಕರೆದರು ಅಷ್ಟೇ. ವೀಡಿಯೊವನ್ನು ವೈರಲ್ ಆಗಿದ್ದರಿಂದ ನನ್ನ ಪ್ರತಿಷ್ಠೆಗೆ ಧಕ್ಕೆಯಾಗಿದೆ. ಡಿಎಸ್‌ಪಿ ನನ್ನೊಂದಿಗೆ ಕೆಟ್ಟದಾಗಿ ವರ್ತಿಸಿಲ್ಲ” ಎಂದು ಮಹಿಳಾ ಅಧಿಕಾರಿ ಹೇಳಿದ್ದಾರೆ.

ಆದಾಗ್ಯೂ, ಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಘಟನೆಯನ್ನು ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ನೆಟ್ಟಿಗರು ತೀವ್ರವಾಗಿ ಖಂಡಿಸಿದ್ದಾರೆ. ಡಿಎಎಸ್‌ಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಘಟನೆಯನ್ನು ‘ಸಮವಸ್ತ್ರದ ದುರುಪಯೋಗ’ ಎಂದು ಕಾಂಗ್ರೆಸ್‌ ಕರೆದಿದೆ.

“ಮಹಿಳೆಯರ ಗೌರವ ಮತ್ತು ಘಟನೆಯ ವಿಚಾರದಲ್ಲಿ ಬಿಜೆಪಿ ಬರೀ ಮಾತಿಗಷ್ಟೇ ಸೀಮಿತವಾಗಿದೆ. ಬಿಜೆಪಿ ಸರ್ಕಾರದಲ್ಲಿ, ಪೊಲೀಸ್ ಅಧಿಕಾರಿಗಳೇ ಗೂಂಡಾಗಿರಿ ಮಾಡಿದ್ದಾರೆ. ಇದು ಮಹಿಳೆಯರಿಗೆ ಮಾಡಿದ ಅವಮಾನ. ಡಿಎಸ್‌ಪಿ ಸುನಿಲ್ ಜಜಾರಿಯಾ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು” ಎಂದು ಕಾಂಗ್ರೆಸ್‌ ಆಗ್ರಹಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X