ಕಾಂಗ್ರೆಸ್ ಮಡಿಲಿನಲ್ಲಿರುವ ಕುಸ್ತಿಪಟುಗಳು: ಬ್ರಿಜ್‌ ಭೂಷಣ್ ಸಿಂಗ್

Date:

Advertisements

ಪ್ರತಿಭಟನಾನಿರತ ಕುಸ್ತಿಪಟುಗಳು ಕಾಂಗ್ರೆಸ್‌ ಮಡಿಲಲ್ಲಿ ಕುಳಿತಿರುವುದರಿಂದ ಬಹುತೇಕ ಪ್ರಮುಖ ಕುಸ್ತಿಪಟುಗಳು ಅವರನ್ನು ಬೆಂಬಲಿಸುತ್ತಿಲ್ಲ ಎಂದು ಬಿಜೆಪಿ ಸಂಸದ ಬ್ರಿಜ್‌ ಭೂಷಣ್ ಸಿಂಗ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬ್ರಿಜ್ ಭೂಷಣ್ ಸಿಂಗ್, ”ಕುಸ್ತಿಪಟುಗಳು ಕಾಂಗ್ರೆಸ್‌ನ ಮಡಿಲಲ್ಲಿ ಕುಳಿತಿರುವುದರಿಂದ ಪ್ರಮುಖ ಹಲವು ಪ್ರತಿಭಟನಾಕಾರರು ಅವರನ್ನು ಬೆಂಬಲಿಸುತ್ತಿಲ್ಲ. ಈಗ, ಅವರೊಂದಿಗೆ ಹೋರಾಡಲು ನಾನು ನೇಣು ಹಾಕಿಕೊಳ್ಳಬೇಕೇ?” ಎಂದು ಪ್ರಶ್ನಿಸಿದ್ದಾರೆ.

“ಕುಸ್ತಿಯ ಅಭಿವೃದ್ಧಿ ಕಳೆದ 11 ತಿಂಗಳುಗಳಿಂದ ಕುಂಠಿತವಾಗಿದೆ. ನ್ಯಾಯಯುತ ಚುನಾವಣೆ ನಡೆದು ನಮ್ಮ ಪಾಳಯದಿಂದ ಸಂಜಯ್ ಸಿಂಗ್ ಸ್ಪಷ್ಟ ಬಹುಮತದೊಂದಿಗೆ ಆಯ್ಕೆಯಾದರು. ಇತರ ಅಭ್ಯರ್ಥಿಯು 33 ಮತಗಳಿಂದ ಸೋತರು. ಸಂಜಯ್‌ ಸಿಂಗ್ ಅವರು ಕ್ರೀಡೆಯ ಸುಧಾರಣೆಗೆ ಉತ್ತಮ ಕೆಲಸ ಮಾಡುವ ಗುರಿಯನ್ನು ಹೊಂದಿದ್ದಾರೆ” ಎಂದು ಬ್ರಿಜ್‌ ಭೂಷಣ್ ಸಿಂಗ್ ಹೇಳಿದರು.

Advertisements

“ಕುಸ್ತಿಪಟುಗಳು ಇನ್ನೂ ಪ್ರತಿಭಟನೆ ನಡೆಸುತ್ತಿದ್ದರೆ ಮತ್ತು ಸಾಕ್ಷಿ ಮಲಿಕ್ ಅವರು ಕ್ರೀಡೆಗೆ ವಿದಾಯ ಹೇಳಿದರೆ, ನಾನು ಅವರಿಗೆ ಏನು ಸಹಾಯ ಮಾಡಬಹುದು ಎಂದು ಪ್ರಶ್ನಿಸಿದ ಬ್ರಿಜ್, ಅವರು ತಿಂಗಳಿನಿಂದ ನನ್ನ ಮೇಲೆ ನಿಂದನೆ ಮಾಡುತ್ತಿದ್ದಾರೆ. ಹಾಗೆ ಮಾಡಲು ಅವರಿಗೆ ಯಾರು ಬೆಂಬಲ ನೀಡಿದ್ದಾರೆ ಎನ್ನುವುದನ್ನು ತಿಳಿದುಕೊಳ್ಳಿ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಕ್ಷಿ ಮಲಿಕ್‌ ʼಶೂʼಗಳು ಭಾರತದ ಆತ್ಮಸಾಕ್ಷಿಯನ್ನು ಅಣಕಿಸುವ ಸಂಕೇತವಾಗಿ ಉಳಿಯಲಿದೆ

ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪೂನಿಯಾ ಸೇರಿದಂತೆ ಭಾರತದ ಅಗ್ರಗಣ್ಯ ಕುಸ್ತಿಪಟುಗಳು ಅಪ್ರಾಪ್ತ ವಯಸ್ಕ ಸೇರಿದಂತೆ ಏಳು ಕುಸ್ತಿಪಟುಗಳ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಬಂಧನಕ್ಕೆ ಒತ್ತಾಯಿಸಿ ಹಲವು ತಿಂಗಳುಗಳ ಕಾಲ ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದರು.

ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ ನಂತರ ಅವರು ಜೂನ್‌ನಲ್ಲಿ ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಂಡರು.

ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧದ ದೂರುಗಳಲ್ಲಿ ಅನುಚಿತವಾಗಿ ಸ್ಪರ್ಶಿಸುವುದು, ಮಹಿಳೆಯರ ಖಾಸಗಿ ಭಾಗಗಳ ಮೇಲೆ ಕೈ ಹಾಕುವುದು ಸೇರಿದಂತೆ ಹಲವು ಆರೋಪಗಳು ದಾಖಲಾಗಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X