ಇಸ್ಲಾಂಗೆ ಯುವಕ ಮತಾಂತರ; ‘ಬ್ರೇನ್‌ವಾಶ್’ ಆರೋಪ: ಇಷ್ಟದ ಧರ್ಮ ಅನುಸರಿಸಲು ಸ್ವತಂತ್ರವಿದೆ ಎಂದ ಹೈಕೋರ್ಟ್

Date:

ವಯಸ್ಕನಾದ ವ್ಯಕ್ತಿಗೆ ತನ್ನಿಷ್ಟದ ಧರ್ಮವನ್ನು ಅನುಸರಿಸುವ ಹಾಗೂ ಜೀವನಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಪೂರ್ಣ ಸಂವಿಧಾನಾತ್ಮಕ ಹಕ್ಕಿದೆ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ತನ್ನ ಮಗನಿಗೆ ‘ಬ್ರೇನ್‌ವಾಶ್’ ಮಾಡಿ ಇಸ್ಲಾಂ ಧರ್ಮಕ್ಕೆ ಮತಾಂತರಿಸಲಾಗಿದೆ ಎಂಬ ತಂದೆಯ ವಾದವನ್ನು ನ್ಯಾಯಾಲಯ ತಳ್ಳಿಹಾಕಿದೆ.

- Advertisement -

ಉತ್ತರ ಪ್ರದೇಶದ ಶಾಮ್ಲಿ ನಿವಾಸಿ ಆಯುಷ್ ಮಲಿಕ್ (31) ಎಂಬ ಯುವಕನಿಗೆ ಸಂಬಂಧಿಸಿದ ಪ್ರಕರಣದಲ್ಲಿ ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ಸಂದೀಪ್ ಜೈನ್ ಈ ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಇದನ್ನೂ ಓದಿ: ಈ ದಿನ ಸಂಪಾದಕೀಯ | ಮತಾಂತರ ವಿಚಾರದಲ್ಲಿ ಬಿಜೆಪಿಯ ಬೂಟಾಟಿಕೆ ಮತ್ತು ವಾಸ್ತವ

ಆಯುಷ್ ಮಲಿಕ್ ಅವರ ಸ್ನೇಹಿತ ಸುಲ್ತಾನ್ ಎಂಬುವವರು ಹೈಕೋರ್ಟ್‌ನಲ್ಲಿ ಹೆಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಆಯುಷ್ ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿ, ಮುಸ್ಲಿಂ ಯುವತಿಯನ್ನು ಮದುವೆಯಾಗಲು ನಿರ್ಧರಿಸಿದ್ದರು. ಆದರೆ, ಇದರಿಂದ ಕುಪಿತಗೊಂಡ ಅವರ ತಂದೆ ದೇವ್‌ರಾಜ್ ಸಿಂಗ್ ಮಲಿಕ್, ಮಗನನ್ನು ಅಕ್ರಮವಾಗಿ ಗೃಹ ಬಂಧನದಲ್ಲಿಟ್ಟಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.

ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಆಯುಷ್ ಅವರನ್ನು ತಮ್ಮ ಮುಂದೆ ಹಾಜರುಪಡಿಸುವಂತೆ ಪೊಲೀಸರಿಗೆ ಸೂಚಿಸಿತ್ತು. ಕೋರ್ಟ್‌ಗೆ ಹಾಜರಾದ ಆಯುಷ್, “ನಾನು ಯಾವುದೇ ಒತ್ತಡ, ಬೆದರಿಕೆ ಅಥವಾ ಆಮಿಷವಿಲ್ಲದೆ 2014ರಲ್ಲೇ ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿದ್ದೇನೆ. ಜೂನ್ 4ರಿಂದ ನನ್ನ ಕುಟುಂಬಸ್ಥರು ನನ್ನನ್ನು ಅಕ್ರಮವಾಗಿ ಬಂಧನದಲ್ಲಿಟ್ಟಿದ್ದರು” ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಆದಾಗ್ಯೂ, ಆಯುಷ್ ಅವರ ತಂದೆ ದೇವ್‌ರಾಜ್, “ನನ್ನ ಮಗನಿಗೆ ಕೆಲವರು ಮರುಳು ಮಾಡಿ (Brainwash) ಧರ್ಮ ಪರಿವರ್ತನೆ ಮಾಡಿದ್ದಾರೆ” ಎಂದು ವಾದಿಸಿದರು.

ಎರಡೂ ಕಡೆಯ ವಾದ ಆಲಿಸಿದ ನ್ಯಾಯಮೂರ್ತಿಗಳು, “ತಂದೆಗೆ ಮಗನ ಬಗ್ಗೆ ಇರುವ ಕಾಳಜಿಯನ್ನು ಕುಟುಂಬದ ಹಿನ್ನೆಲೆಯಲ್ಲಿ ಅರ್ಥಮಾಡಿಕೊಳ್ಳಬಹುದು. ಆದರೆ, ಆ ಕಾಳಜಿಯು ಒಬ್ಬ ವಯಸ್ಕ ವ್ಯಕ್ತಿಯ ಸಂವಿಧಾನಾತ್ಮಕ ಸ್ವಾಯತ್ತತೆ ಮತ್ತು ಸ್ವತಂತ್ರ ನಿರ್ಧಾರವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದರು.

ಸಂವಿಧಾನದ ವಿಧಿ 25 (ಧಾರ್ಮಿಕ ಸ್ವಾತಂತ್ರ್ಯ) ಹಾಗೂ ವಿಧಿ 21 (ವೈಯಕ್ತಿಕ ಸ್ವಾತಂತ್ರ್ಯ) ಅನ್ನು ಉಲ್ಲೇಖಿಸಿದ ಪೀಠವು, ಆಯುಷ್ ಅವರಿಗೆ ತಮ್ಮಿಷ್ಟದ ಸ್ಥಳದಲ್ಲಿ ವಾಸಿಸಲು, ಇಷ್ಟಪಟ್ಟ ಧರ್ಮವನ್ನು ಆಚರಿಸಲು ಮತ್ತು ಕಾನೂನುಬದ್ಧವಾಗಿ ಮದುವೆಯಾಗಲು ಸಂಪೂರ್ಣ ಸ್ವಾತಂತ್ರ್ಯವಿದೆ ಎಂದು ತೀರ್ಪು ನೀಡಿ, ಅವರ ಮೇಲಿದ್ದ ನಿಯಂತ್ರಣಗಳನ್ನು ತೆರವುಗೊಳಿಸಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾಗಿ ರಾಕೇಶ್ ಕುಮಟಗಿ ನೇಮಕ

ನ್ಯಾಯ, ಸಮಾನತೆ ಹಾಗೂ ಸಂವಿಧಾನದ ಆಶಯಗಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಭೀಮ್ ಆರ್ಮಿ ಭಾರತ್...

ತುಳು ನುಡಿಗೆ ‘ಹೆಚ್ಚುವರಿ ಅಧಿಕೃತ ಭಾಷೆ’ ಮಾನ್ಯತೆ ಘೋಷಿಸಿ: ಕರವೇ ಆಗ್ರಹ

ಮಂಗಳೂರಿನಲ್ಲಿ ನಾಳೆ ನಡೆಯಲಿರುವ ರಾಜ್ಯ ಸರ್ಕಾರದ ಐತಿಹಾಸಿಕ ಸಚಿವ ಸಂಪುಟ ಸಭೆಯಲ್ಲಿ,...

ಇಳಿ ಮೂವತ್ತರಲ್ಲೇ ಮಹಿಳೆಯರ ಹೃದಯಕ್ಕೆ ಮುಪ್ಪು; ಪುರುಷರಿಗಿಂತ 10 ವರ್ಷ ಮುನ್ನವೇ ಆರಂಭ!

ಮಹಿಳೆಯರ ಹೃದಯದ ಆರೋಗ್ಯದ ಕುರಿತಂತೆ ಇದುವರೆಗೆ ಇದ್ದ ಸಾಮಾನ್ಯ ನಂಬಿಕೆಗಳನ್ನು ಸಂಪೂರ್ಣವಾಗಿ...

ಸ್ತ್ರೀ ಸಬಲೀಕರಣಕ್ಕೆ ರಾಣಿ ಚನ್ನಮ್ಮನ ಜೀವನ, ಹೋರಾಟವೇ ಪ್ರೇರಣೆ: ಪ್ರೊ. ಸಿ.ಎಂ ತ್ಯಾಗರಾಜ

ರಾಣಿ ಚನ್ನಮ್ಮನ ಚರಿತ್ರೆ ಹಾಗೂ ಅವರು ಪ್ರತಿಪಾದಿಸಿದ ಸ್ವಾತಂತ್ರ್ಯ, ಸ್ವಾಭಿಮಾನ, ಧೈರ್ಯ...