ಜಂತರ್‌ ಮಂತರ್‌ನತ್ತ ಮತ್ತೆ ಯುವಜನ; ಈ ಬಾರಿ ಅಮಿತ್‌ ಶಾ ರಾಜೀನಾಮೆಗೆ ಆಗ್ರಹ ಸಾಧ್ಯತೆ, ಆ.5ರಂದು ಸಿಜೆಪಿ ಸಭೆ

Date:

ದೆಹಲಿಯ ಜಂತರ್‌ ಮಂತರ್‌ನಲ್ಲಿ 36 ದಿನಗಳ ಕಾಲ ನಡೆದ ಐತಿಹಾಸಿಕ ವಿದ್ಯಾರ್ಥಿ ಹೋರಾಟದ ಬಳಿಕ, ಕಾಕ್ರೋಚ್ ಜನತಾ ಪಾರ್ಟಿ (CJP) ತನ್ನ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲು ಮುಂದಾಗಿದೆ. ಇದೇ ಆಗಸ್ಟ್‌ 5ರಂದು ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ವಾಲುಜ್‌ನಲ್ಲಿರುವ ಅಭಿಜಿತ್‌ ದೀಪ್ಕೆ ಅವರ ನಿವಾಸದಲ್ಲಿ ಕೋರ್‌ ಕಮಿಟಿ ಸಭೆ ನಡೆಯಲಿದೆ ಎಂದು ವರದಿಯಾಗಿದೆ.

- Advertisement -

ಸುಮಾರು 15 ಕೋರ್‌ ಕಮಿಟಿ ಸದಸ್ಯರು ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಜಂತರ್‌ ಮಂತರ್‌ನಲ್ಲಿ ಮತ್ತೆ ಪ್ರತಿಭಟನೆ ಆರಂಭಿಸುವ ಕುರಿತು ಹಾಗೂ ಪಕ್ಷದ ಮುಂದಿನ ಹೋರಾಟದ ದಿಕ್ಕಿನ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಸಭೆಯ ಬಳಿಕ ಮಾಧ್ಯಮಗೋಷ್ಠಿಯನ್ನೂ ಉದ್ದೇಶಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಅಕ್ರಮಗಳನ್ನು ವಿರೋಧಿಸಿ ನಡೆದ ಹೋರಾಟವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಯೊಂದಿಗೆ ಅಂತ್ಯಗೊಂಡಿತ್ತು. ಆದರೆ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳು, ಪೊಲೀಸ್‌ ಕ್ರಮ ಹಾಗೂ ಹೋರಾಟದ ವೇಳೆ ನಡೆದ ಘಟನೆಗಳ ಕುರಿತು ಇನ್ನೂ ಹಲವು ಪ್ರಶ್ನೆಗಳು ಉಳಿದಿರುವ ಹಿನ್ನೆಲೆಯಲ್ಲಿ ಮುಂದಿನ ಹಂತದ ಹೋರಾಟದ ಬಗ್ಗೆ ಸಿಜೆಪಿ ನಾಯಕತ್ವ ಚರ್ಚೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ. ಜತೆಗೆ ಈ ಬಾರಿಯ ಹೋರಾಟವು ಗೃಹ ಸಚಿವ ಅಮಿತ್‌ ಶಾ ಅವರ ರಾಜೀನಾಮೆಗೆ ಆಗ್ರಹಿಸಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಡಿಕೆಶಿ ಕ್ಯಾಬಿನೆಟ್ | 10 ಮಂದಿ ಹೊಸಬರು; ಉಳಿದವರಲ್ಲಿ ಯಾರು ಎಷ್ಟು ಬಾರಿ ಮಂತ್ರಿ ಆಗಿದ್ದಾರೆ; ಪರಿಪೂರ್ಣ ಡೀಟೇಲ್ಸ್‌!

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಜಂತರ್‌ ಮಂತರ್‌ನಲ್ಲಿ ಮತ್ತೆ ವಿದ್ಯಾರ್ಥಿಗಳ ಪ್ರತಿಭಟನೆ ಆರಂಭವಾಗಿದೆ ಎಂಬ ಗುಮಾನಿ ಹರಿದಾಡುತ್ತಿರುವ ನಡುವೆಯೇ, ಆಗಸ್ಟ್‌ 5ರ ಸಭೆ ರಾಜಕೀಯ ಹಾಗೂ ವಿದ್ಯಾರ್ಥಿ ವಲಯದಲ್ಲಿ ಕುತೂಹಲ ಮೂಡಿಸಿದೆ. ಸಭೆಯ ಕಾರ್ಯಸೂಚಿಯನ್ನು ಅಭಿಜಿತ್‌ ದೀಪ್ಕೆ ಬಹಿರಂಗಪಡಿಸಿಲ್ಲ. ಆದರೆ ಪಕ್ಷದ ಮುಂದಿನ ಹೋರಾಟದ ಕಾರ್ಯತಂತ್ರ, ಸಂಘಟನೆ ವಿಸ್ತರಣೆ ಹಾಗೂ ದೇಶಾದ್ಯಂತ ಯುವಜನರೊಂದಿಗೆ ಸಂಪರ್ಕ ಬಲಪಡಿಸುವ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಮಿತ್‌ ಶಾ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಯಲಿದೆ ಎಂಬುದಕ್ಕೆ ಅಧಿಕೃತ ದೃಢೀಕರಣ ಈವರೆಗೆ ಲಭ್ಯವಾಗಿಲ್ಲ ಎಂದು ಮೂಲಗಳು ತಿಳಿಸಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ ರಾಜಕೀಯ ತಂತ್ರ

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ....

6ನೇ ತರಗತಿಯಿಂದ ಮೂರು ಭಾಷಾ ನೀತಿ ಅನುಷ್ಠಾನ ಪರಿಶೀಲಿಸಿ: ಸಿಬಿಎಸ್‌ಇಗೆ ಸುಪ್ರೀಂ ಕೋರ್ಟ್‌ ಸೂಚನೆ

ಸಿಬಿಎಸ್‌ಇ ಶಾಲೆಗಳಲ್ಲಿ ಮೂರು ಭಾಷಾ ನೀತಿಯನ್ನು ಜಾರಿಗೆ ತರುವ ವಿಷಯಕ್ಕೆ ಸಂಬಂಧಿಸಿದಂತೆ...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ...