ಮಾನನಷ್ಟ ಪ್ರಕರಣದಲ್ಲಿ ಯೂಟ್ಯೂಬರ್ ಧ್ರುವ್‌ ರಾಠಿಗೆ ದೆಹಲಿ ಕೋರ್ಟ್ ಸಮನ್ಸ್

Date:

Advertisements

ಬಿಜೆಪಿ ನಾಯಕನೊಬ್ಬರು ದಾಖಲಿಸಿರುವ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್‌ ಧ್ರುವ್‌ ರಾಠಿ ಅವರಿಗೆ ದೆಹಲಿ ಕೋರ್ಟ್ ಸಮನ್ಸ್ ನೀಡಿದೆ.

ಮುಂಬೈ ಬಿಜೆಪಿ ಘಟಕದ ವಕ್ತಾರರಾದ ಸುರೇಶ್ ಕರ್ಮಿಶಿ ನಕುವಾ ಅವರು ರಾಠಿ ಅವರ ಯೂಟ್ಯೂಬ್‌ ಚಾನಲ್‌ನ ಒಂದು ವಿಡಿಯೋ ‘ಹಿಂಸಾತ್ಮಕ ಹಾಗೂ ನಿಂದನೀಯ’ವಾಗಿದೆ ಎಂದು ದೂರು ದಾಖಲಿಸಿದ್ದಾರೆ.

ಜುಲೈ 19ರಂದು ಸಾಕೇತ್‌ ಕೋರ್ಟ್‌ನ ಜಿಲ್ಲಾ ನ್ಯಾಯಾಧೀಶರಾದ ಗುಂಜನ್‌ ಗುಪ್ತಾ ಅವರು ಸಮನ್ಸ್ ನೀಡಿದ್ದಾರೆ.

Advertisements

ಸುರೇಶ್ ಕರ್ಮಿಶಿ ನಕುವಾ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್‌ 6 ರಂದು ನಡೆಯಲಿರುವ ನ್ಯಾಯಾಲಯದ ವಿಚಾರಣೆಯಲ್ಲಿ ಹಾಜರಾಗಬೇಕೆಂದು ಧ್ರುವ್‌ ರಾಠಿ ಅವರಿಗೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಪತ್ನಿ ಪಾಕಿಸ್ತಾನಿ, ದಾವೂದ್ ಬಂಗಲೆಯಲ್ಲಿ ವಾಸ ಎಂಬ ಆರೋಪಕ್ಕೆ ಧ್ರುವ್ ರಾಠಿ ತಕ್ಕ ಉತ್ತರ

ರಾಠಿ ಅವರು ತಮ್ಮ ವಿಡಿಯೋದಲ್ಲಿ ಸುಳ್ಳು ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ. ಇವರ ವಿಡಿಯೋಗಳು ಹಿಂಸಾತ್ಮಕ ಹಾಗೂ ನಿಂದನೀಯ ಟ್ರೋಲ್‌ಗಳಾಗಿವೆ ಎಂದು ನಕುವಾ ಆರೋಪಿಸಿದ್ದಾರೆ.

ರಾಠಿ ಮಾಡಿರುವ ಆರೋಪದ ವಿಡಿಯೋದಲ್ಲಿ ಯಾವುದೇ ಸ್ಪಷ್ಟ ಉದ್ದೇಶವಿಲ್ಲ.ತಮ್ಮ ಘನತೆಯನ್ನು ಹಾಳು ಮಾಡುವ ಉದ್ದೇಶ ಮಾತ್ರ ಹೊಂದಿದೆ ಎಂದು ನಕುವಾ ತಿಳಿಸಿದ್ದಾರೆ.

ತಮ್ಮ ವಿರುದ್ಧ ಮಾಡಲಾದ ವಿಡಿಯೋ ಕುತಂತ್ರದಿಂದ ದೂಷಿಸಿ ರಚಿಸಲಾದ ವಿಡಿಯೋವಾಗಿದೆ. ತಮ್ಮ ಘನತೆಯನ್ನು ಉದ್ದೇಶಪೂರ್ವಕವಾಗಿ ಹಾಳು ಮಾಡುವ ಸ್ಪಷ್ಟ ಉದ್ದೇಶವನ್ನು ಹೊಂದಿದೆ. ವಿಡಿಯೋ ಸೃಷ್ಟಿಸಿರುವವರು ಸಮಾಜದಲ್ಲಿ ತಾವು ಸಂಪಾದಿಸಿರುವ ಗೌರವವನ್ನು ಹಾಳು ಮಾಡುವುದಾಗಿದೆ. ಇದು ತಮ್ಮ ವೈಯುಕ್ತಿಕ ಹಾಗೂ ವೃತ್ತಿ ಬದುಕಿನ ಜೀವನದ ಮೇಲೆ ದೂರಗಾಮಿ ಹಾಗೂ ಗಂಭೀರ ಪರಿಣಾಮಗಳನ್ನು ಉಂಟುಮಾಡಲಿದೆ ಎಂದು ನಕುವಾ ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X