ಆಹಾರದ ಮೇಲೆ ಫಂಗಸ್, ಅವಧಿ ಮೀರಿದ ಉತ್ಪನ್ನಗಳು: ಝೆಪ್ಟೋ ಗೋದಾಮಿನ ಪರವಾನಗಿ ಅಮಾನತು

Date:

Advertisements

ಆಹಾರ ಪದಾರ್ಥಗಳ ಮೇಲೆ ಫಂಗಸ್, ಅವಧಿ ಮೀರಿದ ಉತ್ಪನ್ನಗಳು ಮತ್ತು ನೈರ್ಮಲ್ಯವಿಲ್ಲದ ಶೇಖರಣೆ ವ್ಯವಸ್ಥೆ ಕಂಡುಬಂದ ಕಾರಣ ಮಹಾರಾಷ್ಟ್ರದ ಧಾರವಿಯಲ್ಲಿರುವ ಆನ್‌ಲೈನ್ ಡೆಲಿವರಿ ಅಪ್ಲಿಕೇಷನ್ ಝೆಪ್ಟೋದ ಗೋದಾಮಿನ ಪರವಾನಗಿ ರದ್ದುಗೊಳಿಸಲಾಗಿದೆ. ಆಹಾರ ಮತ್ತು ಔಷಧ ಆಡಳಿತ(ಎಫ್‌ಡಿಎ) ಅಧಿಕಾರಿಗಳು ಗೋದಾಮಿಗೆ ಭೇಟಿ ನೀಡಿದ್ದು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆ ಉಲ್ಲಂಘನೆಯಡಿ ಕ್ರಮಕೈಗೊಂಡಿದೆ.

ಸದ್ಯ ಆಂತರಿಕ ಪರಿಶೀಲನೆಯನ್ನು ಪ್ರಾರಂಭಿಸಲಾಗಿದೆ. ಗ್ರಾಹಕರಿಗೆ ಸುರಕ್ಷಿತ ಉತ್ಪನ್ನಗಳನ್ನು ಒದಗಿಸಲು ನಾವು ಬದ್ಧವಾಗಿದ್ದೇವೆ. ಆಹಾರ ಸುರಕ್ಷತೆ ಮತ್ತು ನೈರ್ಮಲ್ಯದ ಅತ್ಯುನ್ನತ ಗುಣಮಟ್ಟವನ್ನು ಕಾಪಾಡಿಕೊಳ್ಳುವುದರಲ್ಲಿ ಯಾವುದೇ ಕೊರತೆ ಕಂಡರೂ ಅದನ್ನು ಕ್ಷಮಿಸಲಾಗದು” ಎಂದು ಝೆಪ್ಟೋ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನು ಓದಿದ್ದೀರಾ? ಬಜೆಟ್ 2025 | ಗಿಗ್ ಕಾರ್ಮಿಕರಿಗೆ ಗುರುತಿನ ಚೀಟಿ, ಆರೋಗ್ಯ ವಿಮೆ

Advertisements

“ನಾವು ಈಗಾಗಲೇ ಆಂತರಿಕ ಪರಿಶೀಲನೆಯನ್ನು ಪ್ರಾರಂಭಿಸಿದ್ದು ಶೀಘ್ರ ತನಿಖೆ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಲೋಪಗಳನ್ನು ಸರಿಪಡಿಸಲು, ಗ್ರಾಹಕರಿಗೆ ಉತ್ತಮ ಮತ್ತು ಸುರಕ್ಷಿತ ಗುಣಮಟ್ಟದ ಉತ್ಪನ್ನಗಳನ್ನು ಒದಗಿಸಲು ನಾವು ಬದ್ಧರಾಗಿದ್ದೇವೆ. ಕಾನೂನು ಅನುಸಾರವಾಗಿ ಕಾರ್ಯಾಚರಣೆಗಳನ್ನು ಪುನರಾರಂಭಿಸಲು ನಾವು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ” ಎಂದೂ ಝೆಪ್ಟೋ ಹೇಳಿದೆ.

ಆಹಾರ ಮತ್ತು ಔಷಧ ಆಡಳಿತ ರಾಜ್ಯ ಸಚಿವ ಯೋಗೇಶ್ ಕದಮ್ ಅವರಿಂದ ಪಡೆದ ಮಾಹಿತಿಯ ಆಧಾರದ ಮೇಲೆ ಮಹಾರಾಷ್ಟ್ರದ ಎಫ್‌ಡಿಎ ಝೆಪ್ಟೋ ಧಾರಾವಿ ಗೋದಾಮಿನಲ್ಲಿ ತಪಾಸಣೆ ನಡೆಸಿದೆ. ಈ ವೇಳೆ ಕೆಲವು ಆಹಾರ ಪದಾರ್ಥಗಳ ಮೇಲೆ ಫಂಗಸ್ ಕಂಡುಬಂದಿದೆ.

ನಿಂತ ನೀರಿನ ಹತ್ತಿರವೇ ಉತ್ಪನ್ನಗಳನ್ನು ಸಂಗ್ರಹಿಸಿರುವುದು, ಆಹಾರ ವಸ್ತುಗಳನ್ನು ಸರಿಯಾಗಿ ಶೇಖರಣೆ ಮಾಡದಿರುವುದು, ನೇರವಾಗಿ ನೆಲದ ಮೇಲೆ ವಸ್ತು ಇಟ್ಟಿರುವುದು, ಅಲ್ಲಲ್ಲಿ ಚೆಲ್ಲಾಪಿಲ್ಲಿಯಾಗಿ ಆಹಾರ ಪದಾರ್ಥಗಳು ಬಿದ್ದಿರುವುದು, ನೆಲ ಕೊಳಕಾಗಿರುವುದು, ಅವಧಿ ಮುಗಿದ ಸ್ಟಾಕ್ ಮತ್ತು ಅವಧಿ ಮುಗಿಯದ ಸ್ಟಾಕ್ ಜೊತೆಯಾಗಿರುವುದು ಕಂಡುಬಂದಿದೆ.

ಇನ್ನು ಕಳೆದ ಕೆಲವು ತಿಂಗಳುಗಳಿಂದ ಮಹಾರಾಷ್ಟ್ರದಲ್ಲಿ ಝೆಪ್ಟೋ ಹಲವು ವಿವಾದಗಳಿಗೆ ಗುರಿಯಾಗುತ್ತಿದೆ. ಮುಂಬೈ ಜಿಲ್ಲೆಯ ವಿವಿಧ ಗೋದಾಮುಗಳಲ್ಲಿ ಕೊಳಕು ಇರುವ, ಅಸ್ತವ್ಯಸ್ತವಾಗಿ ಆಹಾರ ಪದಾರ್ಥ ಶೇಖರಣೆ ಮಾಡಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X