₹2,000 ಬೆಲೆಯ ನೋಟನ್ನೇ ನೀಡುತ್ತಿರುವ ಗ್ರಾಹಕರು: ಝೊಮ್ಯಾಟೋಗೆ ಹೊಸ ತಲೆಬಿಸಿ!

Date:

Advertisements
  • ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಫುಡ್ ಡೆಲಿವರಿ ಸಂಸ್ಥೆ ಝೊಮ್ಯಾಟೊ
  • ಚಲಾವಣೆಗೆ ಬಂದ ಕೇವಲ ಎರಡೇ ವರ್ಷಗಳಲ್ಲಿ ನೋಟು ಹಿಂಪಡೆಯಲು ಆರ್‌ಬಿಐ ನಿರ್ಧಾರ

ಭಾರತೀಯ ರಿಸರ್ವ್ ಬ್ಯಾಂಕ್ ₹2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿದ ಬಳಿಕ, ಝೊಮ್ಯಾಟೋಗೆ ಹೊಸ ತಲೆಬಿಸಿ ಶುರುವಾಗಿದೆ.

‘ಕ್ಯಾಶ್‌ ಆನ್‌ ಡೆಲಿವರಿ’ ಆಯ್ಕೆ ಮಾಡುವ ಗ್ರಾಹಕರು, ಡೆಲಿವರಿಯ ವೇಳೆ ಗ್ರಾಹಕರು ₹2,000 ಮುಖಬೆಲೆಯ ನೋಟುಗಳನ್ನೇ ನೀಡುತ್ತಿರುವುದಾಗಿ ದೇಶದ ಫುಡ್ ಡೆಲಿವರಿ ಸಂಸ್ಥೆಯಾಗಿರುವ ಝೊಮ್ಯಾಟೊ ಮಾಹಿತಿ ಹಂಚಿಕೊಂಡಿದೆ.

ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿರುವ ಕಂಪನಿ, “ಕಳೆದ ಶುಕ್ರವಾರದಿಂದ ‘ಕ್ಯಾಶ್‌ ಆನ್‌ ಡೆಲಿವರಿ’ ಆಯ್ಕೆ ಮಾಡುವ ಗ್ರಾಹಕರು, ಡೆಲಿವರಿಯ ವೇಳೆ ಶೇಕಡಾ 72%ರಷ್ಟು ಗ್ರಾಹಕರು ₹2,000 ಮುಖಬೆಲೆಯ ನೋಟುಗಳನ್ನೇ ನೀಡುತ್ತಿರುವುದಾಗಿ ಹೇಳಿಕೊಂಡಿದೆ.

Advertisements

₹2,000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವುದಾಗಿ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಶುಕ್ರವಾರ ಘೋಷಿಸಿತ್ತು. ಆ ಬಳಿಕ ಈ ರೀತಿಯ ಬೆಳವಣಿಗೆಯಾಗಿದೆ.

₹2,000 ಮುಖಬೆಲೆಯ ನೋಟುಗಳನ್ನು ಸಾರ್ವಜನಿಕರು ನೋಟುಗಳನ್ನು ಬ್ಯಾಂಕ್‌ಗಳಲ್ಲಿ ಠೇವಣಿ ಇಡಬಹುದು ಅಥವಾ ವಿನಿಮಯ ಮಾಡಿಕೊಳ್ಳಬಹುದು ಎಂದು ಆರ್‌ಬಿಐ ಇತ್ತೀಚೆಗೆ ಹೊರಡಿಸಿದ್ದ ಪ್ರಕಟಣೆಯಲ್ಲಿ ದೇಶದ ನಾಗರಿಕರಿಗೆ ತಿಳಿಸಿತ್ತು.

ಆರ್‌ಬಿಐನ ನಿರ್ಧಾರದಿಂದಾಗಿ ಗ್ರಾಹಕರು ಆನ್‌ಲೈನ್ ಪೇಮೆಂಟ್ ಬದಲಾಗಿ ಹೆಚ್ಚಾಗಿ, ‘ಕ್ಯಾಶ್‌ ಆನ್‌ ಡೆಲಿವರಿ’ಯನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಹಣ ನೀಡುವ ವೇಳೆ ತಮ್ಮಲ್ಲಿರುವ ₹2 ಸಾವಿರದ ನೋಟುಗಳನ್ನೇ ನೀಡುತ್ತಿದ್ದಾರೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ತೃತೀಯ ರಂಗಕ್ಕೆ ಶಕ್ತಿ ತುಂಬಲಿದೆಯೇ ಕರ್ನಾಟಕದ ಗೆಲುವು?

ಸೋಮವಾರ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ₹2,000 ನೋಟುಗಳಲ್ಲಿ ಹೆಚ್ಚಿನವು ಸೆಪ್ಟೆಂಬರ್ 30 ರ ಗಡುವಿನೊಳಗೆ ಹಿಂತಿರುಗುವ ನಿರೀಕ್ಷೆಯಿದೆ ಎಂದು ಹೇಳಿದರು. ತಕ್ಷಣವೇ ಜಾರಿಗೆ ಬರುವಂತೆ ₹ 2000 ಮುಖಬೆಲೆಯ ನೋಟುಗಳನ್ನು ನೀಡುವುದನ್ನು ನಿಲ್ಲಿಸುವಂತೆ ಬ್ಯಾಂಕ್‌ಗಳಿಗೆ ಸಲಹೆ ನೀಡಿದೆ .

ನವೆಂಬರ್ 2016 ರಲ್ಲಿ ಆರ್‌ಬಿಐ ಕಾಯಿದೆ, 1934 ರ ಸೆಕ್ಷನ್ 24 (1) ರ ಅಡಿಯಲ್ಲಿ ಹಳೆಯ ₹500 ಮತ್ತು ₹1000 ನೋಟುಗಳನ್ನು ಅಮಾನ್ಯಗೊಳಿಸಿತ್ತು. ಆ ಬಳಿಕ ಕೇಂದ್ರ ಸರ್ಕಾರವು ಹೊಸ ₹2000 ನೋಟನ್ನು ಪರಿಚಯಿಸಿತ್ತು. 2018-19ನೇ ಸಾಲಿನಲ್ಲಿ ₹2000 ನೋಟುಗಳ ಮುದ್ರಣವನ್ನು ಕೇಂದ್ರವು ಸ್ಥಗಿತಗೊಳಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X