ದೇಶ ಕಂಡ ಅತೀ ಭ್ರಷ್ಟ ಪ್ರಧಾನಿ ಮೋದಿ; ಕೇಜ್ರಿವಾಲ್‌ ವಾಗ್ದಾಳಿ

Date:

Advertisements
  • ಪ್ರಧಾನಿ ಮೋದಿ ನಾಯಕತ್ವದಲ್ಲಿ ದೇಶವನ್ನು ನಾಶಗೊಳಿಸಲಾಗುತ್ತಿದೆ ಎಂದ ದೆಹಲಿ ಸಿಎಂ
  • ಬಿಜೆಪಿಯಿಂದ ಹೊರಬಂದು ದೇಶವನ್ನು ರಕ್ಷಿಸಿ ಎಂದು ಕರೆಕೊಟ್ಟ ಅರವಿಂದ್‌ ಕೇಜ್ರಿವಾಲ್

ದೇಶದ ಇತಿಹಾಸದಲ್ಲೇ ಅತೀ ಭ್ರಷ್ಟ ಹಾಗೂ ಕಡಿಮೆ ಶಿಕ್ಷಣ ಹೊಂದಿರುವ ಪ್ರಧಾನಿಯನ್ನು ತಾವು ಇದುವರೆಗೂ ಕಂಡಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ವಾಗ್ದಾಳಿ ನಡೆಸಿದರು.

ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದ್ದರ ಕುರಿತು ದೆಹಲಿ ವಿಧಾನಸಭೆಯಲ್ಲಿ ಮಾತನಾಡಿದ ಅವರು, “ದೇಶ ಕಂಡ ಅತೀ ಭ್ರಷ್ಟ ಪ್ರಧಾನಿ ನರೇಂದ್ರ ಮೋದಿ. ಅಹಂಕಾರ ಅವರ ತಲೆಯ ಮೇಲೆ ಕೂತಿದೆ. 12ನೇ ತರಗತಿ ಪಾಸ್ ಆದ ವ್ಯಕ್ತಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ರಾಹುಲ್‌ ಅವರನ್ನು ಅನರ್ಹಗೊಳಿಸಿರುವುದರಿಂದ ಕಾಂಗ್ರೆಸ್ ಮಾತ್ರ ಹೋರಾಟ ಮಾಡಬೇಕಿಲ್ಲ. ಇದು ಪ್ರತಿಯೊಬ್ಬರ ಹೋರಾಟವಾಗಿದೆ. ಹೀಗಾಗಿ ಎಲ್ಲರೂ ಜೊತೆಯಾಗಿ ಪ್ರತಿಭಟಿಸಬೇಕು. ಓದು ಬರಹ ಇಲ್ಲದ ಪ್ರಧಾನಿಯಿಂದ ದೇಶವನ್ನು ರಕ್ಷಿಸುವ ಹೋರಾಟವಾಗಿದೆ. ಪ್ರಧಾನಿ ಪದವಿಗೆ ಮೋದಿ ಅಪಮಾನ ಮಾಡಿದ್ದಾರೆ” ಎಂದು ಟೀಕಿಸಿದರು.

Advertisements

“ಪ್ರಧಾನಿ ಮೋದಿ ನಾಯಕತ್ವದಲ್ಲಿ ದೇಶವನ್ನು ನಾಶಗೊಳಿಸಲಾಗುತ್ತಿದೆ. ದೇಶವನ್ನು ಹಾಳು ಮಾಡಲು ಇಚ್ಚಿಸುವವರು ಬಿಜೆಪಿಯಲ್ಲಿರಿ. ದೇಶವನ್ನು ರಕ್ಷಿಸುವವರು ಬಿಜೆಪಿಯಿಂದ ಹೊರಬನ್ನಿ. ರಾಷ್ಟ್ರವನ್ನು ಉಳಿಸಬೇಕಿದ್ದರೆ ಪಕ್ಷ ತೊರೆಯಿರಿ” ಎಂದು ಕಮಲ ನಾಯಕರಿಗೆ ಕರೆ ನೀಡಿದರು.  

“ಭಾರತ ಅಪಾಯದಲ್ಲಿದೆ. ಅಪಾಯದ ಸಂಚಿನಿಂದ ಪಾರು ಮಾಡಲು ರಾಷ್ಟ್ರದ 130 ಕೋಟಿ ಜನತೆ ಮುಂದೆ ಬರಬೇಕು. ಯಾವ ಪಕ್ಷ ಅಧಿಕಾರಕ್ಕೆ ಬಂದರೂ ಚಿಂತೆಯಿಲ್ಲ. ಆದರೆ ನಮ್ಮ ಪ್ರಜಾಪ್ರಭುತ್ವದ ಮೇಲಿನ ದಾಳಿ ಮತ್ತು ಅದಕ್ಕೆ ಕಳಂಕ ತರುತ್ತಿರುವುದು ಗಂಭಿರವಾದ ಬೆಳವಣಿಗೆ” ಎಂದು ಆತಂಕ ವ್ಯಕ್ತಪಡಿಸಿದರು.

ರಾಹುಲ್‌ ಗಾಂಧಿಯವರನ್ನು ಅನರ್ಹಗೊಳಿಸಿದ ಕೇಂದ್ರ ಸರ್ಕಾರದ ಪ್ರಜಾಸತ್ತಾತ್ಮಕ ವಿರೋಧಿ ನಡೆಯನ್ನು ವಿಪಕ್ಷಗಳು ಖಂಡಿಸಿದ್ದು, ದೇಶಾದ್ಯಂತ ಪ್ರತಿಭಟನೆಗೆ ಮುಂದಾಗಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X