ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಭೂಕಂಪ; ಹಾನಿ ಇಲ್ಲ

Date:

ದೇಶದ ಎರಡು ರಾಜ್ಯಗಳಲ್ಲಿ ಶುಕ್ರವಾರ (ಮಾರ್ಚ್‌ 24) ಬೆಳಿಗ್ಗೆ ಮಧ್ಯಮ ಪ್ರಮಾಣದ ಭೂಕಂಪ ಉಂಟಾಗಿದೆ. ಆದರೆ ಯಾವುದೇ ರೀತಿಯ ಹಾನಿ ಉಂಟಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮಧ್ಯಪ್ರದೇಶದ ಗ್ವಾಲಿಯರ್‌ ಬಳಿ ಬೆಳಿಗ್ಗೆ 10.31ರ ಸುಮಾರಿಗೆ ರಿಕ್ಟರ್‌ ಮಾಪಕದಲ್ಲಿ 4.0 ತೀವ್ರತೆಯ ಭೂಕಂಪ ದಾಖಲಾಗಿದೆ. ಛತ್ತೀಸ್‌ಗಢದ ಅಂಬಿಕಾಪುರದಲ್ಲಿ ಬೆಳಿಗ್ಗೆ 10.28ಕ್ಕೆ ಭೂಮಿ ಕಂಪಿಸಿದೆ.

ಮಧ್ಯಪ್ರದೇಶದ ಗ್ವಾಲಿಯರ್‌ನ ಆಗ್ನೇಯಕ್ಕೆ 28 ಕಿಮೀ ದೂರದಲ್ಲಿ ಅಕ್ಷಾಂಶ 26.01 ಮತ್ತು ರೇಖಾಂಶ 78.35ರ ನಡುವೆ ಭೂಕಂಪ ಉಂಟಾಗಿದೆ. ಇದು 10 ಕಿಮೀ ಆಳದಲ್ಲಿ ಕೇಂದ್ರೀಕೃತವಾಗಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್‌) ಹೇಳಿದೆ.

ಛತ್ತೀಸ್‌ಗಢದ ಅಂಬಿಕಾಪುರದಲ್ಲಿ 6 ಸೆಕೆಂಡುಗಳ ಕಾಲ ಭೂಮಿ ನಡುಗಿದೆ. ಇದರಿಂದ ಭಯಭೀತರಾದ ಪ್ರದೇಶದ ನಿವಾಸಿಗಳು ಮನೆಯಿಂದ ಹೊರಗೆ ಓಡಿದ್ದಾರೆ.

ಅಂಬಿಕಾಪುರದಿಂದ 12 ಕಿಮೀ ದೂರದಲ್ಲಿ ಅಕ್ಷಾಂಶ 23.08 ಮತ್ತು ರೇಖಾಂಶ 83.08ರ ನಡುವೆ ಭೂಕಂಪ ಸಂಭವಿಸಿದೆ. ಇದು 10 ಕಿಮೀ ಆಳದಲ್ಲಿತ್ತು ಎಂದು ಎನ್‌ಸಿಎಸ್‌ ಟ್ವೀಟ್‌ ಮಾಡಿದೆ.

ಆದರೆ ಯಾವುದೇ ಜೀವ ಹಾನಿ, ಆಸ್ತಿ ನಷ್ಟವಾದ ಬಗ್ಗೆ ವರದಿಯಾಗಿಲ್ಲ.  

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

10 ನಿಮಿಷದ ಆಝಾನ್‌ನಿಂದ ಶಬ್ದ ಮಾಲಿನ್ಯ ಎನ್ನುವುದಾದರೆ ಡಿಜೆ ಕತೆ ಏನು?: ಗುಜರಾತ್ ಹೈಕೋರ್ಟ್

'ಹತ್ತು ನಿಮಿಷದ ಆಝಾನ್‌ನಿಂದ ಶಬ್ದ ಮಾಲಿನ್ಯ ಎನ್ನುವುದಾದರೆ ನಿಮ್ಮ ಡಿಜೆ, ಭಜನೆಗಳ...

ಅವಶೇಷಗಳು ಸುರಂಗದೊಳಗೆ ಬಿದ್ದಾಗ ಏನಾಯಿತು?: ಘಟನೆ ಬಿಚ್ಚಿಟ್ಟ ಸಿಲುಕಿಕೊಂಡಿದ್ದ ಕಾರ್ಮಿಕ

ಉತ್ತರಾಖಂಡದ ಉತ್ತರಕಾಶಿಯಲ್ಲಿ ಸಿಲ್ಕ್ಯಾರಾದಲ್ಲಿ ಸುರಂಗ ಕುಸಿದು ಆತಂಕ ಸೃಷ್ಟಿಯಾಗಿದ್ದು ಕೊನೆಗೂ ನಿವಾರಣೆಯಾಗಿದೆ....

17 ದಿನಗಳ ಕಾರ್ಯಾಚರಣೆ ಯಶಸ್ವಿ: ಸುರಂಗದಲ್ಲಿ ಸಿಲುಕಿಕೊಂಡಿದ್ದ 41 ಕಾರ್ಮಿಕರ ರಕ್ಷಣೆ

ಕಳೆದ 17 ದಿನಗಳಿಂದ ಉತ್ತರಾಖಂಡ ರಾಜ್ಯದ ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರಾದ ಸುರಂಗದಲ್ಲಿ...

ಮಣಿಪುರ ಫೈಲ್ಸ್ ಲೇಖಕ ಪ್ರಣಬಾನಂದ ದಾಸ್ ವಿರುದ್ಧ ಎಫ್ಐಆರ್ ದಾಖಲು

ಈಶಾನ್ಯ ರಾಜ್ಯದಲ್ಲಿನ ಜನಾಂಗೀಯ ಹಿಂಸಾಚಾರವನ್ನು ಆಧರಿಸಿದ 'ಮಣಿಪುರ ಫೈಲ್ಸ್' ಕೃತಿಯ ಮೂಲಕ...